AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಮ್ರಾನ್ ಹೇಳುತ್ತಾರೆ, ಜುನಾಗಢ್ ಪಾಕಿಸ್ತಾನಕ್ಕೆ ಸೇರಿದ್ದಂತೆ!

ಪಾಕಿಸ್ತಾನದ ಪ್ರಧಾನ ಮಂತ್ರಿ ಇಮಾನ್ ಖಾನ್ ಹೊಸ ಕ್ಯಾತೆ ಶುರು ಮಾಡಿದ್ದಾರೆ. ತಮ್ಮ ದೇಶದ ಹೊಸ ರಾಜಕೀಯ ನಕಾಶೆಯೊಂದನ್ನು ಬಿಡುಗಡೆ ಮಾಡಿರುವ ಖಾನ್ ಸಾಹೇಬರು ಭಾರತದ ವಶದಲ್ಲಿರುವ ಕಾಶ್ಮೀರ ಮತ್ತು ಜುನಾಗಢ್ ಪ್ರದೇಶವನ್ನು ಪಾಕಿಸ್ತಾನಕ್ಕೆ ಸೇರಿಸಿಕೊಂಡಿದ್ದಾರೆ! ಮತ್ತೂ ತಮಾಷೆಯ ಸಂಗತಿಯೆಂದರೆ, ಅವರ ಸಚಿಸ ಸಂಪುಟ ಆ ನಕಾಶೆಯನ್ನು ಅನುಮೋದಿಸಿದೆ!! ತಿಕ್ಕಲುತನ ಮತ್ತು ಮೂರ್ಖತನವೆಂದರೆ ಪ್ರಾಯಶಃ ಇದೇ ಇರಬೇಕು. ಇಮ್ರಾನ್ ಚೆನ್ನಾಗಿ ಓದಿಕೊಂಡಿರುವದರಿಂದ ಇಂಥ ಬಾಲಿಶ ಪ್ರಯತ್ನಕ್ಕೆ ಮುಂದಾಗಬಾರದಿತ್ತು. ಸೇನಾ ನಾಯಕರು ಮತ್ತು ಮೌಲ್ವಿಗಳನ್ನು ಮೆಚ್ಚಿಸಲು ಆ ದೇಶದ […]

ಇಮ್ರಾನ್ ಹೇಳುತ್ತಾರೆ, ಜುನಾಗಢ್ ಪಾಕಿಸ್ತಾನಕ್ಕೆ ಸೇರಿದ್ದಂತೆ!
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 04, 2020 | 9:24 PM

Share

ಪಾಕಿಸ್ತಾನದ ಪ್ರಧಾನ ಮಂತ್ರಿ ಇಮಾನ್ ಖಾನ್ ಹೊಸ ಕ್ಯಾತೆ ಶುರು ಮಾಡಿದ್ದಾರೆ. ತಮ್ಮ ದೇಶದ ಹೊಸ ರಾಜಕೀಯ ನಕಾಶೆಯೊಂದನ್ನು ಬಿಡುಗಡೆ ಮಾಡಿರುವ ಖಾನ್ ಸಾಹೇಬರು ಭಾರತದ ವಶದಲ್ಲಿರುವ ಕಾಶ್ಮೀರ ಮತ್ತು ಜುನಾಗಢ್ ಪ್ರದೇಶವನ್ನು ಪಾಕಿಸ್ತಾನಕ್ಕೆ ಸೇರಿಸಿಕೊಂಡಿದ್ದಾರೆ! ಮತ್ತೂ ತಮಾಷೆಯ ಸಂಗತಿಯೆಂದರೆ, ಅವರ ಸಚಿಸ ಸಂಪುಟ ಆ ನಕಾಶೆಯನ್ನು ಅನುಮೋದಿಸಿದೆ!!

ತಿಕ್ಕಲುತನ ಮತ್ತು ಮೂರ್ಖತನವೆಂದರೆ ಪ್ರಾಯಶಃ ಇದೇ ಇರಬೇಕು. ಇಮ್ರಾನ್ ಚೆನ್ನಾಗಿ ಓದಿಕೊಂಡಿರುವದರಿಂದ ಇಂಥ ಬಾಲಿಶ ಪ್ರಯತ್ನಕ್ಕೆ ಮುಂದಾಗಬಾರದಿತ್ತು. ಸೇನಾ ನಾಯಕರು ಮತ್ತು ಮೌಲ್ವಿಗಳನ್ನು ಮೆಚ್ಚಿಸಲು ಆ ದೇಶದ ಪ್ರಧಾನ ಮಂತ್ರಿಗಳು, ಅಧ್ಯಕ್ಷರು ನಿರಂತರವಾಗಿ ಪ್ರಯತ್ನಿಸುತ್ತಿರುತ್ತಾರೆ, ಇದಕ್ಕೆ ಇಮ್ರಾನ್ ಖಾನ್ ಕೂಡ ಹೊರತಾದಂತಿಲ್ಲ.

ದೇಶ ಇಬ್ಭಾಗವಾದಲೂ ಪಾಕಿಸ್ತಾನಿ ನಾಯಕರು ವಿಶ್ವಸಂಸ್ಥೆಗೆ ಮನವಿಯೊಂದನ್ನು ಸಲ್ಲಿಸಿ ಜುನಾಗಢ್ ತಮಗೆ ಸೇರಿದ್ದೆಂದು ಅರುಹಿದ್ದರು. ವಿಶ್ವಸಂಸ್ಥೆಯು, ಕಾಶ್ಮೀರದಲ್ಲಿದ್ದ ತನ್ನ ಕಮೀಷನ್​ಗೆ ಪಾಕಿಸ್ತಾನದ ಮನವಿಯನ್ನು ಪರಿಶೀಲಿಸುವಂತೆ ಹೇಳಿತ್ತು. ಆ ವಿಷಯ ಅಷ್ಟಕ್ಕೇ ನಿಂತುಹೋಗಿದ್ದು ಬೇರೆ ವಿಚಾರ.

ಸೌರಾಷ್ಟ್ರ ಪ್ರಾಂತ್ಯದ ಭಾಗವಾಗಿರುವ ಜುನಾಗಢ್ ಒಂದು ಸುಂದರ ಬಂದರು ನಗರ. ಚಂದ್ರಗುಪ್ತ ಮೌರ್ಯ ಕ್ರಿ. ಪೂ 319ರಲ್ಲಿ ಕಟ್ಟಿದ ಇಲ್ಲಿನ ಕೋಟೆ, ಸಂಸ್ಕೃತಿ, ನೃತ್ಯ-ಹಾಡುಗಳ ಪರಂಪರೆ, ಮಸಾಲೆ ಪದಾರ್ಥಗಳು, ಮತ್ತು ಉಪ್ಪಿನಕಾಯಿ ಜನಜನಿತವಾಗಿವೆ.

ಇದುವರೆಗೆ ಜುನಾಗಢ್ ಬಗ್ಗೆ ಚಕಾರವೆತ್ತದ ಪಾಕಿಸ್ತಾನ ಈಗ ಮತ್ತೆ ಕಾಲು ಕೆದರಿ ಜಗಳಕ್ಕೆ ಬರುವ ಹುನ್ನಾರ ಮಾಡಿದಂತಿದೆ. ಭಾರತ ರಫೇಲ್ ಯುದ್ಧ ವಿಮಾನಗಳನ್ನು ತರಿಸಿಕೊಂಡರೂ ತಾನು ಹೆದರಿಲ್ಲ ಎಂದು ಸಾರುವ ಪ್ರಯತ್ನವೇನಾದರೂ ಇಮ್ರಾನ್ ಖಾನ್ ಮಾಡುತ್ತಿದ್ದರೆ ಅವರು ತಮ್ಮ ಯೋಚನಾಧಾಟಿಯನ್ನು ಬದಲಾಯಿಸಿಕೊಳ್ಳುವುದು ಅವರಿಗೂ ಮತ್ತು ಅವರ ದೇಶಕ್ಕೂ ಒಳ್ಳೆಯದೆಂದು ಭಾರತೀಯರು ಅಂದುಕೊಳ್ಳುತ್ತಿದ್ದಾರೆ. ಯಾಕೆಂದರೆ ರಫೇಲ್ ಇಲ್ಲದಾಗಲೂ ಭಾರತ, ಪಾಕಿಸ್ತಾನವನ್ನು ಮೂರ್ನಾಲ್ಕು ಬಾರಿ ಬಗ್ಗುಬಡಿದಿರುವುದು ವಿಶ್ವಕ್ಕೇ ಗೊತ್ತಿದೆ. ವಿಷಯ ಅಷ್ಟೇ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​