AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಮಾಸ್​ ಉಗ್ರರ ಅಡಗುತಾಣ ಪತ್ತೆ ಮಾಡಿದ ಇಸ್ರೇಲ್ ಸೈನಿಕರು, ಸುರಂಗದಲ್ಲಿ ದೀರ್ಘಕಾಲ ಉಳಿಯುವ ಪ್ಯ್ಲಾನ್ ಅವರದ್ದಾಗಿತ್ತು

ಇಸ್ರೇಲ್(Israel) ಮತ್ತು ಹಮಾಸ್(Hamas)​ ನಡುವೆ ನಡೆಯುತ್ತಿರುವ ಯುದ್ಧ 34ನೇ ದಿನಕ್ಕೆ ಕಾಲಿಟ್ಟಿದೆ. ಅಕ್ಟೋಬರ್ 7 ರಂದು ಇಸ್ರೇಲ್​ ಮೇಲೆ ಹಮಾಸ್ ನಡೆಸಿದ ದಾಳಿಯ ಬಳಿಕ ಸಂಘರ್ಷ ಮುಂದುವರೆದಿದೆ. ಗಾಜಾ(Gaza)) ಪಟ್ಟಿಯಲ್ಲಿ ಇಸ್ರೇಲ್ ವಾಯು ಮತ್ತು ನೆಲದ ದಾಳಿಯನ್ನು ಮುಂದುವರೆಸಿದೆ ಮತ್ತು ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ.

ಹಮಾಸ್​ ಉಗ್ರರ ಅಡಗುತಾಣ ಪತ್ತೆ ಮಾಡಿದ ಇಸ್ರೇಲ್ ಸೈನಿಕರು, ಸುರಂಗದಲ್ಲಿ ದೀರ್ಘಕಾಲ ಉಳಿಯುವ ಪ್ಯ್ಲಾನ್ ಅವರದ್ದಾಗಿತ್ತು
ಸುರಂಗ
Follow us
ನಯನಾ ರಾಜೀವ್
|

Updated on: Nov 09, 2023 | 11:14 AM

ಇಸ್ರೇಲ್(Israel) ಮತ್ತು ಹಮಾಸ್(Hamas)​ ನಡುವೆ ನಡೆಯುತ್ತಿರುವ ಯುದ್ಧ 34ನೇ ದಿನಕ್ಕೆ ಕಾಲಿಟ್ಟಿದೆ. ಅಕ್ಟೋಬರ್ 7 ರಂದು ಇಸ್ರೇಲ್​ ಮೇಲೆ ಹಮಾಸ್ ನಡೆಸಿದ ದಾಳಿಯ ಬಳಿಕ ಸಂಘರ್ಷ ಮುಂದುವರೆದಿದೆ. ಗಾಜಾ(Gaza)) ಪಟ್ಟಿಯಲ್ಲಿ ಇಸ್ರೇಲ್ ವಾಯು ಮತ್ತು ನೆಲದ ದಾಳಿಯನ್ನು ಮುಂದುವರೆಸಿದೆ ಮತ್ತು ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ.

ಏತನ್ಮಧ್ಯೆ ಇಸ್ರೇಲ್ ರಕ್ಷಣಾ ಪಡೆಗಳು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿವೆ. ಈ ವಿಡಿಯೋದಲ್ಲಿ ಸುರಂಗವೊಂದು ಕಂಡುಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಬಿಡುಗಡೆ ಮಾಡುವ ಮೂಲಕ ಇಸ್ರೇಲಿ ಸೇನೆ ಈ ಸುರಂಗಗಳಲ್ಲಿ ಹಮಾಸ್ ಉಗ್ರರು ಅಡಗಿಕೊಂಡಿದ್ದಾರೆ ಎಂದು ಹೇಳಿಕೊಂಡಿದೆ.

ಸುರಂಗಗಳಲ್ಲಿ ನೀರು ಹಾಗೂ ಆಮ್ಲಜನಕದ ನಿಕ್ಷೇಪಗಳಿವೆ, ಅದನ್ನು ನೋಡಿದರೆ ದೀರ್ಘಕಾಲ ಉಗ್ರರು ಇಲ್ಲಿಯೇ ಉಳಿದುಕೊಳ್ಳಲು ಯೋಜನೆ ರೂಪಿಸಿದಂತೆ ಕಾಣುತ್ತದೆ ಎಂದಿದ್ದಾರೆ.

ಮತ್ತಷ್ಟು ಓದಿ: ಹಮಾಸ್ ಉಗ್ರರಿಗೆ ಜಯ ಸಿಗಲಿ ಎಂದ ಮಂಗಳೂರಿನ ಝಾಕಿರ್; ವಿಡಿಯೋ ವೈರಲ್​​

ಯುದ್ಧದ ಆರಂಭದಿಂದಲೂ 130 ಸುರಂಗಗಳು ನಾಶವಾಗಿವೆ, ಈ ಹಿಂದೆ ಇಸ್ರೇಲ್ ರಕ್ಷಣಾ ಪಡೆಗಳು ವಿಡಿಯೋವನ್ನು ಬಿಡುಗಡೆ ಮಾಡಿತ್ತು. ಮತ್ತು ಹಮಾಸ್ ಉಗ್ರರು ಶಾಲೆಗಳು, ಮಸೀದಿಗಳನ್ನು ರಾಕೆಟ್ ಉಡಾವಣಾ ಕೇಂದ್ರಗಳಾಗಿ ಬಳಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು. ಇಸ್ರೇಲಿ ಸೇನೆ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಸೈನಿಕರೊಬ್ಬರು ಶಾಲಾ ಕಟ್ಟಡವನ್ನು ತೋರಿಸುತ್ತಿರುವುದನ್ನು ನೋಡಬಹುದು. ಗೋಡೆಗಳ ಮೇಲೆ ಮಕ್ಕಳ ಚಿತ್ರಗಳಿವೆ.

ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ ರಾಕೆಟ್ ದಾಳಿ ನಡೆಸಿದ್ದರು, ಅದಾದ ಬಳಿಕ ಇಸ್ರೇಲ್ ಪ್ರತಿಯಾಗಿ ಗಾಜಾ ಮೇಲೆ ದಾಳಿ ನಡೆಸಿತ್ತು. 10 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ನಾವು ಯುದ್ಧ ಪ್ರಾರಂಭಿಸಿಲ್ಲ ಆದರೆ ನಾವೇ ಅಂತ್ಯಗೊಳಿಸುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್