AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಘೋಷಣೆಯಾಗದಿದ್ದರೆ ಪಾಕಿಸ್ತಾನದಲ್ಲಿ ಆಂತರಿಕ ಯುದ್ಧವುಂಟಾಗಲಿದೆ: ಇಮ್ರಾನ್ ಖಾನ್

ತಾವು ಪ್ರಧಾನ ಮಂತ್ರಿಯಾಗಿ ಸಂಪೂರ್ಣ ಅಧಿಕಾರವನ್ನು ಅನುಭವಿಸಲಿಲ್ಲ, ದೇಶದ ನಿಜವಾದ ಅಧಿಕಾರ ಕೇಂದ್ರಗಳು ಬೇರೆಡೆ ಇದೆ. ಅದು ಎಲ್ಲಿದೆ ಎಂದು ಎಲ್ಲರಿಗೂ ತಿಳಿದಿದೆ ಎಂದಿದ್ದಾರೆ ಪಾಕ್ ಮಾಜಿ ಪ್ರಧಾನಿ.

ಚುನಾವಣೆ ಘೋಷಣೆಯಾಗದಿದ್ದರೆ ಪಾಕಿಸ್ತಾನದಲ್ಲಿ ಆಂತರಿಕ ಯುದ್ಧವುಂಟಾಗಲಿದೆ: ಇಮ್ರಾನ್ ಖಾನ್
ಇಮ್ರಾನ್ ಖಾನ್
TV9 Web
| Edited By: |

Updated on:Jun 02, 2022 | 1:47 PM

Share

ಚುನಾವಣೆ ಘೋಷಣೆಯಾಗದಿದ್ದರೆ ದೇಶದಲ್ಲಿ ಆಂತರಿಕ ಯುದ್ಧವುಂಟಾಗಲಿದೆ ಎಂದು ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಎಚ್ಚರಿಕೆ ನೀಡಿದ್ದಾರೆ. “ಕಾನೂನು ಮತ್ತು ಸಾಂವಿಧಾನಿಕ ವಿಧಾನಗಳ ಮೂಲಕ ಚುನಾವಣೆಗೆ ಹೋಗಲು ಅವರು ನಮಗೆ ಅವಕಾಶ ನೀಡುತ್ತಾರೆಯೇ ಎಂದು ನಾವು ನೋಡುತ್ತೇವೆ. ಇಲ್ಲದಿದ್ದರೆ ಈ ದೇಶದಲ್ಲಿ ಆಂತರಿಕ ಯುದ್ಧ ನಡೆಯಲಿದೆ ಎಂದು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (PTI) ಮುಖ್ಯಸ್ಥರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ ಎಂದು ಡಾನ್ ನ್ಯೂಸ್ ಹೇಳಿದೆ. ನ್ಯಾಷನಲ್ ಅಸೆಂಬ್ಲಿಗೆ ಹಿಂದಿರುಗುವ “ಪ್ರಶ್ನೆಯೇ ಇಲ್ಲ” ಎಂದು ಹೇಳಿದ ಇಮ್ರಾನ್ ಖಾನ್, ಹಾಗೆ ಮಾಡಿದರೆ ನಮ್ಮ ಸರ್ಕಾರವನ್ನು ತೆಗೆದುಹಾಕಿದ “ಪಿತೂರಿಯನ್ನು ಒಪ್ಪಿಕೊಳ್ಳುವುದು” ಎಂದರ್ಥ ಎಂದಿದ್ದಾರೆ. ಪ್ರತಿಭಟನಾಕಾರರಿಗೆ ರಕ್ಷಣೆ ನೀಡುವಂತೆ ತಮ್ಮ ಪಕ್ಷದ ಮನವಿಯನ್ನು ಸುಪ್ರೀಂಕೋರ್ಟ್ ನಿರ್ಧರಿಸಲು ಕಾಯುತ್ತಿದ್ದೇನೆ. ಆ ನಂತರ ಅವರು ಮುಂದಿನ ಮಾರ್ಚ್ ನಡೆಸುವುದಕ್ಕಾಗಿ ದಿನಾಂಕವನ್ನು ನೀಡುವುದಾಗಿ ಹೇಳಿದರು ಎಂದು ಡಾನ್ ನ್ಯೂ ವರದಿ ಮಾಡಿದೆ.

ತಾವು ಪ್ರಧಾನ ಮಂತ್ರಿಯಾಗಿ ಸಂಪೂರ್ಣ ಅಧಿಕಾರವನ್ನು ಅನುಭವಿಸಲಿಲ್ಲ, ದೇಶದ ನಿಜವಾದ ಅಧಿಕಾರ ಕೇಂದ್ರಗಳು ಬೇರೆಡೆ ಇದೆ. ಅದು ಎಲ್ಲಿದೆ ಎಂದು ಎಲ್ಲರಿಗೂ ತಿಳಿದಿದೆ ಎಂದಿದ್ದಾರೆ ಪಾಕ್ ಮಾಜಿ ಪ್ರಧಾನಿ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಅದು ದುರ್ಬಲವಾಗಿತ್ತು ಹಾಗಾಗಿ ಮಿತ್ರಪಕ್ಷಗಳನ್ನು ಸೇರಿಸಬೇಕಾಯಿತು. ಅದೇ ಪರಿಸ್ಥಿತಿ ಮತ್ತೊಮ್ಮೆ ಬಂದರೆ ಮರು ಚುನಾವಣೆಗೆ ಹೋಗಿ ಬಹುಮತ ಬಯಸುತ್ತೇನೆ ಇಲ್ಲವೇ ಯಾವುದನ್ನೂ ಮಾಡುವುದಿಲ್ಲ ಎಂದಿದ್ದಾರೆ.

ನಮ್ಮ ಕೈಗಳನ್ನು ಕಟ್ಟಲಾಗಿತ್ತು. ನಮಗೆ ಎಲ್ಲೆಡೆಯಿಂದ ಬ್ಲ್ಯಾಕ್ ಮೇಲ್ ಮಾಡಲಾಗಿದೆ. ಅಧಿಕಾರ ನಮ್ಮ ಬಳಿ ಇರಲಿಲ್ಲ. ಪಾಕಿಸ್ತಾನದಲ್ಲಿ ಅಧಿಕಾರ ಎಲ್ಲಿದೆ ಎಂದು ಎಲ್ಲರಿಗೂ ತಿಳಿದಿದೆ, ಆದ್ದರಿಂದ ನಾವು ಅವರ ಮೇಲೆ ಅವಲಂಬಿತರಾಗಿದ್ದೇವೆ ಎಂದು ಯಾರನ್ನೂ ಉಲ್ಲೇಖಿಸದೆಯೇ ಇಮ್ರಾನ್ ಖಾನ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ
Image
Imran Khan: ಮತ್ತೆ ಭಾರತವನ್ನು ಹೊಗಳಿದ ಇಮ್ರಾನ್ ಖಾನ್; ಪಾಕಿಸ್ತಾನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆಗೆ ಆಕ್ರೋಶ
Image
ಐ ಎಮ್ ಎಫ್ ಒತ್ತಡಕ್ಕೆ ಮಣಿದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ ಗೆ ತಲಾ ರೂ. 30 ಹೆಚ್ಚಿಸಿದ ಪಾಕ್ ಸರ್ಕಾರ!
Image
Pak Politics: ಚುನಾವಣೆ ಘೋಷಿಸಲು ಪಾಕಿಸ್ತಾನದ ಹೊಸ ಸರ್ಕಾರಕ್ಕೆ 6 ದಿನಗಳ ಗಡುವು ಕೊಟ್ಟ ಇಮ್ರಾನ್ ಖಾನ್

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:40 pm, Thu, 2 June 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ