AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನಕ್ಕೆ ಹಣ ನೀಡದಿರಲು ಐಎಂಎಫ್ ನಿರ್ಧಾರ; ಆರ್ಥಿಕ ಬಲ ಇಲ್ಲದೆ ತಾಲಿಬಾನಿಗಳು ಕಂಗಾಲು

Afghanistan: ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನಕ್ಕೆ ಹಣ ನೀಡದಿರಲು ಈಗ ಐಎಂಫ್ ನಿರ್ಧಾರ ಮಾಡಿದೆ. ಈ ಬಗ್ಗೆ ಐಎಂಎಫ್ ವಕ್ತಾರರಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಅಫ್ಘಾನಿಸ್ತಾನಕ್ಕೆ ಹಣ ನೀಡದಿರಲು ಐಎಂಎಫ್ ನಿರ್ಧಾರ; ಆರ್ಥಿಕ ಬಲ ಇಲ್ಲದೆ ತಾಲಿಬಾನಿಗಳು ಕಂಗಾಲು
ತಾಲಿಬಾನ್ ಹೋರಾಟಗಾರರು (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Aug 20, 2021 | 10:57 AM

Share

ದೆಹಲಿ: ಅಫ್ಘಾನಿಸ್ತಾನಕ್ಕೆ ಹಣ ನೀಡದಿರಲು ಇಂಟರ್‌ನ್ಯಾಷನಲ್ ಮಾನಿಟರಿ ಫಂಡ್ (International Monetary Fund- IMF) ನಿರ್ಧಾರ ಮಾಡಿದೆ. ಆಫ್ಘನ್‌ಗೆ ಹಣ ನೀಡಲು ಈ ಹಿಂದೆ ಐಎಂಎಫ್ ಅನುಮೋದನೆ ಕೊಟ್ಟಿತ್ತು. 650 ಮಿಲಿಯನ್ ಡಾಲರ್ ನೀಡಲು ಅನುಮೋದನೆ ಸೂಚಿಸಿತ್ತು. ಆಗಸ್ಟ್ 23ರಂದು 340 ಮಿಲಿಯನ್ ಡಾಲರ್ ನೀಡಬೇಕಾಗಿತ್ತು. ಆದರೆ, ಅಫ್ಘಾನಿಸ್ತಾನವನ್ನು (Afghanistan) ತಾಲಿಬಾನ್ ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನಕ್ಕೆ ಹಣ ನೀಡದಿರಲು ಈಗ ಐಎಂಫ್ ನಿರ್ಧಾರ ಮಾಡಿದೆ. ಈ ಬಗ್ಗೆ ಐಎಂಎಫ್ ವಕ್ತಾರರಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಈ ಮಧ್ಯೆ, ಆಫ್ಘನ್‌ನಲ್ಲಿರುವ ತಾಲಿಬಾನಿಗಳಿಗೆ (Taliban) ಹಣ ಸಿಗದೆ ಕಂಗಾಲಾಗಿದ್ದಾರೆ. ದಿ ಅಪ್ಘಾನಿಸ್ತಾನ ಬ್ಯಾಂಕ್‌ನ ಹಣವನ್ನು ಅಮೆರಿಕ ಜಪ್ತಿ ಮಾಡಿದೆ. ಹೀಗಾಗಿ ಹಣ ಸಿಗದೆ ತಾಲಿಬಾನ್ ಉಗ್ರರು ಕಂಗಾಲಾಗಿದ್ದಾರೆ. ಅಮೆರಿಕ, ಇಂಗ್ಲೆಂಡ್, ಜರ್ಮನಿ, ಭಾರತ ಸೇರಿದಂತೆ ಪ್ರಮುಖ ದೇಶಗಳಿಂದ ತಾಲಿಬಾನಿಗಳಿಗೆ ಹಣ ಸಿಗುತ್ತಿಲ್ಲ. ಪಾಕ್ ಈಗಾಗಲೇ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ. ಹೀಗಾಗಿ ಸದ್ಯ ಹಣ ಸಿಗದೆ ತಾಲಿಬಾನಿಗಳು ಕಂಗಾಲಾಗಿದ್ದಾರೆ. ಚೀನಾದಿಂದ ಹಣ ಬರುವ ನಿರೀಕ್ಷೆಯಲ್ಲಿ ತಾಲಿಬಾನ್ ಉಗ್ರರು ಇದ್ದಾರೆ. ಅಪ್ಘಾನಿಸ್ತಾನ ಅಭಿವೃದ್ಧಿಗೆ ಚೀನಾ ಕೊಡುಗೆ ನೀಡಬಹುದು ಎಂದು ತಾಲಿಬಾನ್ ವಕ್ತಾರ ಸುಹೇಲ್ ಶಹೀನ್ ಹೇಳಿಕೆ ನೀಡಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಯಾವ ರೀತಿ ಅಧಿಕಾರ ನಡೆಸಬೇಕು ಎಂಬುದರ ಬಗ್ಗೆ ತಾಲಿಬಾನ್ ತಂಡ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ತಾಲಿಬಾನ್‌ನ ಹಿರಿಯ ಸದಸ್ಯ ವಹೀದುಲ್ಲಾ ಹಾಶಿಮಿ ಹೇಳಿರುವುದಾಗಿ ರಾಯಿಟರ್ಸ್‌ ವರದಿ ಗುರುವಾರ (ಆಗಸ್ಟ್ 19) ಮಾಡಿತ್ತು. ಈ ಗುಂಪು ತನ್ನ ಹಿಂದಿನ ಆಡಳಿತದಂತೆಯೇ ಆಡಳಿತವನ್ನು ಯೋಜಿಸುತ್ತಿರುವುದರಿಂದ ಯಾವುದೇ ಪ್ರಜಾಪ್ರಭುತ್ವ ವ್ಯವಸ್ಥೆಯು ಇರುವುದಿಲ್ಲ. ಯಾಕೆಂದರೆ ಅದು ದೇಶದಲ್ಲಿ ಯಾವುದೇ ನೆಲೆಯನ್ನು ಹೊಂದಿಲ್ಲ ಎಂದು ಸದಸ್ಯರು ವಿವರಿಸಿದ್ದರು. “ಅಫ್ಘಾನಿಸ್ತಾನದಲ್ಲಿ ನಾವು ಯಾವ ರೀತಿಯ ರಾಜಕೀಯ ವ್ಯವಸ್ಥೆಯನ್ನು ಅನ್ವಯಿಸಬೇಕು ಎಂಬುದನ್ನು ನಾವು ಚರ್ಚಿಸುವುದಿಲ್ಲ ಏಕೆಂದರೆ ಅದು ಸ್ಪಷ್ಟವಾಗಿದೆ. ಇದು ಶರಿಯಾ ಕಾನೂನು, ಅಷ್ಟೇ” ಎಂದು ಹಾಶಿಮಿ ಹೇಳಿದ್ದರು.

ದೇಶದ ಮೇಲ್ವಿಚಾರಣೆ ನೋಡಿಕೊಳ್ಳಲಿದೆ ಕೌನ್ಸಿಲ್ ಹಾಶಿಮಿ ಪ್ರಕಾರ ಒಂದು ಕೌನ್ಸಿಲ್ ದೇಶದ ದಿನನಿತ್ಯದ ಚಟುವಟಿಕೆಯ ಮೇಲ್ವಿಚಾರಣೆ ಮಾಡುತ್ತದೆ. ತಾಲಿಬಾನ್‌ನ ಅತ್ಯುನ್ನತ ನಾಯಕ ಹೈಬತುಲ್ಲಾ ಅಖುಂಡಜಾದ ಒಟ್ಟಾರೆ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ. 1996 ರಿಂದ 2001 ರವರೆಗೆ ತಾಲಿಬಾನ್‌ಗಳು ಅಫ್ಘಾನಿಸ್ತಾನವನ್ನು ಹೇಗೆ ಆಳಿದರು ಎಂಬಂತೆಯೇ ಇದು ಇರಲಿದೆ. ಆ ಸಮಯದಲ್ಲಿ ಸರ್ವೋಚ್ಚ ನಾಯಕ ಮುಲ್ಲಾ ಒಮರ್ ನೆರಳಿನಲ್ಲಿ ಹಿನ್ನೆಲೆಯಲ್ಲಿ ನಿಂತು ದೈನಂದಿನ ಆಡಳಿತವು ಕೌನ್ಸಿಲ್​ನ ಜವಾಬ್ದಾರಿ ಆಗಿತ್ತು.

ಇದನ್ನೂ ಓದಿ: ದಿಕ್ಕುತಪ್ಪಿರುವ ಅಫ್ಘಾನಿಸ್ತಾನದ ಆಡಳಿತಕ್ಕೆ ತಾಲಿಬಾನಿಯ ಈ ಏಳು ಮಂದಿಯೇ ಸೂತ್ರಧಾರಿಗಳು!

Sharia Law: ಅಫ್ಘಾನಿಸ್ತಾನದಲ್ಲಿ ಷರಿಯಾ ಆಡಳಿತ ಜಾರಿಗೆ ಸಿದ್ಧತೆ; ಷರಿಯಾ ಕಾನೂನು ಎಂದರೇನು?

(IMF Indian Monetary Fund blocks Funds transfer to Afghanistan Taliban facing Economic Crisis)

Published On - 10:52 am, Fri, 20 August 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ