ನಾನು ಇನ್ಮುಂದೆ ತುಂಬ ಡೇಂಜರಸ್​​ ಮನುಷ್ಯ ಎಂದ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್​

ತಾನು ಅಧಿಕಾರ ಕಳೆದುಕೊಳ್ಳಲು ವಿದೇಶಿ ಕುತಂತ್ರ ಕಾರಣ ಎಂದೇ ಆರೋಪಿಸುತ್ತಿರುವ ಇಮ್ರಾನ್ ಖಾನ್​, ಈಗಿನ ಸರ್ಕಾರ ಆಮದು ಮಾಡಿಕೊಂಡಿದ್ದು. ಆಮದು ಮಾಡಿಕೊಂಡ ಸರ್ಕಾರವನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

ನಾನು ಇನ್ಮುಂದೆ ತುಂಬ ಡೇಂಜರಸ್​​ ಮನುಷ್ಯ ಎಂದ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್​
ಇಮ್ರಾನ್ ಖಾನ್​
Follow us
| Updated By: Lakshmi Hegde

Updated on: Apr 14, 2022 | 10:49 AM

ಪಿಟಿಐ ಪಕ್ಷದ ನಾಯಕ ಇಮ್ರಾನ್ ಖಾನ್ ಪಾಕಿಸ್ತಾನದ ಪ್ರಧಾನಿ ಹುದ್ದೆಯಿಂದ ಕೆಳಗಿಳಿದಿದ್ದಾರೆ. ಹೀಗೆ ಅಧಿಕಾರ ಕಳೆದುಕೊಂಡ ಬಳಿಕ ಮೊದಲ ರ್ಯಾಲಿಯನ್ನು ಪೇಶಾವರದಲ್ಲಿ ನಡೆಸಿದ ಅವರು, ನಾನು ಪ್ರಧಾನಿಯಲ್ಲಿ ಹುದ್ದೆಯಲ್ಲಿ ಇದ್ದಾದ ಅಪಾಯಕಾರಿ ಆಗಿರಲಿಲ್ಲ. ಆಗ ನಾನು ಸರ್ಕಾರದ ಭಾಗವಾಗಿದ್ದೆ. ಆದರೆ ಈಗ ಅಧಿಕಾರ ಕಳೆದುಕೊಂಡ ಮೇಲೆ ಹಗುರವಾಗಿ ಪರಿಣಮಿಸಬೇಡಿ, ನಾನು ತುಂಬ ಅಪಾಯಕಾರಿ ಮನುಷ್ಯ ಎಂದು ಹೇಳಿದ್ದಾರೆ.  ಪಾಕಿಸ್ತಾನದಲ್ಲಿ ನಡೆದ ರಾಜಕೀಯ ಹೈಡ್ರಾಮಾ ಗೊತ್ತೇ ಇದೆ.  ಅಲ್ಲಿ ಇಮ್ರಾನ್ ಖಾನ್ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ್ದರು. ಬಳಿಕ ಅದನ್ನು ಉಪ ಸಭಾಪತಿ ಖಾಸಿಂ ಸೂರಿ ವಜಾಗೊಳಿಸಿದ್ದರು. ಆದರೆ ಸುಪ್ರೀಂಕೋರ್ಟ್ ತೀರ್ಪು ನೀಡಿ, ಖಾಸಿಂ ಸೂರಿ ತೆಗೆದುಕೊಂಡ ನಿರ್ಣಯ ತಪ್ಪು ಎಂದು ಹೇಳಿ, ಕೂಡಲೇ ಇಮ್ರಾನ್ ಖಾನ್ ಬಹುಮತ ಸಾಬೀತುಪಡಿಸಬೇಕು ಎಂದು ಹೇಳಿದ್ದರು. ಅದರಂತೆ ಇಮ್ರಾನ್ ಖಾನ್​ ರಾಷ್ಟ್ರೀಯ ಸಂಸತ್ತಿನಲ್ಲಿ ಬಹುಮತ ಸಾಬೀತು ಪಡಿಸಲು ಮುಂದಾದರೂ ಕೂಡ ಅದು ಸಾಧ್ಯವಾಗಲಿಲ್ಲ. ಅಲ್ಲೀಗ ಪಾಕಿಸ್ತಾನ ಮುಸ್ಲಿಂ ಲೀಗ್​ ನಾಯಕ ಶಹಬಾಜ್ ಷರೀಫ್​ ಪ್ರಧಾನಿಯಾಗಿದ್ದಾರೆ.

ತಾನು ಅಧಿಕಾರ ಕಳೆದುಕೊಳ್ಳಲು ವಿದೇಶಿ ಕುತಂತ್ರ ಕಾರಣ ಎಂದೇ ಆರೋಪಿಸುತ್ತಿರುವ ಇಮ್ರಾನ್ ಖಾನ್​, ಈಗಿನ ಸರ್ಕಾರ ಆಮದು ಮಾಡಿಕೊಂಡಿದ್ದಷ್ಟೇ ಎಂದು ಹೇಳಿದ್ದಾರೆ. ಹೀಗೆ ಆಮದು ಮಾಡಿಕೊಂಡ ಸರ್ಕಾರವನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇದನ್ನು ಜನರೂ ವಿರೋಧಿಸುತ್ತಿದ್ದಾರೆ ಎಂದು ರ್ಯಾಲಿಯ ವೇಳೆ ಹೇಳಿದರು. ಇಷ್ಟು ವರ್ಷ ಪಾಕಿಸ್ತಾನದಲ್ಲಿ ಯಾವುದೇ ನಾಯಕ ಹುದ್ದೆಯಿಂದ ಕೆಳಗಿಳಿದಾಗ, ಅವರು ದೇಶವನ್ನು ಬಿಟ್ಟು ಓಡಿಹೋದಾಗ ಜನರು ಸಂಭ್ರಮ ಪಡುತ್ತಿದ್ದರು. ಆದರೆ ನಾನು ಅಧಿಕಾರದಿಂದ ಕೆಳಗೆ ಇಳಿದ ಬಳಿಕ ಸಾಮೂಹಿಕ ಪ್ರತಿಭಟನೆಗಳು ಶುರುವಾಗಿದೆ. ಇದು ನನಗಿರುವ ಜನ ಬೆಂಬಲ ತಿಳಿಸುತ್ತದೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಇತಿಹಾಸದಲ್ಲಿಯೇ ಅವಿಶ್ವಾಸ ನಿರ್ಣಯ ಮಂಡನೆಯಾಗಿ ಹುದ್ದೆಯಿಂದ ವಜಾಗೊಂಡ ಮೊದಲ ಪ್ರಧಾನಮಂತ್ರಿ ಈ ಇಮ್ರಾನ್ ಖಾನ್​. ಪೇಶಾವರದ ರ್ಯಾಲಿಯಲ್ಲಿ ಮಾತನಾಡಿದ ಅವರು, ನಿಜಕ್ಕೂ ಪಾಕಿಸ್ತಾನದ ಸುಪ್ರೀಂಕೋರ್ಟ್​ ಸ್ವತಂತ್ರ್ಯವಾಗಿ ತೀರ್ಪು ನೀಡಿತೇ ಎಂಬುದು ಪ್ರಶ್ನೆ.ನಾನು ಯಾವುದೇ ಕಾನೂನನ್ನೂ ಮೀರಿಲ್ಲ. ಇಡೀ ನನ್ನ ರಾಜಕೀಯ ವೃತ್ತಿ ಜೀವನದಲ್ಲಿ ಜನರನ್ನು ಎಂದಿಗೂ ಸಂಸ್ಥೆಯ, ಸರ್ಕಾರದ ವಿರುದ್ಧ ಎತ್ತಿಕಟ್ಟಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂತೋಷ್ ಆತ್ಮಹತ್ಯೆ ಪ್ರಕರಣ: ಪ್ರಾಥಮಿಕ ತನಿಖೆ ಬಳಿಕವಷ್ಟೇ ಮುಂದಿನ‌ ನಿರ್ಧಾರ ಎಂದ ಸಿಎಂ ಬೊಮ್ಮಾಯಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ