AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗತ್ಯವಿದ್ದರೆ ಉಕ್ರೇನ್​ನ ಝೆಲೆನ್ಸ್ಕಿ ಜೊತೆ ಮಾತುಕತೆಗೆ ಸಿದ್ಧ ಎಂದ ರಷ್ಯಾದ ಪುಟಿನ್

ಉಕ್ರೇನ್ ಯುದ್ಧದ ವಿಷಯದ ಬಗ್ಗೆ ಸೌದಿ ಅರೇಬಿಯಾದಲ್ಲಿ ಅಮೆರಿಕ-ರಷ್ಯಾ ನಿಯೋಗದ ಸಭೆಯ ಸಂದರ್ಭದಲ್ಲಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಲು ಪುಟಿನ್ ಸಿದ್ಧ ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. "ಅಗತ್ಯವಿದ್ದರೆ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಲು ಸಿದ್ಧರಿದ್ದೇನೆ ಎಂದು ಪುಟಿನ್ ಸ್ವತಃ ಹೇಳಿದ್ದಾರೆ. ಆದರೆ ಝೆಲೆನ್ಸ್ಕಿ ಈ ಬಗ್ಗೆ ಏನೂ ಖಾತರಿಪಡಿಸಿಲ್ಲ" ಎಂದು ರಷ್ಯಾ ಹೇಳಿದೆ.

ಅಗತ್ಯವಿದ್ದರೆ ಉಕ್ರೇನ್​ನ ಝೆಲೆನ್ಸ್ಕಿ ಜೊತೆ ಮಾತುಕತೆಗೆ ಸಿದ್ಧ ಎಂದ ರಷ್ಯಾದ ಪುಟಿನ್
Putin
Follow us
ಸುಷ್ಮಾ ಚಕ್ರೆ
|

Updated on: Feb 18, 2025 | 4:27 PM

ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಲು ಸಿದ್ಧ ಎಂದು ರಷ್ಯಾ ಇಂದು ದೃಢಪಡಿಸಿದೆ. ಸೌದಿ ಅರೇಬಿಯಾದಲ್ಲಿ ಅಮೆರಿಕ ಮತ್ತು ರಷ್ಯಾದ ರಾಜತಾಂತ್ರಿಕರು ಮಾತುಕತೆ ನಡೆಸುತ್ತಿರುವಾಗ ಈ ಘೋಷಣೆ ಹೊರಬಿದ್ದಿದೆ. ಇದಕ್ಕೂ ಮೊದಲು, ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ದಿರಿಯಾ ಅರಮನೆಯಲ್ಲಿ ರಷ್ಯಾ ಮತ್ತು ಅಮೆರಿಕದ ಹಿರಿಯ ಅಧಿಕಾರಿಗಳು ಉಕ್ರೇನ್‌ನಲ್ಲಿ ಸಂಬಂಧಗಳನ್ನು ಸುಧಾರಿಸುವ ಮತ್ತು ಯುದ್ಧವನ್ನು ಕೊನೆಗೊಳಿಸುವ ಕುರಿತು ಮಾತುಕತೆಗಳನ್ನು ನಡೆಸಿದರು. ಯುಎಸ್ ನಿಯೋಗದ ನೇತೃತ್ವವನ್ನು ಯುಎಸ್ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ವಹಿಸಿದ್ದರು. ರಷ್ಯಾದ ಕಡೆಯವರ ನೇತೃತ್ವವನ್ನು ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ವಹಿಸಿದ್ದರು.

“ಒಂದುವೇಳೆ ಅಗತ್ಯವಿದ್ದರೆ” ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನಿಯನ್ ಅಧ್ಯಲ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಲು ಸಿದ್ಧರಿದ್ದಾರೆ ಎಂದು ಕ್ರೆಮ್ಲಿನ್ ತಿಳಿಸಿದೆ. ಉಕ್ರೇನ್‌ನಲ್ಲಿ 3 ವರ್ಷಗಳ ಕಾಲ ನಡೆದ ಯುದ್ಧವನ್ನು ಕೊನೆಗೊಳಿಸಲು ಮಾತುಕತೆ ನಡೆಸಲು ರಷ್ಯಾ ಮತ್ತು ಅಮೆರಿಕದ ಉನ್ನತ ರಾಜತಾಂತ್ರಿಕರು ಸೌದಿ ಅರೇಬಿಯಾದಲ್ಲಿ ಮಾತುಕತೆ ನಡೆಸುತ್ತಿದ್ದಂತೆ ಈ ಹೇಳಿಕೆ ಹೊರಬಿದ್ದಿರುವುದು ಕುತೂಹಲ ಮೂಡಿಸಿದೆ. ಆದರೆ, ಯಾವುದೇ ಉಕ್ರೇನಿಯನ್ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿರಲಿಲ್ಲ.

ಇದನ್ನೂ ಓದಿ: ಉಕ್ರೇನ್ ಯುದ್ಧದ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್ ಜತೆ ಮಾತನಾಡಿದ್ದೇನೆ: ಡೊನಾಲ್ಡ್​ ಟ್ರಂಪ್

“ಅಗತ್ಯವಿದ್ದರೆ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಲು ಸಿದ್ಧರಿದ್ದೇನೆ ಎಂದು ಪುಟಿನ್ ಸ್ವತಃ ಹೇಳಿದ್ದಾರೆ. ಆದರೆ ಝೆಲೆನ್ಸ್ಕಿ ಈ ಬಗ್ಗೆ ಏನೂ ಖಾತರಿಪಡಿಸಿಲ್ಲ” ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ಝೆಲೆನ್ಸ್ಕಿ ತನ್ನ ಬೆನ್ನ ಹಿಂದೆ ದಲ್ಲಾಳಿಗಳು ನಡೆಸುವ ಯಾವುದೇ ಶಾಂತಿ ಒಪ್ಪಂದಗಳನ್ನು ಸ್ವೀಕರಿಸುವುದಿಲ್ಲ ಎಂದಿದ್ದಾರೆ.

ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದ ಮೇಲೆ ಶಾಂತಿ ಮಾತುಕತೆಗೆ ಒತ್ತು ನೀಡಲಾಗಿದೆ. ಟ್ರಂಪ್ ಅವರು ಪುಟಿನ್ ಮತ್ತು ಝೆಲೆನ್ಸ್ಕಿ ಇಬ್ಬರೊಂದಿಗೂ ದೂರವಾಣಿ ಮೂಲಕ ಪ್ರತ್ಯೇಕವಾಗಿ ಮಾತನಾಡಿದ್ದಾರೆ. ಸೌದಿ ಅರೇಬಿಯಾದಲ್ಲಿ ನಡೆದ ಸಭೆಯು ಉಕ್ರೇನ್‌ನಲ್ಲಿ ಸಂಘರ್ಷವನ್ನು ನಿಲ್ಲಿಸುವ ಅಮೆರಿಕದ ಪ್ರಯತ್ನಗಳಿಗೆ ಮೊದಲ ಹೆಜ್ಜೆಯಾಗಿದೆ.

ಇದನ್ನೂ ಓದಿ: ಉಕ್ರೇನ್‌ನಲ್ಲಿರುವ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್‌ ದಾಳಿ

ರಷ್ಯಾ ಮತ್ತು ಉಕ್ರೇನ್ ನಡುವೆ ಸಂಘರ್ಷವನ್ನು ಕೊನೆಗೊಳಿಸುವ ಮಾತುಕತೆಗಳು ನಡೆಯುತ್ತಿದ್ದರೂ ಉಕ್ರೇನ್‌ನಲ್ಲಿ ಯುದ್ಧ ಮುಂದುವರೆದಿದೆ. ರಷ್ಯಾ ಕೈವ್ ಮೇಲೆ ಡ್ರೋನ್‌ಗಳೊಂದಿಗೆ ದಾಳಿ ಮಾಡಿದೆ ಎಂದು ಉಕ್ರೇನಿಯನ್ ಮಿಲಿಟರಿ ತಿಳಿಸಿದೆ. ರಷ್ಯಾದ ಪಡೆಗಳು ರಾತ್ರೋರಾತ್ರಿ ಉಕ್ರೇನ್‌ನಲ್ಲಿ 176 ಡ್ರೋನ್‌ಗಳನ್ನು ಹಾರಿಸಿವೆ ಎಂದು ಉಕ್ರೇನಿಯನ್ ವಾಯುಪಡೆ ತಿಳಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ