AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ ಮುನ್ನಡೆಸಲು ಇಮ್ರಾನ್ ಖಾನ್ ಸರ್ಕಾರ ಅಸಮರ್ಥ: ಪಾಕಿಸ್ತಾನ ಸುಪ್ರೀಂಕೋರ್ಟ್

ಗಣತಿಯನ್ನು ಅರ್ಥ ಮಾಡಿಕೊಳ್ಳುವುದು ದೇಶವನ್ನು ನಡೆಸಲು ಬೇಕಾಗಿರುವ ಮೂಲ ಅಗತ್ಯ. ಗಣತಿಯ ಫಲಿತಾಂಶವನ್ನು ಬಿಡುಗಡೆಗೊಳಿಸುವುದು ಸರ್ಕಾರದ ಆದ್ಯತೆ ಆಗಿರಬೇಕಲ್ಲವೇ ಎಂದು ನ್ಯಾಯಮೂರ್ತಿ ಇಸಾ ಪ್ರಶ್ನಿಸಿದ್ದಾರೆ.

ದೇಶ ಮುನ್ನಡೆಸಲು ಇಮ್ರಾನ್ ಖಾನ್ ಸರ್ಕಾರ ಅಸಮರ್ಥ: ಪಾಕಿಸ್ತಾನ ಸುಪ್ರೀಂಕೋರ್ಟ್
ಪಾಕ್ ಪ್ರಧಾನಿ ಇಮ್ರಾನ್ ಖಾನ್
TV9 Web
| Edited By: |

Updated on:Apr 06, 2022 | 7:06 PM

Share

ಇಸ್ಲಾಮಾಬಾದ್: ಕೌನ್ಸಿಲ್ ಆಫ್ ಕಾಮನ್ ಇಂಟರೆಸ್ಟ್ (CCI) ಸಭೆಯನ್ನು ಕಳೆದ ಎರಡು ತಿಂಗಳಿನಿಂದ ನಡೆಸಲು ವಿಫಲವಾಗಿರುವುದಕ್ಕೆ ಪಾಕ್ ಸುಪ್ರೀಂ ಕೋರ್ಟ್ ಇಮ್ರಾನ್ ಖಾನ್ ನೇತೃತ್ವದ ಸರ್ಕಾರವನ್ನು ಕಟುವಾಗಿ ಟೀಕಿಸಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದ ವಿಚಾರಣೆಯಲ್ಲಿ ಸರ್ಕಾರ ಭಾಗವಹಿಸಿರುವ ವಿಧಾನದ ಬಗ್ಗೆ ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿ ಕಾಜಿ ಫಯೆಜ್ ಇಸಾ ನೇತೃತ್ವದ ದ್ವಿಸದಸ್ಯ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.

ಗಣತಿಯನ್ನು ಅರ್ಥ ಮಾಡಿಕೊಳ್ಳುವುದು ದೇಶವನ್ನು ನಡೆಸಲು ಬೇಕಾಗಿರುವ ಮೂಲ ಅಗತ್ಯ. ಗಣತಿಯ ಫಲಿತಾಂಶವನ್ನು ಬಿಡುಗಡೆಗೊಳಿಸುವುದು ಸರ್ಕಾರದ ಆದ್ಯತೆ ಆಗಿರಬೇಕಲ್ಲವೇ ಎಂದು ನ್ಯಾಯಮೂರ್ತಿ ಇಸಾ ಪ್ರಶ್ನಿಸಿದ್ದಾರೆ. ಈ ಬಗ್ಗೆ ಕೌನ್ಸಿಲ್​ನಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದಿರುವುದಕ್ಕೆ ಸರ್ಕಾರವನ್ನು ಟೀಕಿಸಿದ್ದಾರೆ.

ಒಂದೋ ಈ ಸರ್ಕಾರಕ್ಕೆ ದೇಶವನ್ನು ಮುನ್ನಡೆಸುವ ಶಕ್ತಿ ಇಲ್ಲ ಅಥವಾ ಸರ್ಕಾರಕ್ಕೆ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ನ್ಯಾಯಮೂರ್ತಿ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ. ಅಷ್ಟೇ ಅಲ್ಲದೆ, CCI ವರದಿಯನ್ನು ಯಾಕೆ ಗುಪ್ತವಾಗಿ ಇರಿಸಲಾಗಿದೆ ಎಂದೂ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಸರ್ಕಾರ ಹೀಗೆಯೇ ನಡೆಯುತ್ತದೆಯೇ? ಕೇಂದ್ರ ಮತ್ತು ಪ್ರಾದೇಶಿಕ ಆಡಳಿತ ಏನು ಮಾಡುತ್ತಿದೆ ಎಂದು ದೇಶ ತಿಳಿಯಲು ಬಯಸುತ್ತದೆ ಎಂದು ಅವರು ಹೇಳಿದ್ದಾರೆ.

ಪಂಜಾಬ್​ ಪ್ರಾಂತ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಕಾಲದಲ್ಲಿ ನಡೆಸದಿರುವ ಬಗ್ಗೆಯೂ ಸುಪ್ರೀಂಕೋರ್ಟ್​ನ ದ್ವಿಸದಸ್ಯ ಪೀಠ ಆಕ್ಷೇಪ ವ್ಯಕ್ತಪಡಿಸಿದೆ. ಪಂಜಾಬ್ ಸರ್ಕಾರಕ್ಕೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುವುದು ಬೇಕಾಗಿಲ್ಲ. ಪೂರ್ಣ ಪಂಜಾಬ್ ವಿಧಾನಸಭೆಯ ನಿರ್ಣಯವನ್ನು ಕೇವಲ ವ್ಯಕ್ತಿಯ ಮಾತಿನ ಮೇರೆಗೆ  ಉಲ್ಲಂಘಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಕೋರ್ಟ್​ಗೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಅಟಾರ್ನಿ ಜನರಲ್ (AAG), ಮಾರ್ಚ್ 24ರಂದು ಸಿಸಿಐ ಸಭೆ ನಡೆಸಲಿದೆ. ಅದೊಂದು ಸೂಕ್ಷ್ಮ ವಿಚಾರವಾಗಿದೆ. ಹಾಗಾಗಿ, ಪ್ರಜ್ಞಾಪೂರ್ವಕವಾಗಿ ನಿರ್ಧಾರ ಕೈಗೊಳ್ಳಲು ಸರ್ಕಾರ ಬಯಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ ಈ ಟಿಕ್​ಟಾಕ್​ ಸ್ಟಾರ್​ ಐಶ್ವರ್ಯಾ ರೈ ಪಡಿಯಚ್ಚು!

ಇದನ್ನೂ ಓದಿ: ನಾವು ಎಂದಿಗೂ ಶಾಂತಿಯ ಪರ; ಭಾರತ-ಪಾಕಿಸ್ತಾನ ಕದನವಿರಾಮ ಒಪ್ಪಂದ ಸ್ವಾಗತಿಸಿ ಇಮ್ರಾನ್ ಖಾನ್ ಟ್ವೀಟ್

Published On - 3:28 pm, Tue, 16 March 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್