AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲೂಚಿಸ್ತಾನದಲ್ಲಿ ಪಾಕ್ ಸೇನೆ ಮೇಲೆ ಐಇಡಿ ದಾಳಿ, ಪಾಕಿಸ್ತಾನದ 10 ಸೇನಾಧಿಕಾರಿಗಳು ಸಾವು

ಪಾಕ್ ಸೇನಾ ಬೆಂಗಾವಲು ಪಡೆಯ ಮೇಲೆ ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ದಾಳಿ ನಡೆಸಿದೆ. ಈ ದಾಳಿಯಲ್ಲಿ 10 ಪಾಕ್​​ ಸೈನಿಕರು ಸಾವನ್ನಪ್ಪಿದ್ದಾರೆ. ಶುಕ್ರವಾರ ಬಲೂಚಿಸ್ತಾನದ ಕ್ವೆಟ್ಟಾದಲ್ಲಿ ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ನಡೆಸಿದ ಐಇಡಿ ದಾಳಿಯನ್ನು ನಡೆಸಿತ್ತು. ಪಾಕ್ ನಾಶ ಮಾಡುವುದು ನಮ್ಮ ಉದ್ದೇಶವಾಗಿದೆ. ನಮ್ಮ ಸ್ವಾತಂತ್ರ್ಯವನ್ನು ಪಡೆಯುವುದಕ್ಕಾಗಿ ಈ ದಾಳಿ ಎಂದು ಹೇಳಿದ್ದಾರೆ.

ಬಲೂಚಿಸ್ತಾನದಲ್ಲಿ ಪಾಕ್ ಸೇನೆ ಮೇಲೆ ಐಇಡಿ ದಾಳಿ, ಪಾಕಿಸ್ತಾನದ 10 ಸೇನಾಧಿಕಾರಿಗಳು ಸಾವು
ಪಾಕ್ ಸೇನೆ ಮೇಲೆ ಐಇಡಿ ದಾಳಿ
ಅಕ್ಷಯ್​ ಪಲ್ಲಮಜಲು​​
|

Updated on: Apr 26, 2025 | 10:55 AM

Share

ಬಲೂಚಿಸ್ತಾನ, ಏ.26: ಪಾಕಿಸ್ತಾನದ 10 ಸೇನಾಧಿಕಾರಿಗಳನ್ನು ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಬಲಿ ಪಡೆದಿದೆ. ಶುಕ್ರವಾರ ಬಲೂಚಿಸ್ತಾನದ (Balochistan) ಕ್ವೆಟ್ಟಾದಲ್ಲಿ ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ನಡೆಸಿದ ಐಇಡಿ ದಾಳಿಯಲ್ಲಿ ಹತ್ತು ಪಾಕಿಸ್ತಾನಿ ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ .ಕ್ವೆಟ್ಟಾದ ಮಾರ್ಗತ್‌ನಲ್ಲಿ ಪಾಕಿಸ್ತಾನಿ (Pakistani) ಸೇನಾ ಬೆಂಗಾವಲು ಪಡೆಗಳನ್ನು ಗುರಿಯಾಗಿಸಿಕೊಂಡು ಐಇಡಿ ಸ್ಫೋಟ ನಡೆಸಲಾಗಿದೆ. ಈ ದಾಳಿಯನ್ನು ಹೊಣೆಯನ್ನು ಹೊತ್ತಿದ್ದು, ನಾವೇ ಈ ದಾಳಿಯನ್ನು ನಡೆಸಿದ್ದೇವೆ. ಪಾಕ್​ ಸೇನೆಯ ಮೇಲೆ ದಾಳಿ ಮಾಡಲು ತನ್ನ ಯೋಧರಿಗೆ ರಿಮೋಟ್-ಕಂಟ್ರೋಲ್ಡ್ ಸಾಧನ ನೀಡಲಾಗಿತ್ತು. ಇದನ್ನು ಬಳಸಿಕೊಂಡು ಪಾಕ್ ಸೇನಾ ಬೆಂಗಾವಲು ಪಡೆಯನ್ನು ಬಲಿ ಪಡೆದಿದ್ದೇವೆ ಎಂದು ಹೇಳಿದೆ. ನಮ್ಮ ಶತ್ರುಗಳನ್ನು ನಾಶ ಮಾಡುವುದು ನಮ್ಮ ಉದ್ದೇಶವಾಗಿತ್ತು ಅದನ್ನು ನಾವು ಮಾಡಿದ್ದೇವೆ ಎಂದು ಹೇಳಿದೆ.

ಸುಬೇದಾರ್ ಶೆಹಜಾದ್ ಅಮೀನ್, ನೈಬ್ ಸುಬೇದಾರ್ ಅಬ್ಬಾಸ್, ಸಿಪಾಯಿ ಖಲೀಲ್, ಸಿಪಾಯಿ ಜಾಹಿದ್, ಸಿಪಾಯಿ ಖುರ್ರಾಮ್ ಸಲೀಮ್ ಮತ್ತು ಇತರ ಸೈನಿಕರು ಸೇರಿದಂತೆ ಒಟ್ಟು 10 ಜನರನ್ನು ಬಲಿ ಪಡೆದಿದ್ದೇವೆ ಎಂದು ಬಿಎಲ್‌ಎ ವಕ್ತಾರ ಜಿಯಾಂಡ್ ಬಲೂಚ್ ಹೇಳಿಕೆ ನೀಡಿದ್ದಾರೆ. ಇದು ಅವರಿಗೆ ಕೇವಲ ಎಚ್ಚರಿಕೆ ಅಷ್ಟೇ, ಮುಂದಿನ ದಿನಗಳಲ್ಲಿ ಈ ಕಾರ್ಯಚರಣೆ ಇನ್ನು ತೀವ್ರವಾಗಿರುತ್ತದೆ. ನಮ್ಮ ಸ್ವಾತಂತ್ರ್ಯವನ್ನು ಪಡೆಯಲು ಏನು ಬೇಕಾದರೂ ಮಾಡುತ್ತೇವೆ ಎಂದು ಪಾಕ್​​​ಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮತ್ತೆ 5 ಭಯೋತ್ಪಾದಕರ ಮನೆಗಳನ್ನು ಧ್ವಂಸ ಮಾಡಿದ ಭಾರತೀಯ ಸೇನೆ

ಇದನ್ನೂ ಓದಿ
Image
ಪ್ರವಾಸಿಗರನ್ನು ಹತ್ಯೆ ಮಾಡಿದ್ದು ಅಮಾನವೀಯ ಕೃತ್ಯ: ವಿಶ್ವಸಂಸ್ಥೆ
Image
ಸ್ನಾನಕ್ಕೂ ಭಾರತದಿಂದ ನೀರು ಕೇಳಬೇಕು; ಟ್ರೋಲ್ ಮಾಡಿಕೊಂಡ ಪಾಕಿಸ್ತಾನೀಯರು!
Image
ಪಾಕಿಸ್ತಾನಕ್ಕೆ ಭೇಟಿ ನೀಡಬೇಡಿ; ತನ್ನ ಪ್ರಜೆಗಳಿಗೆ ರಷ್ಯಾ ಎಚ್ಚರಿಕೆ
Image
ಭಾರತದಲ್ಲಿದ್ದಾರೆ 14,000 ಪಾಕಿಸ್ತಾನಿ ಪ್ರಜೆಗಳು

ಎಲ್ಲ ಕಡೆಗಳಿಂದ ಹಾಗೂ ನಮ್ಮ ಶಕ್ತಿಯಿಂದ ಪಾಕಿಸ್ತಾನದ ನಾಶವನ್ನು ಮಾಡುತ್ತೇವೆ. ನಮ್ಮ ಹೋರಾಟ ಹೀಗೆ ಮುಂದುವರಿಯುವುದು. ಬಲೂಚಿಸ್ತಾನದಲ್ಲಿ ಪಾಕಿಸ್ತಾನದ ವಿರುದ್ಧ ಇಂತಹ ಅನೇಕ ದಾಳಿಗಳು ನಡೆದಿದೆ. ಇನ್ನು ಈ ದಾಳಿಗೂ ಮುನ್ನ ಗುರುವಾರ ಪಾಕ್​​ ಸೇನೆಯ ಜತೆಗೆ ಬಿಎಲ್‌ಎ ಪಡೆ ಗುಂಡಿನ ಚಕಮಕಿ ನಡೆಸಿದೆ. ಇದರಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಈ ದಾಳಿಗಳು ಝಮುರಾನ್, ಕೊಲ್ವಾ ಮತ್ತು ಕಲಾತ್ ಜಿಲ್ಲೆಗಳಲ್ಲಿ ನಡೆದಿವೆ. ಪಾಕ್​​​ಗೆ ಸೇರಿದ ಕೆಲವೊಂದು ಭದ್ರತಾ ಠಾಣೆಗಳನ್ನು ಕೂಡ ಈ ಸಂಘಟನೆ ವಶಪಡಿಸಿಕೊಂಡಿದೆ.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ