AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಪ್ರಧಾನಿಯಾದಾಗ ನೀನು ಹುಟ್ಟಿರಲೇ ಇಲ್ಲ: ಪಾಕ್ ಸೇನಾಧಿಕಾರಿ ಮೇಲೆ ಗುಡುಗಿದ ಇಮ್ರಾನ್ ಖಾನ್

Imran Khan ತನ್ನನ್ನು ಕಪಟ ವ್ಯಕ್ತಿ ಎಂದು ಕರೆದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ISPR) ಡೈರೆಕ್ಟರ್-ಜನರಲ್ ಮೇಜರ್ ಜನರಲ್ ಅಹ್ಮದ್ ಷರೀಫ್ ಚೌಧರಿನ್ನು ಟೀಕಿಸಿದ ಇಮ್ರಾನ್ ಖಾನ್,  ಮಿಸ್ಟರ್ ಡಿಜಿ ಐಎಸ್​​ಪಿಆರ್,​​ ನಾನು ನನ್ನ ದೇಶವನ್ನು ಪ್ರತಿನಿಧಿಸುವಾಗ ಮತ್ತು ಅದಕ್ಕೆ ಒಳ್ಳೆಯ ಹೆಸರನ್ನು ಗಳಿಸಿದಾಗ ನೀವು ಹುಟ್ಟಿರಲಿಲ್ಲ

ನಾನು ಪ್ರಧಾನಿಯಾದಾಗ ನೀನು ಹುಟ್ಟಿರಲೇ ಇಲ್ಲ: ಪಾಕ್ ಸೇನಾಧಿಕಾರಿ ಮೇಲೆ ಗುಡುಗಿದ ಇಮ್ರಾನ್ ಖಾನ್
ಇಮ್ರಾನ್ ಖಾನ್
ರಶ್ಮಿ ಕಲ್ಲಕಟ್ಟ
|

Updated on: May 14, 2023 | 2:06 PM

Share

ಲಾಹೋರ್: ಸುಪ್ರೀಂಕೋರ್ಟ್‌ನ (Supreme Court) ಆದೇಶದ ಮೇರೆಗೆ ಭ್ರಷ್ಟಾಚಾರ ನಿಗ್ರಹ ದಳದ ಬಂಧನದಿಂದ ಬಿಡುಗಡೆಯಾದ ನಂತರ ಶನಿವಾರ ದೇಶವನ್ನುದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ, ಪಾಕಿಸ್ತಾನದ (Pakistan) ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಅವರು ರಾಜಕೀಯಕ್ಕೆ ಧುಮುಕಲು ತನ್ನದೇ ಆದ ರಾಜಕೀಯ ಪಕ್ಷವನ್ನು ರಚಿಸುವಂತೆ ಮಿಲಿಟರಿ ಅಧಿಕಾರಿಗೆ ಸಲಹೆ ನೀಡಿದ್ದಾರೆ. ಅದೇ ವೇಳೆ ದೇಶವನ್ನು ಸಂಪೂರ್ಣ ಅವ್ಯವಸ್ಥೆಯಿಂದ ರಕ್ಷಿಸಲು ಹೆಚ್ಚಿನದ್ದು ಯೋಚಿಸಿ ಎಂದಿದ್ದಾರೆ. ರಾತ್ರಿ 8 ಗಂಟೆಗೆ ತಮ್ಮ ಜಮಾನ್ ಪಾರ್ಕ್ ನಿವಾಸದಿಂದ ಭಾಷಣ ಮಾಡಿದ ಖಾನ್, ತನ್ನ ಪಕ್ಷವಾದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಅನ್ನು ಹತ್ತಿಕ್ಕಲು ಮಿಲಿಟರಿ  ಕೈಗೊಂಡಿರುವ ವರ್ತನೆ ಬಗ್ಗೆ ಕೋಪಗೊಂಡಿದ್ದಾರೆ. ಪಿಟಿಐ ವಿರೋಧಿ ನೀತಿ ಯಾಕೆ? ಅದನ್ನು ಪರಿಶೀಲಿಸಿ ಎಂದು ಮಿಲಿಟರಿ ನಾಯಕತ್ವಕ್ಕೆ ಖಾನ್ ಹೇಳಿದ್ದಾರೆ. ಈ ನಿಲುವುಗೆ ಈಗಾಗಲೇ ದೇಶವನ್ನು ದುರಂತದ ಅಂಚಿಗೆ ತಂದಿವೆ ಎಂದು ಖಾನ್ ಹೇಳಿದ್ದಾರೆ. ಶುಕ್ರವಾರ ಜಾಮೀನು ದೊರೆತರೂ ಮರು ಬಂಧನದ ಭಯದಿಂದ ಇಸ್ಲಾಮಾಬಾದ್ ಹೈಕೋರ್ಟ್ (Islamabad High Court) ಆವರಣದಲ್ಲಿ ಗಂಟೆಗಳ ಕಾಲ ಬಂಧಿತರಂತಿದ್ದ ಖಾನ್, ಶನಿವಾರ ಲಾಹೋರ್ ಗೆ ಮರಳಿದ್ದರು.

ಲಾಹೋರ್‌ಗೆ ಹೊರಡುವ ಮೊದಲು, 70 ವರ್ಷದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಮುಖ್ಯಸ್ಥರು ಎಲ್ಲಾ ಪ್ರಕರಣಗಳಲ್ಲಿ ಹೈಕೋರ್ಟ್ ಅವರಿಗೆ ಜಾಮೀನು ನೀಡಿದ ನಂತರ ತನ್ನನ್ನು ಅಪಹರಣ ಮಾಡಿದ ಸರ್ಕಾರ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ತನ್ನನ್ನು ಕಪಟ ವ್ಯಕ್ತಿ ಎಂದು ಕರೆದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ISPR) ಡೈರೆಕ್ಟರ್-ಜನರಲ್ ಮೇಜರ್ ಜನರಲ್ ಅಹ್ಮದ್ ಷರೀಫ್ ಚೌಧರಿನ್ನು ಟೀಕಿಸಿದ ಇಮ್ರಾನ್ ಖಾನ್,  ಮಿಸ್ಟರ್ ಡಿಜಿ ಐಎಸ್​​ಪಿಆರ್,​​ ನಾನು ನನ್ನ ದೇಶವನ್ನು ಪ್ರತಿನಿಧಿಸುವಾಗ ಮತ್ತು ಅದಕ್ಕೆ ಒಳ್ಳೆಯ ಹೆಸರನ್ನು ಗಳಿಸಿದಾಗ ನೀವು ಹುಟ್ಟಿರಲಿಲ್ಲ. ನನ್ನನ್ನು ಕಪಟ ವ್ಯಕ್ತಿ ಮತ್ತು ಸೇನೆಯ ವಿರೋಧಿ ಎಂದು ಕರೆದಿದ್ದಕ್ಕಾಗಿ ನೀವು ನಾಚಿಕೆಪಡಬೇಕು. ಮಿಲಿಟರಿಯ ಮಾಧ್ಯಮ ವಿಭಾಗವಾದ ISPR ಅಂತಹ ವಿಷಯಗಳನ್ನು (ರಾಜಕಾರಣಿಯ ಬಗ್ಗೆ) ಎಂದಿಗೂ ಹೇಳಿಲ್ಲ.

ನೀವು ರಾಜಕೀಯಕ್ಕೆ ಧುಮುಕಿದ್ದೀರಿ, ನೀವೇಕೆ ನಿಮ್ಮ ಸ್ವಂತ ಪಕ್ಷವನ್ನು ರಚಿಸಬಾರದು?. ಇಂತಹ ಕ್ಷುಲ್ಲಕ ಆರೋಪಗಳನ್ನು ಮಾಡುವ ಹಕ್ಕು ನಿಮಗೆ ಯಾರು ನೀಡಿದ್ದಾರೆ. ನಾನು ಮಾಡಿದಷ್ಟು ಸೇನೆಗೆ ಬೇರೆ ಯಾರೂ ಹಾನಿ ಮಾಡಿಲ್ಲ ಎಂದು ಹೇಳಲು ಸ್ವಲ್ಪ ನಾಚಿಕೆಪಡಬೇಕು. ನೀವು ನಮ್ಮನ್ನು ತುಳಿಯುತ್ತೀರಿ ಎಂದಿದ್ದಾರೆ ಖಾನ್.

ನಾನು ಪ್ರಧಾನಿಯಾಗಿದ್ದಾಗ ಪಾಕಿಸ್ತಾನ ಸೇನೆಯ ಇಮೇಜ್ ಚೆನ್ನಾಗಿತ್ತೇ ಅಥವಾ ಈಗ ಚೆನ್ನಾಗಿದೆಯೇ? ಆಗ ಜನರು ಸೇನೆಯನ್ನು ಇಷ್ಟಪಟ್ಟಿದ್ದರು. ಸೇನಾ ಮುಖ್ಯಸ್ಥ (ಮಾಜಿ ಜನರಲ್ ಕಮರ್ ಜಾವೇದ್ ಬಾಜ್ವಾ) ನನ್ನ ಬೆನ್ನಿಗೆ ಚೂರಿ ಹಾಕಿ ಪಾಕಿಸ್ತಾನದ ಅತ್ಯಂತ ಕುಖ್ಯಾತ ಮತ್ತು ಭ್ರಷ್ಟ ಕ್ರಿಮಿನಲ್‌ಗಳನ್ನು ಅಧಿಕಾರಕ್ಕೆ ತಂದಾಗ, ಜನಸಾಮಾನ್ಯರು ಸೇನೆಯನ್ನು ಟೀಕಿಸಲು ಪ್ರಾರಂಭಿಸಿದರು. ಅದು ನನ್ನಿಂದಲ್ಲ. ಸೇನಾ ಮುಖ್ಯಸ್ಥರ ಕ್ರಮಗಳು ಸೇನೆಯನ್ನು ಗುರಿಯಾಗಿಸಿಕೊಂಡು ಟೀಕೆಗೆ ಗುರಿಯಾಗುತ್ತಿವೆ. ಜನರು ತನ್ನನ್ನು ನಂಬಿರುವುದರಿಂದ ಜಗತ್ತಿನಾದ್ಯಂತ ಸಹಾಯ ಸಿಕ್ಕಿತು ಎಂದು ಖಾನ್ ಹೇಳಿದ್ದಾರೆ.

ಇದನ್ನೂ ಓದಿ: Operation Samudragupta: ಹಡಗಿನ ಮೂಲಕ ಭಾರತಕ್ಕೆ ಬರುತ್ತಿತ್ತು 12 ಸಾವಿರ ಕೋಟಿ ರೂ. ಮೌಲ್ಯದ ಡ್ರಗ್ಸ್, ಪಾಕಿಸ್ತಾನದೊಂದಿಗೆ ನೇರ ಸಂಪರ್ಕ

ನೀವು ಇಮ್ರಾನ್ ಖಾನ್ ಸುಳ್ಳು ಹೇಳುತ್ತಿದ್ದಾರೆ ಎಂದು ಹೇಳುತ್ತಿದ್ದೀರಿ. ಅವರು ನನ್ನನ್ನು ನಂಬಿ ಮತ್ತು ಪ್ರಾಮಾಣಿಕ ವ್ಯಕ್ತಿ ಎಂದು ಪರಿಗಣಿಸಿದ್ದರಿಂದ ನನಗೆ ಹೆಚ್ಚಿನ ಸಹಾಯ ನೀಡಿದರು. ಪಾಕಿಸ್ತಾನದ ಸುಪ್ರೀಂ ಕೋರ್ಟ್ ಕೂಡ ನನ್ನನ್ನು ಪ್ರಾಮಾಣಿಕ (ಸಾದಿಕ್ ಔರ್ ಅಮೀನ್) ಎಂದು ಘೋಷಿಸಿದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು