AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shark: ಡಾಲ್ಫಿನ್​ಗಳೊಂದಿಗೆ ನದಿಯಲ್ಲಿ ಈಜುತ್ತಿದ್ದ ಬಾಲಕಿಯ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ ಶಾರ್ಕ್​ ಮೀನು

ನದಿಯಲ್ಲಿ ಈಜುತ್ತಿದ್ದ ಬಾಲಕಿ ಮೇಲೆ ಶಾರ್ಕ್​(Shark) ಮೀನು ದಾಳಿ ನಡೆಸಿದ್ದು, ಬಾಲಕಿ ಮೃತಪಟ್ಟಿರುವ ಘಟನೆ ಪಶ್ಚಿಮ ಆಸ್ಟ್ರೇಲಿಯಾದಲ್ಲಿ ನಡೆದಿದೆ.

Shark: ಡಾಲ್ಫಿನ್​ಗಳೊಂದಿಗೆ ನದಿಯಲ್ಲಿ ಈಜುತ್ತಿದ್ದ ಬಾಲಕಿಯ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ ಶಾರ್ಕ್​ ಮೀನು
ಶಾರ್ಕ್​ ಮೀನು
ನಯನಾ ರಾಜೀವ್
|

Updated on: Feb 05, 2023 | 10:05 AM

Share

ನದಿಯಲ್ಲಿ ಈಜುತ್ತಿದ್ದ ಬಾಲಕಿ ಮೇಲೆ ಶಾರ್ಕ್​(Shark) ಮೀನು ದಾಳಿ ನಡೆಸಿದ್ದು, ಬಾಲಕಿ ಮೃತಪಟ್ಟಿರುವ ಘಟನೆ ಪಶ್ಚಿಮ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಉತ್ತರ ಫ್ರೀಮೆಂಟಲ್​ನ ಪರ್ತ್​ ಉಪನಗರದಲ್ಲಿರುವ ಸ್ವಾನ್ ನದಿಯಲ್ಲಿ 16 ವರ್ಷ ಬಾಲಕಿ ಈಜಲು ಹೋಗಿದ್ದಳು, ಆ ಸಮಯದಲ್ಲಿ ಶಾರ್ಕ್​ ಮೀನೊಂದು ಆಕೆಯನ್ನು ಕಚ್ಚಿ ಘಾಸಿಗೊಳಿಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ನೀರಿನಿಂದ ಹೊರತೆಗೆಯಲಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಯಾವ ರೀತಿಯ ಶಾರ್ಕ್ ಬಾಲಕಿಯ ಮೇಲೆ ದಾಳಿ ಮಾಡಿದೆ ಎಂದು ಅಧಿಕಾರಿಗಳಿಗೆ ಖಚಿತವಾಗಿಲ್ಲ ಎಂದು ಎಬಿಸಿ ವರದಿ ಮಾಡಿದೆ. ಫ್ರಿಮೆಂಟಲ್ ಜಿಲ್ಲಾ ಪೊಲೀಸರು ನೀರಿನಿಂದ ಬಾಲಕಿಯನ್ನು ಹೊರತೆಗೆಯಲು ಪ್ರಯತ್ನಿಸಿದ್ದರು ಆದರೆ ಆಕೆ ಬದುಕುಳಿಯಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಆಕೆ ನದಿಯಲ್ಲಿ ಜೆಟ್​ ಸ್ಕೀ ಮಾಡುತ್ತಿದ್ದಳು, ಜೆಟ್​ ಸ್ಕೀ ಸಮೀಪವೇ ಸಾಗುತ್ತಿದ್ದ ಡಾಲ್ಫಿನ್​ ಜತೆ ಈಜಲು ತೆರಳಿದ್ದಳು. ಆ ಸಮಯದಲ್ಲಿ ಶಾರ್ಕ್ ಮೀನು ದಾಳಿ ನಡೆಸಿದೆ.

ಮತ್ತಷ್ಟು ಓದಿ: Fish: ಚಳಿಗಾಲದಲ್ಲಿ ಮೀನು ಸೇವನೆಯಿಂದ ನೀವು ಈ ಲಾಭ ಪಡೆಯುತ್ತೀರಿ!

ಸ್ವಾನ್ ನದಿಯಲ್ಲಿ ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮತ್ತು ಯಾವುದೇ ಬೀಚ್‌ಗಳ ಬಳಿ ಹೋಗದಂತೆ ರಾಜ್ಯ ಸರ್ಕಾರ ಜನರಿಗೆ ಎಚ್ಚರಿಕೆ ನೀಡಿದೆ. ಪಶ್ಚಿಮ ಆಸ್ಟ್ರೇಲಿಯನ್ ನೀರಿನಲ್ಲಿ 2021ರ ನವೆಂಬರ್​ನಲ್ಲಿ ಪರ್ತ್​ನ ಪೋರ್ಟ್​ ಬೀಚ್​ನಲ್ಲಿ 57 ವರ್ಷದ ವ್ಯಕ್ತಿಯನ್ನು ಬಿಳಿ ಶಾರ್ಕ್​ ಒಂದು ದಾಳಿ ನಡೆಸಿ ಹತ್ಯೆ ಮಾಡಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ