AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಡಲೇ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಶರಣಾಗಿ: ಉಕ್ರೇನ್​ ಸೈನಿಕರಿಗೆ ಎಚ್ಚರಿಕೆ ನೀಡಿದ ರಷ್ಯಾ

ಮರಿಯುಪೋಲ್​​ನಿಂದ ರಷ್ಯಾ ಸೈನಿಕರ ಗಮನ ಡಾನ್ಬಾಸ್​ನತ್ತ ತಿರುಗಿದೆ. ತುಂಬ ದಿನಗಳಿಂದ ಡಾನ್ಬಾಸ್​ಗೆ ಪ್ರವೇಶಿಸಲು ಅವರು ಕಾಯುತ್ತಿದ್ದರು. ಇದೀಗ ಅಲ್ಲಿ ಕಾಲಿಟ್ಟಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ಕ್ಸಿ ತಿಳಿಸಿದ್ದಾರೆ.

ಕೂಡಲೇ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಶರಣಾಗಿ: ಉಕ್ರೇನ್​ ಸೈನಿಕರಿಗೆ ಎಚ್ಚರಿಕೆ ನೀಡಿದ ರಷ್ಯಾ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 19, 2022 | 5:36 PM

Share

ತಕ್ಷಣವೇ ಶಸ್ತ್ರಾಸ್ತ್ರ ತ್ಯಜಿಸಿ ಎಂದು ರಷ್ಯಾ, ಉಕ್ರೇನ್​ ಸೈನಿಕರಿಗೆ ಹೇಳಿದೆ. ನಿನ್ನೆಯಿಂದ ಉಕ್ರೇನ್​ನ ಬಂಡುಕೋರರ ಹಿಡಿತದಲ್ಲಿರುವ  ಡಾನ್ಬಾಸ್​ನಲ್ಲಿ ರಷ್ಯಾ ಸೇನೆಯ ಆಕ್ರಮಣ ಶುರುವಾಗಿದೆ. ಅದಾದ ಕೆಲವೇ ಹೊತ್ತಲ್ಲಿ, ಮರಿಯುಪೋಲ್​​ ರಕ್ಷಣೆಗೆ ನಿಂತಿರುವ ಉಕ್ರೇನ್​ ಸೈನಿಕರಿಗೆ ರಷ್ಯಾ ಈ ಎಚ್ಚರಿಕೆ ನೀಡಿತ್ತು. ಆದರೆ ಉಕ್ರೇನ್​ ಸೈನ್ಯ ಶಸ್ತ್ರ ತ್ಯಜಿಸುವುದಿಲ್ಲ. ಡಾನ್ಬಾಸ್ ಪ್ರದೇಶದಲ್ಲಿ ರಷ್ಯಾ ನಿನ್ನೆಯಿಂದ ಯುದ್ಧ ಶುರುಮಾಡಿದೆ. ಆದರೆ ಅದನ್ನು ವಶಪಡಿಸಿಕೊಳ್ಳಲು ನಾವು ಬಿಡುವುದಿಲ್ಲ. ರಷ್ಯಾ ಏನನ್ನೂ ಪಡೆಯಲು ಸಾಧ್ಯವಿಲ್ಲ. ಏನೇ ಮಾಡಿದರೂ ರಷ್ಯಾ ಯುದ್ಧ ಗೆಲ್ಲಲು ಆಗುವುದಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಸಲಹೆಗಾರ ಒಲೆಕ್ಸಿ ಅರೆಸ್ಟೋವಿಚ್ ಹೇಳಿದ್ದಾರೆ.

ಇನ್ನೊಂದೆಡೆ ರಷ್ಯಾ ತಾನು ಯುದ್ಧದಲ್ಲಿ ಗೆಲುವು ಸಾಧಿಸುತ್ತಿರುವುದಾಗಿ ಹೇಳಿಕೊಂಡಿದೆ.  ಉಕ್ರೇನ್​ ಸೈನಿಕರನ್ನು ಹಿಮ್ಮೆಟ್ಟಿಸುತ್ತಿದ್ದೇವೆ. ಡೊನೆಟ್ಸ್ಕ್ ಪ್ರದೇಶದಲ್ಲಿ ಉಕ್ರೇನ್​ನ ಮಿಗ್​ 29 ಜೆಟ್​​ನ್ನು ಹೊಡೆದುರುಳಿಸಿದ್ದೇವೆ ಎಂದು ರಷ್ಯಾ ಅಧಿಕಾರಿಗಳು ಹೇಳಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ. ಹಾಗೇ, ಮರಿಯುಪೋಲ್​​ನ ಅಜೋವ್ಸ್ಟಾಲ್ ಉಕ್ಕಿನ ಗಿರಣಿಯಲ್ಲಿ ತಂಗಿರುವ ಉಕ್ರೇನ್​ ಸೈನಿಕರು ಮಂಗಳವಾರ ರಾತ್ರಿಯೊಳಗೆ ಶರಣಾಗುವಂತೆ ರಷ್ಯಾದ ಕರ್ನಲ್ ಜನರಲ್​ ಮಿಖಾಯಿಲ್ ಮಿಜಿಂಟ್ಸೆವ್ ಗಡುವು ನೀಡಿದ್ದಾರೆ ಎನ್ನಲಾಗಿದೆ.

ಇನ್ನು ಮರಿಯುಪೋಲ್​​ನಿಂದ ರಷ್ಯಾ ಸೈನಿಕರ ಗಮನ ಡಾನ್ಬಾಸ್​ನತ್ತ ತಿರುಗಿದೆ. ತುಂಬ ದಿನಗಳಿಂದ ಡಾನ್ಬಾಸ್​ಗೆ ಪ್ರವೇಶಿಸಲು ಅವರು ಕಾಯುತ್ತಿದ್ದರು. ಇದೀಗ ಅಲ್ಲಿ ಕಾಲಿಟ್ಟಿದ್ದಾರೆ. ರಷ್ಯಾ ಸೈನಿಕರು ಅದೆಷ್ಟೇ ಜನರು ಬರಲಿ, ನಾವು ಹೋರಾಡುತ್ತೇವೆ ಎಂದು ಉಕ್ರೇನ್​ ಅಧ್ಯಕ್ಷ ಝೆಲೆನ್ಸ್ಕಿ ತಿಳಿಸಿದ್ದಾರೆ.  ಸೋಮವಾರ ಲ್ವಿವ್​ನಲ್ಲಿ ರಷ್ಯಾ ನಡೆಸಿದ ಕ್ಷಿಪಣಿ ದಾಳಿಗೆ ಸುಮಾರು 4 ಮಂದಿ ಮೃತಪಟ್ಟಿದ್ದಾರೆ. ಯುದ್ಧಪೀಡಿತ ಉಕ್ರೇನ್​ನಿಂದ ಇಲ್ಲಿಯವರೆಗೆ 4 ಮಿಲಿಯನ್​​ಗಳನ್ನು ಜನರನ್ನು ಸ್ಥಳಾಂತರ ಮಾಡಲಾಗಿದೆ. ಅಂದರೆ ಅವರಿಗೆ ಮಾನವೀಯ ಕಾರಿಡಾರ್ ರಚಿಸಿಕೊಟ್ಟು ಬೇರೆಡೆಗೆ ಹೋಗಲು ಅನುಕೂಲ ಮಾಡಿಕೊಡಲಾಗಿದೆ. ಆದರೆ ಈಗೀಗ ಯುದ್ಧ ತೀವ್ರತೆ ಹೆಚ್ಚುತ್ತಿದ್ದು, ನಾಗರಿಕರನ್ನು ಬೇರೆಡೆಗೆ ಸ್ಥಳಾಂತರ ಮಾಡುವುದೂ ತೊಡಕಾಗುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ಕಂಬದ ಮೇಲೆ ಮರ ಉರುಳಿ ರಾತ್ರಿಯಿಡೀ ವಿದ್ಯುತ್ ಪೂರೈಕೆ ಸ್ಥಗಿತಗೊಂಡಾಗ ಬೆಸ್ಕಾಂ ಹೇಳಿದ್ದು ಕೆಲಸ ನಡೀತಿದೆ!

ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ