AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್​ನಿಂದಲೇ ತನ್ನ ಸೇನೆಗೆ ಭಾರತೀಯರ ನೇಮಕಾತಿ ನಿಲ್ಲಿಸಲಾಗಿದೆ ಎಂದ ರಷ್ಯಾ

ತನ್ನ ಸೇನೆಗೆ ಭಾರತೀಯರ ನೇಮಕಾರಿಯನ್ನು ಕಳೆದ ಏಪ್ರಿಲ್​ನಿಂದಲೇ ನಿಲ್ಲಿಸಲಾಗಿದೆ ಎಂದು ರಷ್ಯಾ ರಾಯಭಾರಿ ಕಚೇರಿ ತಿಳಿಸಿದೆ. ರಷ್ಯಾದ ಸೇನೆಗೆ ನೇಮಕಗೊಂಡಿರುವ 91 ಭಾರತೀಯರ ಸ್ಥಿತಿಗತಿ ಕುರಿತು ಉಭಯ ಪಕ್ಷಗಳು ಭಿನ್ನ ಅಭಿಪ್ರಾಯಗಳನ್ನು ಹೊಂದಿವೆ ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್ ಸಂಸತ್ತಿನಲ್ಲಿ ಮಾಹಿತಿ ನೀಡಿದ ನಂತರ ರಷ್ಯಾ ರಾಯಭಾರಿ ಕಚೇರಿಯು ರಷ್ಯಾದ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿರುವವರ ಭಾರತೀಯರ ಸ್ಥಿತಿಗತಿಯನ್ನು ವಿವರಿಸಿದೆ

ಏಪ್ರಿಲ್​ನಿಂದಲೇ ತನ್ನ ಸೇನೆಗೆ ಭಾರತೀಯರ ನೇಮಕಾತಿ ನಿಲ್ಲಿಸಲಾಗಿದೆ ಎಂದ ರಷ್ಯಾ
ರಷ್ಯಾ ಸೇನೆ
ನಯನಾ ರಾಜೀವ್
|

Updated on: Aug 10, 2024 | 4:59 PM

Share

ಈ ವರ್ಷದ ಏಪ್ರಿಲ್‌ನಲ್ಲಿ ಭಾರತೀಯ ಪ್ರಜೆಗಳನ್ನು ತನ್ನ ಸಶಸ್ತ್ರ ಪಡೆಗಳಿಗೆ ನೇಮಿಸಿಕೊಳ್ಳುವುದನ್ನು ನಿಲ್ಲಿಸಿರುವುದಾಗಿ ರಷ್ಯಾ ಶನಿವಾರ ಹೇಳಿದೆ. ಸ್ವಯಂಪ್ರೇರಿತವಾಗಿ ಮಿಲಿಟರಿ ಸೇವೆಗೆ ಒಪ್ಪಂದ ಮಾಡಿಕೊಂಡ ಭಾರತೀಯರನ್ನು ಶೀಘ್ರವಾಗಿ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದೆ.

ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಭಾರತೀಯರನ್ನು ಸೇನೆಗೆ ಒತ್ತಾಯಪೂರ್ವಕವಾಗಿ ಸೇರಿಸಿಕೊಂಡಿತ್ತು. ರಷ್ಯಾದ ಸೇನೆಗೆ ನೇಮಕಗೊಂಡಿರುವ 91 ಭಾರತೀಯರ ಸ್ಥಿತಿಗತಿ ಕುರಿತು ಉಭಯ ಪಕ್ಷಗಳು ಭಿನ್ನ ಅಭಿಪ್ರಾಯಗಳನ್ನು ಹೊಂದಿವೆ ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್ ಸಂಸತ್ತಿನಲ್ಲಿ ಮಾಹಿತಿ ನೀಡಿದ ನಂತರ ರಷ್ಯಾ ರಾಯಭಾರಿ ಕಚೇರಿಯು ರಷ್ಯಾದ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿರುವವರ ಭಾರತೀಯರ ಸ್ಥಿತಿಗತಿಯನ್ನು ವಿವರಿಸಿದೆ.

ಜೈಶಂಕರ್ ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿ, ಭಾರತವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಮತ್ತು ರಷ್ಯಾದ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ತನ್ನ ಎಲ್ಲಾ ನಾಗರಿಕರನ್ನು ಬಿಡುಗಡೆ ಮತ್ತು ವಾಪಸಾತಿಯನ್ನು ಖಚಿತಪಡಿಸಿಕೊಳ್ಳಲು ರಷ್ಯಾವನ್ನು ಒತ್ತಾಯಿಸಿದೆ.

ಮತ್ತಷ್ಟು ಓದಿ: Strong Armies: ವಿಶ್ವ ಮಿಲಿಟರಿ ದೈತ್ಯರ ಪಟ್ಟಿ; ಟಾಪ್-4ನಲ್ಲಿ ಭಾರತ; ಪಾಕಿಸ್ತಾನ, ಚೀನಾದ ಸೇನಾ ಶಕ್ತಿ ಎಷ್ಟಿದೆ? ಇಲ್ಲಿದೆ ಜಿಎಫ್​ಪಿ ಮಾಹಿತಿ

ಉಕ್ರೇನ್‌ನೊಂದಿಗಿನ ಯುದ್ಧದ ಮುಂಚೂಣಿಯಲ್ಲಿ ರಷ್ಯಾದ ಘಟಕಗಳೊಂದಿಗೆ ಸೇವೆ ಸಲ್ಲಿಸುತ್ತಿದ್ದ ಎಂಟು ಭಾರತೀಯರು ಇದುವರೆಗೆ ಕೊಲ್ಲಲ್ಪಟ್ಟಿದ್ದಾರೆ. ಈ ವರ್ಷದ ಏಪ್ರಿಲ್‌ನಿಂದ, ರಷ್ಯಾದ ಒಕ್ಕೂಟದ ರಕ್ಷಣಾ ಸಚಿವಾಲಯವು ಭಾರತ ಸೇರಿದಂತೆ ಹಲವಾರು ವಿದೇಶಿ ದೇಶಗಳ ನಾಗರಿಕರನ್ನು ರಷ್ಯಾದ ಸಶಸ್ತ್ರ ಪಡೆಗಳಲ್ಲಿ ಮಿಲಿಟರಿ ಸೇವೆಗೆ ಸೇರಿಸುವುದನ್ನು ನಿಲ್ಲಿಸಿದೆ ಎಂದು ರಷ್ಯಾದ ರಾಯಭಾರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ರಷ್ಯಾವು ಮಿಲಿಟರಿ ಸೇವೆಗೆ ಭಾರತೀಯ ಪ್ರಜೆಗಳನ್ನು ನೇಮಿಸಿಕೊಳ್ಳುವ ಮೋಸದ ಯೋಜನೆಗಳನ್ನು ರೂಪಿಸಿಲ್ಲ ಎಂದಿದ್ದಾರೆ. ಒಟ್ಟು 91 ಭಾರತೀಯರನ್ನು ರಷ್ಯಾದ ಸೇನೆಗೆ ನೇಮಕ ಮಾಡಿಕೊಳ್ಳಲಾಗಿದ್ದು, ಅವರಲ್ಲಿ 14 ಮಂದಿಯನ್ನು ಬಿಡುಗಡೆ ಮಾಡಲಾಗಿದೆ ಅಥವಾ ಭಾರತಕ್ಕೆ ಹಿಂತಿರುಗಿದ್ದಾರೆ ಎಂದು ಜೈಶಂಕರ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?