AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shark: ಡಾಲ್ಫಿನ್​ಗಳೊಂದಿಗೆ ನದಿಯಲ್ಲಿ ಈಜುತ್ತಿದ್ದ ಬಾಲಕಿಯ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ ಶಾರ್ಕ್​ ಮೀನು

ನದಿಯಲ್ಲಿ ಈಜುತ್ತಿದ್ದ ಬಾಲಕಿ ಮೇಲೆ ಶಾರ್ಕ್​(Shark) ಮೀನು ದಾಳಿ ನಡೆಸಿದ್ದು, ಬಾಲಕಿ ಮೃತಪಟ್ಟಿರುವ ಘಟನೆ ಪಶ್ಚಿಮ ಆಸ್ಟ್ರೇಲಿಯಾದಲ್ಲಿ ನಡೆದಿದೆ.

Shark: ಡಾಲ್ಫಿನ್​ಗಳೊಂದಿಗೆ ನದಿಯಲ್ಲಿ ಈಜುತ್ತಿದ್ದ ಬಾಲಕಿಯ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ ಶಾರ್ಕ್​ ಮೀನು
ಶಾರ್ಕ್​ ಮೀನು
ನಯನಾ ರಾಜೀವ್
|

Updated on: Feb 05, 2023 | 10:05 AM

Share

ನದಿಯಲ್ಲಿ ಈಜುತ್ತಿದ್ದ ಬಾಲಕಿ ಮೇಲೆ ಶಾರ್ಕ್​(Shark) ಮೀನು ದಾಳಿ ನಡೆಸಿದ್ದು, ಬಾಲಕಿ ಮೃತಪಟ್ಟಿರುವ ಘಟನೆ ಪಶ್ಚಿಮ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಉತ್ತರ ಫ್ರೀಮೆಂಟಲ್​ನ ಪರ್ತ್​ ಉಪನಗರದಲ್ಲಿರುವ ಸ್ವಾನ್ ನದಿಯಲ್ಲಿ 16 ವರ್ಷ ಬಾಲಕಿ ಈಜಲು ಹೋಗಿದ್ದಳು, ಆ ಸಮಯದಲ್ಲಿ ಶಾರ್ಕ್​ ಮೀನೊಂದು ಆಕೆಯನ್ನು ಕಚ್ಚಿ ಘಾಸಿಗೊಳಿಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ನೀರಿನಿಂದ ಹೊರತೆಗೆಯಲಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಯಾವ ರೀತಿಯ ಶಾರ್ಕ್ ಬಾಲಕಿಯ ಮೇಲೆ ದಾಳಿ ಮಾಡಿದೆ ಎಂದು ಅಧಿಕಾರಿಗಳಿಗೆ ಖಚಿತವಾಗಿಲ್ಲ ಎಂದು ಎಬಿಸಿ ವರದಿ ಮಾಡಿದೆ. ಫ್ರಿಮೆಂಟಲ್ ಜಿಲ್ಲಾ ಪೊಲೀಸರು ನೀರಿನಿಂದ ಬಾಲಕಿಯನ್ನು ಹೊರತೆಗೆಯಲು ಪ್ರಯತ್ನಿಸಿದ್ದರು ಆದರೆ ಆಕೆ ಬದುಕುಳಿಯಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಆಕೆ ನದಿಯಲ್ಲಿ ಜೆಟ್​ ಸ್ಕೀ ಮಾಡುತ್ತಿದ್ದಳು, ಜೆಟ್​ ಸ್ಕೀ ಸಮೀಪವೇ ಸಾಗುತ್ತಿದ್ದ ಡಾಲ್ಫಿನ್​ ಜತೆ ಈಜಲು ತೆರಳಿದ್ದಳು. ಆ ಸಮಯದಲ್ಲಿ ಶಾರ್ಕ್ ಮೀನು ದಾಳಿ ನಡೆಸಿದೆ.

ಮತ್ತಷ್ಟು ಓದಿ: Fish: ಚಳಿಗಾಲದಲ್ಲಿ ಮೀನು ಸೇವನೆಯಿಂದ ನೀವು ಈ ಲಾಭ ಪಡೆಯುತ್ತೀರಿ!

ಸ್ವಾನ್ ನದಿಯಲ್ಲಿ ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮತ್ತು ಯಾವುದೇ ಬೀಚ್‌ಗಳ ಬಳಿ ಹೋಗದಂತೆ ರಾಜ್ಯ ಸರ್ಕಾರ ಜನರಿಗೆ ಎಚ್ಚರಿಕೆ ನೀಡಿದೆ. ಪಶ್ಚಿಮ ಆಸ್ಟ್ರೇಲಿಯನ್ ನೀರಿನಲ್ಲಿ 2021ರ ನವೆಂಬರ್​ನಲ್ಲಿ ಪರ್ತ್​ನ ಪೋರ್ಟ್​ ಬೀಚ್​ನಲ್ಲಿ 57 ವರ್ಷದ ವ್ಯಕ್ತಿಯನ್ನು ಬಿಳಿ ಶಾರ್ಕ್​ ಒಂದು ದಾಳಿ ನಡೆಸಿ ಹತ್ಯೆ ಮಾಡಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ