AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಮಾಸ್​ ಉಗ್ರರ ಅಡಗುತಾಣ ಪತ್ತೆ ಮಾಡಿದ ಇಸ್ರೇಲ್ ಸೈನಿಕರು, ಸುರಂಗದಲ್ಲಿ ದೀರ್ಘಕಾಲ ಉಳಿಯುವ ಪ್ಯ್ಲಾನ್ ಅವರದ್ದಾಗಿತ್ತು

ಇಸ್ರೇಲ್(Israel) ಮತ್ತು ಹಮಾಸ್(Hamas)​ ನಡುವೆ ನಡೆಯುತ್ತಿರುವ ಯುದ್ಧ 34ನೇ ದಿನಕ್ಕೆ ಕಾಲಿಟ್ಟಿದೆ. ಅಕ್ಟೋಬರ್ 7 ರಂದು ಇಸ್ರೇಲ್​ ಮೇಲೆ ಹಮಾಸ್ ನಡೆಸಿದ ದಾಳಿಯ ಬಳಿಕ ಸಂಘರ್ಷ ಮುಂದುವರೆದಿದೆ. ಗಾಜಾ(Gaza)) ಪಟ್ಟಿಯಲ್ಲಿ ಇಸ್ರೇಲ್ ವಾಯು ಮತ್ತು ನೆಲದ ದಾಳಿಯನ್ನು ಮುಂದುವರೆಸಿದೆ ಮತ್ತು ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ.

ಹಮಾಸ್​ ಉಗ್ರರ ಅಡಗುತಾಣ ಪತ್ತೆ ಮಾಡಿದ ಇಸ್ರೇಲ್ ಸೈನಿಕರು, ಸುರಂಗದಲ್ಲಿ ದೀರ್ಘಕಾಲ ಉಳಿಯುವ ಪ್ಯ್ಲಾನ್ ಅವರದ್ದಾಗಿತ್ತು
ಸುರಂಗ
ನಯನಾ ರಾಜೀವ್
|

Updated on: Nov 09, 2023 | 11:14 AM

Share

ಇಸ್ರೇಲ್(Israel) ಮತ್ತು ಹಮಾಸ್(Hamas)​ ನಡುವೆ ನಡೆಯುತ್ತಿರುವ ಯುದ್ಧ 34ನೇ ದಿನಕ್ಕೆ ಕಾಲಿಟ್ಟಿದೆ. ಅಕ್ಟೋಬರ್ 7 ರಂದು ಇಸ್ರೇಲ್​ ಮೇಲೆ ಹಮಾಸ್ ನಡೆಸಿದ ದಾಳಿಯ ಬಳಿಕ ಸಂಘರ್ಷ ಮುಂದುವರೆದಿದೆ. ಗಾಜಾ(Gaza)) ಪಟ್ಟಿಯಲ್ಲಿ ಇಸ್ರೇಲ್ ವಾಯು ಮತ್ತು ನೆಲದ ದಾಳಿಯನ್ನು ಮುಂದುವರೆಸಿದೆ ಮತ್ತು ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ.

ಏತನ್ಮಧ್ಯೆ ಇಸ್ರೇಲ್ ರಕ್ಷಣಾ ಪಡೆಗಳು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿವೆ. ಈ ವಿಡಿಯೋದಲ್ಲಿ ಸುರಂಗವೊಂದು ಕಂಡುಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಬಿಡುಗಡೆ ಮಾಡುವ ಮೂಲಕ ಇಸ್ರೇಲಿ ಸೇನೆ ಈ ಸುರಂಗಗಳಲ್ಲಿ ಹಮಾಸ್ ಉಗ್ರರು ಅಡಗಿಕೊಂಡಿದ್ದಾರೆ ಎಂದು ಹೇಳಿಕೊಂಡಿದೆ.

ಸುರಂಗಗಳಲ್ಲಿ ನೀರು ಹಾಗೂ ಆಮ್ಲಜನಕದ ನಿಕ್ಷೇಪಗಳಿವೆ, ಅದನ್ನು ನೋಡಿದರೆ ದೀರ್ಘಕಾಲ ಉಗ್ರರು ಇಲ್ಲಿಯೇ ಉಳಿದುಕೊಳ್ಳಲು ಯೋಜನೆ ರೂಪಿಸಿದಂತೆ ಕಾಣುತ್ತದೆ ಎಂದಿದ್ದಾರೆ.

ಮತ್ತಷ್ಟು ಓದಿ: ಹಮಾಸ್ ಉಗ್ರರಿಗೆ ಜಯ ಸಿಗಲಿ ಎಂದ ಮಂಗಳೂರಿನ ಝಾಕಿರ್; ವಿಡಿಯೋ ವೈರಲ್​​

ಯುದ್ಧದ ಆರಂಭದಿಂದಲೂ 130 ಸುರಂಗಗಳು ನಾಶವಾಗಿವೆ, ಈ ಹಿಂದೆ ಇಸ್ರೇಲ್ ರಕ್ಷಣಾ ಪಡೆಗಳು ವಿಡಿಯೋವನ್ನು ಬಿಡುಗಡೆ ಮಾಡಿತ್ತು. ಮತ್ತು ಹಮಾಸ್ ಉಗ್ರರು ಶಾಲೆಗಳು, ಮಸೀದಿಗಳನ್ನು ರಾಕೆಟ್ ಉಡಾವಣಾ ಕೇಂದ್ರಗಳಾಗಿ ಬಳಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು. ಇಸ್ರೇಲಿ ಸೇನೆ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಸೈನಿಕರೊಬ್ಬರು ಶಾಲಾ ಕಟ್ಟಡವನ್ನು ತೋರಿಸುತ್ತಿರುವುದನ್ನು ನೋಡಬಹುದು. ಗೋಡೆಗಳ ಮೇಲೆ ಮಕ್ಕಳ ಚಿತ್ರಗಳಿವೆ.

ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ ರಾಕೆಟ್ ದಾಳಿ ನಡೆಸಿದ್ದರು, ಅದಾದ ಬಳಿಕ ಇಸ್ರೇಲ್ ಪ್ರತಿಯಾಗಿ ಗಾಜಾ ಮೇಲೆ ದಾಳಿ ನಡೆಸಿತ್ತು. 10 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ನಾವು ಯುದ್ಧ ಪ್ರಾರಂಭಿಸಿಲ್ಲ ಆದರೆ ನಾವೇ ಅಂತ್ಯಗೊಳಿಸುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ