Sign In

By signing in or creating an account, you agree with Associated Broadcasting Company's Terms & Conditions and Privacy Policy.

Shark: ಡಾಲ್ಫಿನ್​ಗಳೊಂದಿಗೆ ನದಿಯಲ್ಲಿ ಈಜುತ್ತಿದ್ದ ಬಾಲಕಿಯ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ ಶಾರ್ಕ್​ ಮೀನು

ನದಿಯಲ್ಲಿ ಈಜುತ್ತಿದ್ದ ಬಾಲಕಿ ಮೇಲೆ ಶಾರ್ಕ್​(Shark) ಮೀನು ದಾಳಿ ನಡೆಸಿದ್ದು, ಬಾಲಕಿ ಮೃತಪಟ್ಟಿರುವ ಘಟನೆ ಪಶ್ಚಿಮ ಆಸ್ಟ್ರೇಲಿಯಾದಲ್ಲಿ ನಡೆದಿದೆ.

Shark: ಡಾಲ್ಫಿನ್​ಗಳೊಂದಿಗೆ ನದಿಯಲ್ಲಿ ಈಜುತ್ತಿದ್ದ ಬಾಲಕಿಯ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ ಶಾರ್ಕ್​ ಮೀನು
ಶಾರ್ಕ್​ ಮೀನು
Follow us
ನಯನಾ ರಾಜೀವ್
|

Updated on: Feb 05, 2023 | 10:05 AM

ನದಿಯಲ್ಲಿ ಈಜುತ್ತಿದ್ದ ಬಾಲಕಿ ಮೇಲೆ ಶಾರ್ಕ್​(Shark) ಮೀನು ದಾಳಿ ನಡೆಸಿದ್ದು, ಬಾಲಕಿ ಮೃತಪಟ್ಟಿರುವ ಘಟನೆ ಪಶ್ಚಿಮ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಉತ್ತರ ಫ್ರೀಮೆಂಟಲ್​ನ ಪರ್ತ್​ ಉಪನಗರದಲ್ಲಿರುವ ಸ್ವಾನ್ ನದಿಯಲ್ಲಿ 16 ವರ್ಷ ಬಾಲಕಿ ಈಜಲು ಹೋಗಿದ್ದಳು, ಆ ಸಮಯದಲ್ಲಿ ಶಾರ್ಕ್​ ಮೀನೊಂದು ಆಕೆಯನ್ನು ಕಚ್ಚಿ ಘಾಸಿಗೊಳಿಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ನೀರಿನಿಂದ ಹೊರತೆಗೆಯಲಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಯಾವ ರೀತಿಯ ಶಾರ್ಕ್ ಬಾಲಕಿಯ ಮೇಲೆ ದಾಳಿ ಮಾಡಿದೆ ಎಂದು ಅಧಿಕಾರಿಗಳಿಗೆ ಖಚಿತವಾಗಿಲ್ಲ ಎಂದು ಎಬಿಸಿ ವರದಿ ಮಾಡಿದೆ. ಫ್ರಿಮೆಂಟಲ್ ಜಿಲ್ಲಾ ಪೊಲೀಸರು ನೀರಿನಿಂದ ಬಾಲಕಿಯನ್ನು ಹೊರತೆಗೆಯಲು ಪ್ರಯತ್ನಿಸಿದ್ದರು ಆದರೆ ಆಕೆ ಬದುಕುಳಿಯಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಆಕೆ ನದಿಯಲ್ಲಿ ಜೆಟ್​ ಸ್ಕೀ ಮಾಡುತ್ತಿದ್ದಳು, ಜೆಟ್​ ಸ್ಕೀ ಸಮೀಪವೇ ಸಾಗುತ್ತಿದ್ದ ಡಾಲ್ಫಿನ್​ ಜತೆ ಈಜಲು ತೆರಳಿದ್ದಳು. ಆ ಸಮಯದಲ್ಲಿ ಶಾರ್ಕ್ ಮೀನು ದಾಳಿ ನಡೆಸಿದೆ.

ಮತ್ತಷ್ಟು ಓದಿ: Fish: ಚಳಿಗಾಲದಲ್ಲಿ ಮೀನು ಸೇವನೆಯಿಂದ ನೀವು ಈ ಲಾಭ ಪಡೆಯುತ್ತೀರಿ!

ಸ್ವಾನ್ ನದಿಯಲ್ಲಿ ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮತ್ತು ಯಾವುದೇ ಬೀಚ್‌ಗಳ ಬಳಿ ಹೋಗದಂತೆ ರಾಜ್ಯ ಸರ್ಕಾರ ಜನರಿಗೆ ಎಚ್ಚರಿಕೆ ನೀಡಿದೆ. ಪಶ್ಚಿಮ ಆಸ್ಟ್ರೇಲಿಯನ್ ನೀರಿನಲ್ಲಿ 2021ರ ನವೆಂಬರ್​ನಲ್ಲಿ ಪರ್ತ್​ನ ಪೋರ್ಟ್​ ಬೀಚ್​ನಲ್ಲಿ 57 ವರ್ಷದ ವ್ಯಕ್ತಿಯನ್ನು ಬಿಳಿ ಶಾರ್ಕ್​ ಒಂದು ದಾಳಿ ನಡೆಸಿ ಹತ್ಯೆ ಮಾಡಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ