AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಮಾಸ್​ ಉಗ್ರರ ಅಡಗುತಾಣ ಪತ್ತೆ ಮಾಡಿದ ಇಸ್ರೇಲ್ ಸೈನಿಕರು, ಸುರಂಗದಲ್ಲಿ ದೀರ್ಘಕಾಲ ಉಳಿಯುವ ಪ್ಯ್ಲಾನ್ ಅವರದ್ದಾಗಿತ್ತು

ಇಸ್ರೇಲ್(Israel) ಮತ್ತು ಹಮಾಸ್(Hamas)​ ನಡುವೆ ನಡೆಯುತ್ತಿರುವ ಯುದ್ಧ 34ನೇ ದಿನಕ್ಕೆ ಕಾಲಿಟ್ಟಿದೆ. ಅಕ್ಟೋಬರ್ 7 ರಂದು ಇಸ್ರೇಲ್​ ಮೇಲೆ ಹಮಾಸ್ ನಡೆಸಿದ ದಾಳಿಯ ಬಳಿಕ ಸಂಘರ್ಷ ಮುಂದುವರೆದಿದೆ. ಗಾಜಾ(Gaza)) ಪಟ್ಟಿಯಲ್ಲಿ ಇಸ್ರೇಲ್ ವಾಯು ಮತ್ತು ನೆಲದ ದಾಳಿಯನ್ನು ಮುಂದುವರೆಸಿದೆ ಮತ್ತು ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ.

ಹಮಾಸ್​ ಉಗ್ರರ ಅಡಗುತಾಣ ಪತ್ತೆ ಮಾಡಿದ ಇಸ್ರೇಲ್ ಸೈನಿಕರು, ಸುರಂಗದಲ್ಲಿ ದೀರ್ಘಕಾಲ ಉಳಿಯುವ ಪ್ಯ್ಲಾನ್ ಅವರದ್ದಾಗಿತ್ತು
ಸುರಂಗ
ನಯನಾ ರಾಜೀವ್
|

Updated on: Nov 09, 2023 | 11:14 AM

Share

ಇಸ್ರೇಲ್(Israel) ಮತ್ತು ಹಮಾಸ್(Hamas)​ ನಡುವೆ ನಡೆಯುತ್ತಿರುವ ಯುದ್ಧ 34ನೇ ದಿನಕ್ಕೆ ಕಾಲಿಟ್ಟಿದೆ. ಅಕ್ಟೋಬರ್ 7 ರಂದು ಇಸ್ರೇಲ್​ ಮೇಲೆ ಹಮಾಸ್ ನಡೆಸಿದ ದಾಳಿಯ ಬಳಿಕ ಸಂಘರ್ಷ ಮುಂದುವರೆದಿದೆ. ಗಾಜಾ(Gaza)) ಪಟ್ಟಿಯಲ್ಲಿ ಇಸ್ರೇಲ್ ವಾಯು ಮತ್ತು ನೆಲದ ದಾಳಿಯನ್ನು ಮುಂದುವರೆಸಿದೆ ಮತ್ತು ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ.

ಏತನ್ಮಧ್ಯೆ ಇಸ್ರೇಲ್ ರಕ್ಷಣಾ ಪಡೆಗಳು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿವೆ. ಈ ವಿಡಿಯೋದಲ್ಲಿ ಸುರಂಗವೊಂದು ಕಂಡುಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಬಿಡುಗಡೆ ಮಾಡುವ ಮೂಲಕ ಇಸ್ರೇಲಿ ಸೇನೆ ಈ ಸುರಂಗಗಳಲ್ಲಿ ಹಮಾಸ್ ಉಗ್ರರು ಅಡಗಿಕೊಂಡಿದ್ದಾರೆ ಎಂದು ಹೇಳಿಕೊಂಡಿದೆ.

ಸುರಂಗಗಳಲ್ಲಿ ನೀರು ಹಾಗೂ ಆಮ್ಲಜನಕದ ನಿಕ್ಷೇಪಗಳಿವೆ, ಅದನ್ನು ನೋಡಿದರೆ ದೀರ್ಘಕಾಲ ಉಗ್ರರು ಇಲ್ಲಿಯೇ ಉಳಿದುಕೊಳ್ಳಲು ಯೋಜನೆ ರೂಪಿಸಿದಂತೆ ಕಾಣುತ್ತದೆ ಎಂದಿದ್ದಾರೆ.

ಮತ್ತಷ್ಟು ಓದಿ: ಹಮಾಸ್ ಉಗ್ರರಿಗೆ ಜಯ ಸಿಗಲಿ ಎಂದ ಮಂಗಳೂರಿನ ಝಾಕಿರ್; ವಿಡಿಯೋ ವೈರಲ್​​

ಯುದ್ಧದ ಆರಂಭದಿಂದಲೂ 130 ಸುರಂಗಗಳು ನಾಶವಾಗಿವೆ, ಈ ಹಿಂದೆ ಇಸ್ರೇಲ್ ರಕ್ಷಣಾ ಪಡೆಗಳು ವಿಡಿಯೋವನ್ನು ಬಿಡುಗಡೆ ಮಾಡಿತ್ತು. ಮತ್ತು ಹಮಾಸ್ ಉಗ್ರರು ಶಾಲೆಗಳು, ಮಸೀದಿಗಳನ್ನು ರಾಕೆಟ್ ಉಡಾವಣಾ ಕೇಂದ್ರಗಳಾಗಿ ಬಳಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು. ಇಸ್ರೇಲಿ ಸೇನೆ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಸೈನಿಕರೊಬ್ಬರು ಶಾಲಾ ಕಟ್ಟಡವನ್ನು ತೋರಿಸುತ್ತಿರುವುದನ್ನು ನೋಡಬಹುದು. ಗೋಡೆಗಳ ಮೇಲೆ ಮಕ್ಕಳ ಚಿತ್ರಗಳಿವೆ.

ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ ರಾಕೆಟ್ ದಾಳಿ ನಡೆಸಿದ್ದರು, ಅದಾದ ಬಳಿಕ ಇಸ್ರೇಲ್ ಪ್ರತಿಯಾಗಿ ಗಾಜಾ ಮೇಲೆ ದಾಳಿ ನಡೆಸಿತ್ತು. 10 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ನಾವು ಯುದ್ಧ ಪ್ರಾರಂಭಿಸಿಲ್ಲ ಆದರೆ ನಾವೇ ಅಂತ್ಯಗೊಳಿಸುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್