AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shark: ಡಾಲ್ಫಿನ್​ಗಳೊಂದಿಗೆ ನದಿಯಲ್ಲಿ ಈಜುತ್ತಿದ್ದ ಬಾಲಕಿಯ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ ಶಾರ್ಕ್​ ಮೀನು

ನದಿಯಲ್ಲಿ ಈಜುತ್ತಿದ್ದ ಬಾಲಕಿ ಮೇಲೆ ಶಾರ್ಕ್​(Shark) ಮೀನು ದಾಳಿ ನಡೆಸಿದ್ದು, ಬಾಲಕಿ ಮೃತಪಟ್ಟಿರುವ ಘಟನೆ ಪಶ್ಚಿಮ ಆಸ್ಟ್ರೇಲಿಯಾದಲ್ಲಿ ನಡೆದಿದೆ.

Shark: ಡಾಲ್ಫಿನ್​ಗಳೊಂದಿಗೆ ನದಿಯಲ್ಲಿ ಈಜುತ್ತಿದ್ದ ಬಾಲಕಿಯ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ ಶಾರ್ಕ್​ ಮೀನು
ಶಾರ್ಕ್​ ಮೀನು
ನಯನಾ ರಾಜೀವ್
|

Updated on: Feb 05, 2023 | 10:05 AM

Share

ನದಿಯಲ್ಲಿ ಈಜುತ್ತಿದ್ದ ಬಾಲಕಿ ಮೇಲೆ ಶಾರ್ಕ್​(Shark) ಮೀನು ದಾಳಿ ನಡೆಸಿದ್ದು, ಬಾಲಕಿ ಮೃತಪಟ್ಟಿರುವ ಘಟನೆ ಪಶ್ಚಿಮ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಉತ್ತರ ಫ್ರೀಮೆಂಟಲ್​ನ ಪರ್ತ್​ ಉಪನಗರದಲ್ಲಿರುವ ಸ್ವಾನ್ ನದಿಯಲ್ಲಿ 16 ವರ್ಷ ಬಾಲಕಿ ಈಜಲು ಹೋಗಿದ್ದಳು, ಆ ಸಮಯದಲ್ಲಿ ಶಾರ್ಕ್​ ಮೀನೊಂದು ಆಕೆಯನ್ನು ಕಚ್ಚಿ ಘಾಸಿಗೊಳಿಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ನೀರಿನಿಂದ ಹೊರತೆಗೆಯಲಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಯಾವ ರೀತಿಯ ಶಾರ್ಕ್ ಬಾಲಕಿಯ ಮೇಲೆ ದಾಳಿ ಮಾಡಿದೆ ಎಂದು ಅಧಿಕಾರಿಗಳಿಗೆ ಖಚಿತವಾಗಿಲ್ಲ ಎಂದು ಎಬಿಸಿ ವರದಿ ಮಾಡಿದೆ. ಫ್ರಿಮೆಂಟಲ್ ಜಿಲ್ಲಾ ಪೊಲೀಸರು ನೀರಿನಿಂದ ಬಾಲಕಿಯನ್ನು ಹೊರತೆಗೆಯಲು ಪ್ರಯತ್ನಿಸಿದ್ದರು ಆದರೆ ಆಕೆ ಬದುಕುಳಿಯಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಆಕೆ ನದಿಯಲ್ಲಿ ಜೆಟ್​ ಸ್ಕೀ ಮಾಡುತ್ತಿದ್ದಳು, ಜೆಟ್​ ಸ್ಕೀ ಸಮೀಪವೇ ಸಾಗುತ್ತಿದ್ದ ಡಾಲ್ಫಿನ್​ ಜತೆ ಈಜಲು ತೆರಳಿದ್ದಳು. ಆ ಸಮಯದಲ್ಲಿ ಶಾರ್ಕ್ ಮೀನು ದಾಳಿ ನಡೆಸಿದೆ.

ಮತ್ತಷ್ಟು ಓದಿ: Fish: ಚಳಿಗಾಲದಲ್ಲಿ ಮೀನು ಸೇವನೆಯಿಂದ ನೀವು ಈ ಲಾಭ ಪಡೆಯುತ್ತೀರಿ!

ಸ್ವಾನ್ ನದಿಯಲ್ಲಿ ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮತ್ತು ಯಾವುದೇ ಬೀಚ್‌ಗಳ ಬಳಿ ಹೋಗದಂತೆ ರಾಜ್ಯ ಸರ್ಕಾರ ಜನರಿಗೆ ಎಚ್ಚರಿಕೆ ನೀಡಿದೆ. ಪಶ್ಚಿಮ ಆಸ್ಟ್ರೇಲಿಯನ್ ನೀರಿನಲ್ಲಿ 2021ರ ನವೆಂಬರ್​ನಲ್ಲಿ ಪರ್ತ್​ನ ಪೋರ್ಟ್​ ಬೀಚ್​ನಲ್ಲಿ 57 ವರ್ಷದ ವ್ಯಕ್ತಿಯನ್ನು ಬಿಳಿ ಶಾರ್ಕ್​ ಒಂದು ದಾಳಿ ನಡೆಸಿ ಹತ್ಯೆ ಮಾಡಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್