AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಮ್ರಾನ್ ಖಾನ್​​ನ್ನು ಮಾತ್ರ ಕೊಲ್ಲಲು ಬಂದಿದ್ದೆ: ಪಾಕ್ ಶೂಟರ್ ಹೇಳಿಕೆ

ಸಿರ್ಫ್ ಇಮ್ರಾನ್ ಖಾನ್ ಕೋ ಮಾರ್ ಥಾ (ನಾನು ಇಮ್ರಾನ್ ಖಾನ್ ಅವರನ್ನು ಮಾತ್ರ ಕೊಲ್ಲಲು ಬಂದಿದ್ದೇನೆ)" ಎಂದು ಆರೋಪಿ ಶೂಟರ್ ಕ್ಯಾಮೆರಾ ಮುಂದೆ ಹೇಳಿದ್ದಾನೆ

ಇಮ್ರಾನ್ ಖಾನ್​​ನ್ನು ಮಾತ್ರ ಕೊಲ್ಲಲು ಬಂದಿದ್ದೆ: ಪಾಕ್ ಶೂಟರ್ ಹೇಳಿಕೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Nov 03, 2022 | 8:08 PM

Share

ಇಂದು ಸಂಜೆ (ಗುರವಾರ)ರ್ಯಾಲಿಯಲ್ಲಿ ಇಮ್ರಾನ್ ಖಾನ್ (Imran khan) ಮೇಲೆ ಗುಂಡು ಹಾರಿಸಿದ ವ್ಯಕ್ತಿ, ಪಾಕಿಸ್ತಾನದ ಮಾಜಿ ಪ್ರಧಾನಿಯನ್ನು ಕೊಲ್ಲಲು ಬಂದಿದ್ದೇನೆ ಏಕೆಂದರೆ ಅವರು ಜನರನ್ನು ಹಾದಿ ತಪ್ಪಿಸಿದ್ದಾರೆ ಎಂದು ಹೇಳಿದ್ದಾನೆ. ಸಿರ್ಫ್ ಇಮ್ರಾನ್ ಖಾನ್ ಕೋ ಮಾರ್ ಥಾ (ನಾನು ಇಮ್ರಾನ್ ಖಾನ್ ಅವರನ್ನು ಮಾತ್ರ ಕೊಲ್ಲಲು ಬಂದಿದ್ದೇನೆ)” ಎಂದು ಆರೋಪಿ ಶೂಟರ್ ಕ್ಯಾಮೆರಾ ಮುಂದೆ ಹೇಳಿದ್ದಾನೆ.  ತಾನು ಗುಜ್ರಾನ್‌ವಾಲಾಗೆ ಬೈಕ್‌ನಲ್ಲಿ ಬಂದಿದ್ದು, ವಾಹನವನ್ನು ತಮ್ಮ ಚಿಕ್ಕಪ್ಪನ ಸ್ಥಳದಲ್ಲಿ ಬಿಟ್ಟಿರುವುದಾಗಿ ಅವನು ಹೇಳಿದ್ದಾನೆ .ಇಬ್ಬರು ಶೂಟರ್‌ಗಳು ಇದ್ದರು ಎಂದು ವರದಿಗಳು ಸೂಚಿಸುತ್ತವೆ, ಒಬ್ಬ ಪಿಸ್ತೂಲ್ ಮತ್ತು ಇನ್ನೊಬ್ಬ ಆಟೋಮ್ಯಾಟಿಕ್ ರೈಫಲ್ ಹೊಂದಿದ್ದರು. ರಾಜಕೀಯ ರ್ಯಾಲಿಯಲ್ಲಿ ಇಮ್ರಾನ್ ಖಾನ್ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಜೀರಾಬಾದ್‌ನಲ್ಲಿ ಗುರುವಾರ ನಡೆದ ನೈಜ ಸ್ವಾತಂತ್ರ್ಯ ರ್ಯಾಲಿಯಲ್ಲಿ ಗುಂಡು ಹಾರಿಸಲಾಗಿದೆ. ARY ನ್ಯೂಸ್ ಪ್ರಕಾರ, ಜಫರಾಲಿ ಖಾನ್ ಚೌಕ್‌ನಲ್ಲಿ ಈ ಘಟನೆ ನಡೆದಿದೆ.

ಘಟನೆಯಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದಾರೆ. ಘಟನೆಯ ನಂತರ ಇಮ್ರಾನ್ ಖಾನ್ ಅವರನ್ನು ಕಂಟೈನರ್‌ನಿಂದ ಬುಲೆಟ್ ಪ್ರೂಫ್ ವಾಹನಕ್ಕೆ ವರ್ಗಾಯಿಸಲಾಯಿತು. ಗುಂಡಿನ ದಾಳಿಯ ನಂತರ ಇಮ್ರಾನ್ ಖಾನ್ ಅವರನ್ನು ಬುಲೆಟ್ ಪ್ರೂಫ್ ವಾಹನಕ್ಕೆ ವರ್ಗಾಯಿಸಿರುವುದನ್ನು ರ್ಯಾಲಿಯ ವಿಡಿಯೋಗಳು ತೋರಿಸಿವೆ. ರ್ಯಾಲಿಯಲ್ಲಿ ಅವರು ತೆರೆದ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಪಿಟಿಐ ಮುಖಂಡ ಫೈಸಲ್ ಜಾವೇದ್ ಕೂಡ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಾಕಿಸ್ತಾನದ ಮಾಜಿ ಪ್ರಧಾನಿ ಶುಕ್ರವಾರದಿಂದ ಲಾಹೋರ್‌ನಿಂದ ರಾಜಧಾನಿ ಇಸ್ಲಾಮಾಬಾದ್ ಕಡೆಗೆ ಮೆರವಣಿಗೆಯನ್ನು ನಡೆಸುತ್ತಿದ್ದಾರೆ, ಏಪ್ರಿಲ್‌ನಲ್ಲಿ ಅಧಿಕಾರದಿಂದ ಹೊರಹಾಕಲ್ಪಟ್ಟ ನಂತರ ಹೊಸ ಚುನಾವಣೆಗಾಗಿ ಪ್ರಚಾರ ಮಾಡುತ್ತಿದ್ದಾರೆ.

“ಇದು ಅವನನ್ನು ಕೊಲ್ಲಲು, ಹತ್ಯೆ ಮಾಡಲು ನಡೆಸಿದ ಪ್ರಯತ್ನ” ಎಂದು ಅವರ ಹಿರಿಯ ಸಹಾಯಕ ರವೂಫ್ ಹಸನ್ ಎಎಫ್‌ಪಿಗೆ ತಿಳಿಸಿದ್ದಾರೆ.

ದಾಳಿಕೋರನೊಬ್ಬನಿಗೆ ಗುಂಡು ಹಾರಿಸಲಾಗಿದ್ದು, ಎರಡನೆಯವನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಹಸನ್ ಹೇಳಿದ್ದಾರೆ.

Published On - 7:33 pm, Thu, 3 November 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?