AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಡಲೇ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಶರಣಾಗಿ: ಉಕ್ರೇನ್​ ಸೈನಿಕರಿಗೆ ಎಚ್ಚರಿಕೆ ನೀಡಿದ ರಷ್ಯಾ

ಮರಿಯುಪೋಲ್​​ನಿಂದ ರಷ್ಯಾ ಸೈನಿಕರ ಗಮನ ಡಾನ್ಬಾಸ್​ನತ್ತ ತಿರುಗಿದೆ. ತುಂಬ ದಿನಗಳಿಂದ ಡಾನ್ಬಾಸ್​ಗೆ ಪ್ರವೇಶಿಸಲು ಅವರು ಕಾಯುತ್ತಿದ್ದರು. ಇದೀಗ ಅಲ್ಲಿ ಕಾಲಿಟ್ಟಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ಕ್ಸಿ ತಿಳಿಸಿದ್ದಾರೆ.

ಕೂಡಲೇ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಶರಣಾಗಿ: ಉಕ್ರೇನ್​ ಸೈನಿಕರಿಗೆ ಎಚ್ಚರಿಕೆ ನೀಡಿದ ರಷ್ಯಾ
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on: Apr 19, 2022 | 5:36 PM

Share

ತಕ್ಷಣವೇ ಶಸ್ತ್ರಾಸ್ತ್ರ ತ್ಯಜಿಸಿ ಎಂದು ರಷ್ಯಾ, ಉಕ್ರೇನ್​ ಸೈನಿಕರಿಗೆ ಹೇಳಿದೆ. ನಿನ್ನೆಯಿಂದ ಉಕ್ರೇನ್​ನ ಬಂಡುಕೋರರ ಹಿಡಿತದಲ್ಲಿರುವ  ಡಾನ್ಬಾಸ್​ನಲ್ಲಿ ರಷ್ಯಾ ಸೇನೆಯ ಆಕ್ರಮಣ ಶುರುವಾಗಿದೆ. ಅದಾದ ಕೆಲವೇ ಹೊತ್ತಲ್ಲಿ, ಮರಿಯುಪೋಲ್​​ ರಕ್ಷಣೆಗೆ ನಿಂತಿರುವ ಉಕ್ರೇನ್​ ಸೈನಿಕರಿಗೆ ರಷ್ಯಾ ಈ ಎಚ್ಚರಿಕೆ ನೀಡಿತ್ತು. ಆದರೆ ಉಕ್ರೇನ್​ ಸೈನ್ಯ ಶಸ್ತ್ರ ತ್ಯಜಿಸುವುದಿಲ್ಲ. ಡಾನ್ಬಾಸ್ ಪ್ರದೇಶದಲ್ಲಿ ರಷ್ಯಾ ನಿನ್ನೆಯಿಂದ ಯುದ್ಧ ಶುರುಮಾಡಿದೆ. ಆದರೆ ಅದನ್ನು ವಶಪಡಿಸಿಕೊಳ್ಳಲು ನಾವು ಬಿಡುವುದಿಲ್ಲ. ರಷ್ಯಾ ಏನನ್ನೂ ಪಡೆಯಲು ಸಾಧ್ಯವಿಲ್ಲ. ಏನೇ ಮಾಡಿದರೂ ರಷ್ಯಾ ಯುದ್ಧ ಗೆಲ್ಲಲು ಆಗುವುದಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಸಲಹೆಗಾರ ಒಲೆಕ್ಸಿ ಅರೆಸ್ಟೋವಿಚ್ ಹೇಳಿದ್ದಾರೆ.

ಇನ್ನೊಂದೆಡೆ ರಷ್ಯಾ ತಾನು ಯುದ್ಧದಲ್ಲಿ ಗೆಲುವು ಸಾಧಿಸುತ್ತಿರುವುದಾಗಿ ಹೇಳಿಕೊಂಡಿದೆ.  ಉಕ್ರೇನ್​ ಸೈನಿಕರನ್ನು ಹಿಮ್ಮೆಟ್ಟಿಸುತ್ತಿದ್ದೇವೆ. ಡೊನೆಟ್ಸ್ಕ್ ಪ್ರದೇಶದಲ್ಲಿ ಉಕ್ರೇನ್​ನ ಮಿಗ್​ 29 ಜೆಟ್​​ನ್ನು ಹೊಡೆದುರುಳಿಸಿದ್ದೇವೆ ಎಂದು ರಷ್ಯಾ ಅಧಿಕಾರಿಗಳು ಹೇಳಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ. ಹಾಗೇ, ಮರಿಯುಪೋಲ್​​ನ ಅಜೋವ್ಸ್ಟಾಲ್ ಉಕ್ಕಿನ ಗಿರಣಿಯಲ್ಲಿ ತಂಗಿರುವ ಉಕ್ರೇನ್​ ಸೈನಿಕರು ಮಂಗಳವಾರ ರಾತ್ರಿಯೊಳಗೆ ಶರಣಾಗುವಂತೆ ರಷ್ಯಾದ ಕರ್ನಲ್ ಜನರಲ್​ ಮಿಖಾಯಿಲ್ ಮಿಜಿಂಟ್ಸೆವ್ ಗಡುವು ನೀಡಿದ್ದಾರೆ ಎನ್ನಲಾಗಿದೆ.

ಇನ್ನು ಮರಿಯುಪೋಲ್​​ನಿಂದ ರಷ್ಯಾ ಸೈನಿಕರ ಗಮನ ಡಾನ್ಬಾಸ್​ನತ್ತ ತಿರುಗಿದೆ. ತುಂಬ ದಿನಗಳಿಂದ ಡಾನ್ಬಾಸ್​ಗೆ ಪ್ರವೇಶಿಸಲು ಅವರು ಕಾಯುತ್ತಿದ್ದರು. ಇದೀಗ ಅಲ್ಲಿ ಕಾಲಿಟ್ಟಿದ್ದಾರೆ. ರಷ್ಯಾ ಸೈನಿಕರು ಅದೆಷ್ಟೇ ಜನರು ಬರಲಿ, ನಾವು ಹೋರಾಡುತ್ತೇವೆ ಎಂದು ಉಕ್ರೇನ್​ ಅಧ್ಯಕ್ಷ ಝೆಲೆನ್ಸ್ಕಿ ತಿಳಿಸಿದ್ದಾರೆ.  ಸೋಮವಾರ ಲ್ವಿವ್​ನಲ್ಲಿ ರಷ್ಯಾ ನಡೆಸಿದ ಕ್ಷಿಪಣಿ ದಾಳಿಗೆ ಸುಮಾರು 4 ಮಂದಿ ಮೃತಪಟ್ಟಿದ್ದಾರೆ. ಯುದ್ಧಪೀಡಿತ ಉಕ್ರೇನ್​ನಿಂದ ಇಲ್ಲಿಯವರೆಗೆ 4 ಮಿಲಿಯನ್​​ಗಳನ್ನು ಜನರನ್ನು ಸ್ಥಳಾಂತರ ಮಾಡಲಾಗಿದೆ. ಅಂದರೆ ಅವರಿಗೆ ಮಾನವೀಯ ಕಾರಿಡಾರ್ ರಚಿಸಿಕೊಟ್ಟು ಬೇರೆಡೆಗೆ ಹೋಗಲು ಅನುಕೂಲ ಮಾಡಿಕೊಡಲಾಗಿದೆ. ಆದರೆ ಈಗೀಗ ಯುದ್ಧ ತೀವ್ರತೆ ಹೆಚ್ಚುತ್ತಿದ್ದು, ನಾಗರಿಕರನ್ನು ಬೇರೆಡೆಗೆ ಸ್ಥಳಾಂತರ ಮಾಡುವುದೂ ತೊಡಕಾಗುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ಕಂಬದ ಮೇಲೆ ಮರ ಉರುಳಿ ರಾತ್ರಿಯಿಡೀ ವಿದ್ಯುತ್ ಪೂರೈಕೆ ಸ್ಥಗಿತಗೊಂಡಾಗ ಬೆಸ್ಕಾಂ ಹೇಳಿದ್ದು ಕೆಲಸ ನಡೀತಿದೆ!

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?