AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಇನ್ಮುಂದೆ ತುಂಬ ಡೇಂಜರಸ್​​ ಮನುಷ್ಯ ಎಂದ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್​

ತಾನು ಅಧಿಕಾರ ಕಳೆದುಕೊಳ್ಳಲು ವಿದೇಶಿ ಕುತಂತ್ರ ಕಾರಣ ಎಂದೇ ಆರೋಪಿಸುತ್ತಿರುವ ಇಮ್ರಾನ್ ಖಾನ್​, ಈಗಿನ ಸರ್ಕಾರ ಆಮದು ಮಾಡಿಕೊಂಡಿದ್ದು. ಆಮದು ಮಾಡಿಕೊಂಡ ಸರ್ಕಾರವನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

ನಾನು ಇನ್ಮುಂದೆ ತುಂಬ ಡೇಂಜರಸ್​​ ಮನುಷ್ಯ ಎಂದ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್​
ಇಮ್ರಾನ್ ಖಾನ್​
TV9 Web
| Edited By: |

Updated on: Apr 14, 2022 | 10:49 AM

Share

ಪಿಟಿಐ ಪಕ್ಷದ ನಾಯಕ ಇಮ್ರಾನ್ ಖಾನ್ ಪಾಕಿಸ್ತಾನದ ಪ್ರಧಾನಿ ಹುದ್ದೆಯಿಂದ ಕೆಳಗಿಳಿದಿದ್ದಾರೆ. ಹೀಗೆ ಅಧಿಕಾರ ಕಳೆದುಕೊಂಡ ಬಳಿಕ ಮೊದಲ ರ್ಯಾಲಿಯನ್ನು ಪೇಶಾವರದಲ್ಲಿ ನಡೆಸಿದ ಅವರು, ನಾನು ಪ್ರಧಾನಿಯಲ್ಲಿ ಹುದ್ದೆಯಲ್ಲಿ ಇದ್ದಾದ ಅಪಾಯಕಾರಿ ಆಗಿರಲಿಲ್ಲ. ಆಗ ನಾನು ಸರ್ಕಾರದ ಭಾಗವಾಗಿದ್ದೆ. ಆದರೆ ಈಗ ಅಧಿಕಾರ ಕಳೆದುಕೊಂಡ ಮೇಲೆ ಹಗುರವಾಗಿ ಪರಿಣಮಿಸಬೇಡಿ, ನಾನು ತುಂಬ ಅಪಾಯಕಾರಿ ಮನುಷ್ಯ ಎಂದು ಹೇಳಿದ್ದಾರೆ.  ಪಾಕಿಸ್ತಾನದಲ್ಲಿ ನಡೆದ ರಾಜಕೀಯ ಹೈಡ್ರಾಮಾ ಗೊತ್ತೇ ಇದೆ.  ಅಲ್ಲಿ ಇಮ್ರಾನ್ ಖಾನ್ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ್ದರು. ಬಳಿಕ ಅದನ್ನು ಉಪ ಸಭಾಪತಿ ಖಾಸಿಂ ಸೂರಿ ವಜಾಗೊಳಿಸಿದ್ದರು. ಆದರೆ ಸುಪ್ರೀಂಕೋರ್ಟ್ ತೀರ್ಪು ನೀಡಿ, ಖಾಸಿಂ ಸೂರಿ ತೆಗೆದುಕೊಂಡ ನಿರ್ಣಯ ತಪ್ಪು ಎಂದು ಹೇಳಿ, ಕೂಡಲೇ ಇಮ್ರಾನ್ ಖಾನ್ ಬಹುಮತ ಸಾಬೀತುಪಡಿಸಬೇಕು ಎಂದು ಹೇಳಿದ್ದರು. ಅದರಂತೆ ಇಮ್ರಾನ್ ಖಾನ್​ ರಾಷ್ಟ್ರೀಯ ಸಂಸತ್ತಿನಲ್ಲಿ ಬಹುಮತ ಸಾಬೀತು ಪಡಿಸಲು ಮುಂದಾದರೂ ಕೂಡ ಅದು ಸಾಧ್ಯವಾಗಲಿಲ್ಲ. ಅಲ್ಲೀಗ ಪಾಕಿಸ್ತಾನ ಮುಸ್ಲಿಂ ಲೀಗ್​ ನಾಯಕ ಶಹಬಾಜ್ ಷರೀಫ್​ ಪ್ರಧಾನಿಯಾಗಿದ್ದಾರೆ.

ತಾನು ಅಧಿಕಾರ ಕಳೆದುಕೊಳ್ಳಲು ವಿದೇಶಿ ಕುತಂತ್ರ ಕಾರಣ ಎಂದೇ ಆರೋಪಿಸುತ್ತಿರುವ ಇಮ್ರಾನ್ ಖಾನ್​, ಈಗಿನ ಸರ್ಕಾರ ಆಮದು ಮಾಡಿಕೊಂಡಿದ್ದಷ್ಟೇ ಎಂದು ಹೇಳಿದ್ದಾರೆ. ಹೀಗೆ ಆಮದು ಮಾಡಿಕೊಂಡ ಸರ್ಕಾರವನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇದನ್ನು ಜನರೂ ವಿರೋಧಿಸುತ್ತಿದ್ದಾರೆ ಎಂದು ರ್ಯಾಲಿಯ ವೇಳೆ ಹೇಳಿದರು. ಇಷ್ಟು ವರ್ಷ ಪಾಕಿಸ್ತಾನದಲ್ಲಿ ಯಾವುದೇ ನಾಯಕ ಹುದ್ದೆಯಿಂದ ಕೆಳಗಿಳಿದಾಗ, ಅವರು ದೇಶವನ್ನು ಬಿಟ್ಟು ಓಡಿಹೋದಾಗ ಜನರು ಸಂಭ್ರಮ ಪಡುತ್ತಿದ್ದರು. ಆದರೆ ನಾನು ಅಧಿಕಾರದಿಂದ ಕೆಳಗೆ ಇಳಿದ ಬಳಿಕ ಸಾಮೂಹಿಕ ಪ್ರತಿಭಟನೆಗಳು ಶುರುವಾಗಿದೆ. ಇದು ನನಗಿರುವ ಜನ ಬೆಂಬಲ ತಿಳಿಸುತ್ತದೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಇತಿಹಾಸದಲ್ಲಿಯೇ ಅವಿಶ್ವಾಸ ನಿರ್ಣಯ ಮಂಡನೆಯಾಗಿ ಹುದ್ದೆಯಿಂದ ವಜಾಗೊಂಡ ಮೊದಲ ಪ್ರಧಾನಮಂತ್ರಿ ಈ ಇಮ್ರಾನ್ ಖಾನ್​. ಪೇಶಾವರದ ರ್ಯಾಲಿಯಲ್ಲಿ ಮಾತನಾಡಿದ ಅವರು, ನಿಜಕ್ಕೂ ಪಾಕಿಸ್ತಾನದ ಸುಪ್ರೀಂಕೋರ್ಟ್​ ಸ್ವತಂತ್ರ್ಯವಾಗಿ ತೀರ್ಪು ನೀಡಿತೇ ಎಂಬುದು ಪ್ರಶ್ನೆ.ನಾನು ಯಾವುದೇ ಕಾನೂನನ್ನೂ ಮೀರಿಲ್ಲ. ಇಡೀ ನನ್ನ ರಾಜಕೀಯ ವೃತ್ತಿ ಜೀವನದಲ್ಲಿ ಜನರನ್ನು ಎಂದಿಗೂ ಸಂಸ್ಥೆಯ, ಸರ್ಕಾರದ ವಿರುದ್ಧ ಎತ್ತಿಕಟ್ಟಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂತೋಷ್ ಆತ್ಮಹತ್ಯೆ ಪ್ರಕರಣ: ಪ್ರಾಥಮಿಕ ತನಿಖೆ ಬಳಿಕವಷ್ಟೇ ಮುಂದಿನ‌ ನಿರ್ಧಾರ ಎಂದ ಸಿಎಂ ಬೊಮ್ಮಾಯಿ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​