AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಮ್ರಾನ್ ಖಾನ್​​ನ್ನು ಮಾತ್ರ ಕೊಲ್ಲಲು ಬಂದಿದ್ದೆ: ಪಾಕ್ ಶೂಟರ್ ಹೇಳಿಕೆ

ಸಿರ್ಫ್ ಇಮ್ರಾನ್ ಖಾನ್ ಕೋ ಮಾರ್ ಥಾ (ನಾನು ಇಮ್ರಾನ್ ಖಾನ್ ಅವರನ್ನು ಮಾತ್ರ ಕೊಲ್ಲಲು ಬಂದಿದ್ದೇನೆ)" ಎಂದು ಆರೋಪಿ ಶೂಟರ್ ಕ್ಯಾಮೆರಾ ಮುಂದೆ ಹೇಳಿದ್ದಾನೆ

ಇಮ್ರಾನ್ ಖಾನ್​​ನ್ನು ಮಾತ್ರ ಕೊಲ್ಲಲು ಬಂದಿದ್ದೆ: ಪಾಕ್ ಶೂಟರ್ ಹೇಳಿಕೆ
TV9 Web
| Edited By: |

Updated on:Nov 03, 2022 | 8:08 PM

Share

ಇಂದು ಸಂಜೆ (ಗುರವಾರ)ರ್ಯಾಲಿಯಲ್ಲಿ ಇಮ್ರಾನ್ ಖಾನ್ (Imran khan) ಮೇಲೆ ಗುಂಡು ಹಾರಿಸಿದ ವ್ಯಕ್ತಿ, ಪಾಕಿಸ್ತಾನದ ಮಾಜಿ ಪ್ರಧಾನಿಯನ್ನು ಕೊಲ್ಲಲು ಬಂದಿದ್ದೇನೆ ಏಕೆಂದರೆ ಅವರು ಜನರನ್ನು ಹಾದಿ ತಪ್ಪಿಸಿದ್ದಾರೆ ಎಂದು ಹೇಳಿದ್ದಾನೆ. ಸಿರ್ಫ್ ಇಮ್ರಾನ್ ಖಾನ್ ಕೋ ಮಾರ್ ಥಾ (ನಾನು ಇಮ್ರಾನ್ ಖಾನ್ ಅವರನ್ನು ಮಾತ್ರ ಕೊಲ್ಲಲು ಬಂದಿದ್ದೇನೆ)” ಎಂದು ಆರೋಪಿ ಶೂಟರ್ ಕ್ಯಾಮೆರಾ ಮುಂದೆ ಹೇಳಿದ್ದಾನೆ.  ತಾನು ಗುಜ್ರಾನ್‌ವಾಲಾಗೆ ಬೈಕ್‌ನಲ್ಲಿ ಬಂದಿದ್ದು, ವಾಹನವನ್ನು ತಮ್ಮ ಚಿಕ್ಕಪ್ಪನ ಸ್ಥಳದಲ್ಲಿ ಬಿಟ್ಟಿರುವುದಾಗಿ ಅವನು ಹೇಳಿದ್ದಾನೆ .ಇಬ್ಬರು ಶೂಟರ್‌ಗಳು ಇದ್ದರು ಎಂದು ವರದಿಗಳು ಸೂಚಿಸುತ್ತವೆ, ಒಬ್ಬ ಪಿಸ್ತೂಲ್ ಮತ್ತು ಇನ್ನೊಬ್ಬ ಆಟೋಮ್ಯಾಟಿಕ್ ರೈಫಲ್ ಹೊಂದಿದ್ದರು. ರಾಜಕೀಯ ರ್ಯಾಲಿಯಲ್ಲಿ ಇಮ್ರಾನ್ ಖಾನ್ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಜೀರಾಬಾದ್‌ನಲ್ಲಿ ಗುರುವಾರ ನಡೆದ ನೈಜ ಸ್ವಾತಂತ್ರ್ಯ ರ್ಯಾಲಿಯಲ್ಲಿ ಗುಂಡು ಹಾರಿಸಲಾಗಿದೆ. ARY ನ್ಯೂಸ್ ಪ್ರಕಾರ, ಜಫರಾಲಿ ಖಾನ್ ಚೌಕ್‌ನಲ್ಲಿ ಈ ಘಟನೆ ನಡೆದಿದೆ.

ಘಟನೆಯಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದಾರೆ. ಘಟನೆಯ ನಂತರ ಇಮ್ರಾನ್ ಖಾನ್ ಅವರನ್ನು ಕಂಟೈನರ್‌ನಿಂದ ಬುಲೆಟ್ ಪ್ರೂಫ್ ವಾಹನಕ್ಕೆ ವರ್ಗಾಯಿಸಲಾಯಿತು. ಗುಂಡಿನ ದಾಳಿಯ ನಂತರ ಇಮ್ರಾನ್ ಖಾನ್ ಅವರನ್ನು ಬುಲೆಟ್ ಪ್ರೂಫ್ ವಾಹನಕ್ಕೆ ವರ್ಗಾಯಿಸಿರುವುದನ್ನು ರ್ಯಾಲಿಯ ವಿಡಿಯೋಗಳು ತೋರಿಸಿವೆ. ರ್ಯಾಲಿಯಲ್ಲಿ ಅವರು ತೆರೆದ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಪಿಟಿಐ ಮುಖಂಡ ಫೈಸಲ್ ಜಾವೇದ್ ಕೂಡ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಾಕಿಸ್ತಾನದ ಮಾಜಿ ಪ್ರಧಾನಿ ಶುಕ್ರವಾರದಿಂದ ಲಾಹೋರ್‌ನಿಂದ ರಾಜಧಾನಿ ಇಸ್ಲಾಮಾಬಾದ್ ಕಡೆಗೆ ಮೆರವಣಿಗೆಯನ್ನು ನಡೆಸುತ್ತಿದ್ದಾರೆ, ಏಪ್ರಿಲ್‌ನಲ್ಲಿ ಅಧಿಕಾರದಿಂದ ಹೊರಹಾಕಲ್ಪಟ್ಟ ನಂತರ ಹೊಸ ಚುನಾವಣೆಗಾಗಿ ಪ್ರಚಾರ ಮಾಡುತ್ತಿದ್ದಾರೆ.

“ಇದು ಅವನನ್ನು ಕೊಲ್ಲಲು, ಹತ್ಯೆ ಮಾಡಲು ನಡೆಸಿದ ಪ್ರಯತ್ನ” ಎಂದು ಅವರ ಹಿರಿಯ ಸಹಾಯಕ ರವೂಫ್ ಹಸನ್ ಎಎಫ್‌ಪಿಗೆ ತಿಳಿಸಿದ್ದಾರೆ.

ದಾಳಿಕೋರನೊಬ್ಬನಿಗೆ ಗುಂಡು ಹಾರಿಸಲಾಗಿದ್ದು, ಎರಡನೆಯವನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಹಸನ್ ಹೇಳಿದ್ದಾರೆ.

Published On - 7:33 pm, Thu, 3 November 22

Follow Us
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ