AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್​ನಿಂದಲೇ ತನ್ನ ಸೇನೆಗೆ ಭಾರತೀಯರ ನೇಮಕಾತಿ ನಿಲ್ಲಿಸಲಾಗಿದೆ ಎಂದ ರಷ್ಯಾ

ತನ್ನ ಸೇನೆಗೆ ಭಾರತೀಯರ ನೇಮಕಾರಿಯನ್ನು ಕಳೆದ ಏಪ್ರಿಲ್​ನಿಂದಲೇ ನಿಲ್ಲಿಸಲಾಗಿದೆ ಎಂದು ರಷ್ಯಾ ರಾಯಭಾರಿ ಕಚೇರಿ ತಿಳಿಸಿದೆ. ರಷ್ಯಾದ ಸೇನೆಗೆ ನೇಮಕಗೊಂಡಿರುವ 91 ಭಾರತೀಯರ ಸ್ಥಿತಿಗತಿ ಕುರಿತು ಉಭಯ ಪಕ್ಷಗಳು ಭಿನ್ನ ಅಭಿಪ್ರಾಯಗಳನ್ನು ಹೊಂದಿವೆ ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್ ಸಂಸತ್ತಿನಲ್ಲಿ ಮಾಹಿತಿ ನೀಡಿದ ನಂತರ ರಷ್ಯಾ ರಾಯಭಾರಿ ಕಚೇರಿಯು ರಷ್ಯಾದ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿರುವವರ ಭಾರತೀಯರ ಸ್ಥಿತಿಗತಿಯನ್ನು ವಿವರಿಸಿದೆ

ಏಪ್ರಿಲ್​ನಿಂದಲೇ ತನ್ನ ಸೇನೆಗೆ ಭಾರತೀಯರ ನೇಮಕಾತಿ ನಿಲ್ಲಿಸಲಾಗಿದೆ ಎಂದ ರಷ್ಯಾ
ರಷ್ಯಾ ಸೇನೆ
ನಯನಾ ರಾಜೀವ್
|

Updated on: Aug 10, 2024 | 4:59 PM

Share

ಈ ವರ್ಷದ ಏಪ್ರಿಲ್‌ನಲ್ಲಿ ಭಾರತೀಯ ಪ್ರಜೆಗಳನ್ನು ತನ್ನ ಸಶಸ್ತ್ರ ಪಡೆಗಳಿಗೆ ನೇಮಿಸಿಕೊಳ್ಳುವುದನ್ನು ನಿಲ್ಲಿಸಿರುವುದಾಗಿ ರಷ್ಯಾ ಶನಿವಾರ ಹೇಳಿದೆ. ಸ್ವಯಂಪ್ರೇರಿತವಾಗಿ ಮಿಲಿಟರಿ ಸೇವೆಗೆ ಒಪ್ಪಂದ ಮಾಡಿಕೊಂಡ ಭಾರತೀಯರನ್ನು ಶೀಘ್ರವಾಗಿ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದೆ.

ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಭಾರತೀಯರನ್ನು ಸೇನೆಗೆ ಒತ್ತಾಯಪೂರ್ವಕವಾಗಿ ಸೇರಿಸಿಕೊಂಡಿತ್ತು. ರಷ್ಯಾದ ಸೇನೆಗೆ ನೇಮಕಗೊಂಡಿರುವ 91 ಭಾರತೀಯರ ಸ್ಥಿತಿಗತಿ ಕುರಿತು ಉಭಯ ಪಕ್ಷಗಳು ಭಿನ್ನ ಅಭಿಪ್ರಾಯಗಳನ್ನು ಹೊಂದಿವೆ ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್ ಸಂಸತ್ತಿನಲ್ಲಿ ಮಾಹಿತಿ ನೀಡಿದ ನಂತರ ರಷ್ಯಾ ರಾಯಭಾರಿ ಕಚೇರಿಯು ರಷ್ಯಾದ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿರುವವರ ಭಾರತೀಯರ ಸ್ಥಿತಿಗತಿಯನ್ನು ವಿವರಿಸಿದೆ.

ಜೈಶಂಕರ್ ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿ, ಭಾರತವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಮತ್ತು ರಷ್ಯಾದ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ತನ್ನ ಎಲ್ಲಾ ನಾಗರಿಕರನ್ನು ಬಿಡುಗಡೆ ಮತ್ತು ವಾಪಸಾತಿಯನ್ನು ಖಚಿತಪಡಿಸಿಕೊಳ್ಳಲು ರಷ್ಯಾವನ್ನು ಒತ್ತಾಯಿಸಿದೆ.

ಮತ್ತಷ್ಟು ಓದಿ: Strong Armies: ವಿಶ್ವ ಮಿಲಿಟರಿ ದೈತ್ಯರ ಪಟ್ಟಿ; ಟಾಪ್-4ನಲ್ಲಿ ಭಾರತ; ಪಾಕಿಸ್ತಾನ, ಚೀನಾದ ಸೇನಾ ಶಕ್ತಿ ಎಷ್ಟಿದೆ? ಇಲ್ಲಿದೆ ಜಿಎಫ್​ಪಿ ಮಾಹಿತಿ

ಉಕ್ರೇನ್‌ನೊಂದಿಗಿನ ಯುದ್ಧದ ಮುಂಚೂಣಿಯಲ್ಲಿ ರಷ್ಯಾದ ಘಟಕಗಳೊಂದಿಗೆ ಸೇವೆ ಸಲ್ಲಿಸುತ್ತಿದ್ದ ಎಂಟು ಭಾರತೀಯರು ಇದುವರೆಗೆ ಕೊಲ್ಲಲ್ಪಟ್ಟಿದ್ದಾರೆ. ಈ ವರ್ಷದ ಏಪ್ರಿಲ್‌ನಿಂದ, ರಷ್ಯಾದ ಒಕ್ಕೂಟದ ರಕ್ಷಣಾ ಸಚಿವಾಲಯವು ಭಾರತ ಸೇರಿದಂತೆ ಹಲವಾರು ವಿದೇಶಿ ದೇಶಗಳ ನಾಗರಿಕರನ್ನು ರಷ್ಯಾದ ಸಶಸ್ತ್ರ ಪಡೆಗಳಲ್ಲಿ ಮಿಲಿಟರಿ ಸೇವೆಗೆ ಸೇರಿಸುವುದನ್ನು ನಿಲ್ಲಿಸಿದೆ ಎಂದು ರಷ್ಯಾದ ರಾಯಭಾರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ರಷ್ಯಾವು ಮಿಲಿಟರಿ ಸೇವೆಗೆ ಭಾರತೀಯ ಪ್ರಜೆಗಳನ್ನು ನೇಮಿಸಿಕೊಳ್ಳುವ ಮೋಸದ ಯೋಜನೆಗಳನ್ನು ರೂಪಿಸಿಲ್ಲ ಎಂದಿದ್ದಾರೆ. ಒಟ್ಟು 91 ಭಾರತೀಯರನ್ನು ರಷ್ಯಾದ ಸೇನೆಗೆ ನೇಮಕ ಮಾಡಿಕೊಳ್ಳಲಾಗಿದ್ದು, ಅವರಲ್ಲಿ 14 ಮಂದಿಯನ್ನು ಬಿಡುಗಡೆ ಮಾಡಲಾಗಿದೆ ಅಥವಾ ಭಾರತಕ್ಕೆ ಹಿಂತಿರುಗಿದ್ದಾರೆ ಎಂದು ಜೈಶಂಕರ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?