ಬ್ರಿಟನ್: ಪ್ರಯಾಣಿಕರಿಗೆ ಕಡ್ಡಾಯ ಕೊವಿಡ್ ಟೆಸ್ಟ್ ನಿಯಮದಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ಸಂಪೂರ್ಣ ಮಾಹಿತಿ ಇಲ್ಲಿದೆ

Britain | Omicron: ಬ್ರಿಟನ್​ನಲ್ಲಿ ಪ್ರಯಾಣದ ನಿಯಮಾವಳಿಗಳನ್ನು ಸಡಿಲಿಸುವ ಸಾಧ್ಯತೆ ದಟ್ಟವಾಗಿದೆ. ಫೆಬ್ರವರಿಯಿಂದ ಹೊಸ ನಿಯಮಗಳು ಜಾರಿಗೆ ಬರುವ ಸಾಧ್ಯತೆ ಇದೆ.

ಬ್ರಿಟನ್: ಪ್ರಯಾಣಿಕರಿಗೆ ಕಡ್ಡಾಯ ಕೊವಿಡ್ ಟೆಸ್ಟ್ ನಿಯಮದಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ಸಂಪೂರ್ಣ ಮಾಹಿತಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us
| Updated By: shivaprasad.hs

Updated on: Jan 16, 2022 | 8:44 AM

ಬ್ರಿಟನ್​ನಲ್ಲಿ ಕೊರೊನಾ ಪ್ರಕರಣಗಳು ನಿಧಾನವಾಗಿ ಇಳಿಕೆಯಾಗುತ್ತಿವೆ. ಇದೀಗ ಸರ್ಕಾರ ಪ್ರಯಾಣದ ನಿಯಮಾವಳಿಗಳಲ್ಲಿ ಬದಲಾವಣೆ ತರಲು ಮುಂದಾಗಿದ್ದು, ಈ ಕುರಿತು ಅಧಿಕೃತ ಘೋಷಣೆ ಇನ್ನಷ್ಟೇ ಆಗಬೇಕಿದೆ. ಉದ್ದೇಶಿತ ಬದಲಾವಣೆಗಳ ಪ್ರಕಾರ, ಬ್ರಿಟನ್​ಗೆ ತೆರಳುವ ಪ್ರಯಾಣಿಕರು ಸಂಪೂರ್ಣ ಲಸಿಕೆ ಪಡೆದಿದ್ದರೆ ಅವರು ಯಾವುದೇ ಕೊರೊನಾ ಟೆಸ್ಟ್​​ಗೆ ಒಳಪಡಬೇಕಿಲ್ಲ. ಬದಲಾಗಿ ನೇರವಾಗಿ ಅವರು ಬ್ರಿಟನ್ ಪ್ರವೇಶಿಸಿ, ಸುತ್ತಾಡಬಹುದು ಎಂದು ಟೈಮ್ಸ್ ವರದಿ ಮಾಡಿದೆ. ಈ ಕುರಿತು ಬ್ರಿಟನ್ ಆರೋಗ್ಯ ಸಚಿವ ಸಾಜಿದ್ ಜಾವಿದ್ ಕೂಡ ಒಪ್ಪಿದ್ದು, ಸಾರಿಗೆ ಸಚಿವ ಗ್ರಾಂಟ್ ಶಾಪ್ಸ್ ಜನವರಿ 26ರಂದು ಘೋಷಣೆ ಹೊರಡಿಸಲಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಇಂಗ್ಲೆಂಡಗ್ ಪ್ರಧಾನಿ ಬೋರಿಸ್ ಜಾನ್ಸನ್ ಸದ್ಯ ಜಾರಿಯಲ್ಲಿರುವ ‘ಪ್ಲಾನ್ ಬಿ’ ನಿಯಮಾವಳಿಗಳನ್ನು ವಾಪಸ್ ಪಡೆಯಲು ಸಿದ್ಧರಾಗಿದ್ದಾರೆ ಎಂದು ಟೆಲಿಗ್ರಾಫ್ ವರದಿ ಮಾಡಿತ್ತು. ಅಲ್ಲದೇ ವರ್ಕ್ ಫ್ರಮ್ ಹೋಮ್ ನಿಯಮಾವಳಿಗಳು ಹಾಗೂ ಕೊವಿಡ್ ಪ್ರಯಾಣ ನಿಯಮಾವಳಿಗಳಲ್ಲೂ ಬದಲಾವಣೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಮಾಸ್ಕ್ ಧರಿಸುವ ನಿಯಮ ಮೊದಲಿನಂತೆಯೇ ಮುಂದುವರೆಯಲಿದೆ. ಆದಷ್ಟು ಶೀಘ್ರವಾಗಿ ಈ ಕುರಿತು ಸರ್ಕಾರ ಹೊಸ ನಿಯಮಾವಳಿ ಪ್ರಕಟಿಸಲಿದೆ. ಸದ್ಯ ಇಂಗ್ಲೆಂಡ್​ನಲ್ಲಿ ಕೊವಿಡ್ ಪ್ರಸರಣವನ್ನು ತಡೆಯಲು ಕೈಗೊಂಡ ‘ಪ್ಲಾನ್ ಬಿ’ ನಿಯಮಾವಳಿ ಜಾರಿಯಲ್ಲಿದೆ. ಇದರ ಅಡಿಯಲ್ಲಿ ಜನರು ಮನೆಯಿಂದಲೇ ಕೆಲಸ ನಿರ್ವಹಿಸುವುದು, ದೈಹಿಕ ಅಂತರ, ಮಾಸ್ಕ್ ಧರಿಸುವುದು ಹಾಗೂ ಪ್ರಯಾಣಕ್ಕೆ ಪಾಸ್​ಗಳನ್ನು ಒಳಗೊಳ್ಳಬೇಕಾಗಿದೆ.

ಆದರೆ ಬ್ರಿಟನ್​ನ ವೈಜ್ಞಾನಿಕ ಸಲಹಾ ಸಮಿತಿ ಸರ್ಕಾರದ ಹೊಸ ನಿರ್ಧಾರದ ಸಂಭಾವ್ಯ ಸಮಸ್ಯೆಗಳ ಕುರಿತು ಮುನ್ನೆಚ್ಚರಿಕೆ ನೀಡಿದೆ. ಬ್ರಿಟನ್​ನಲ್ಲಿ ಕಳೆದ ವಾರ ಸರಿಸುಮಾರು 2 ಲಕ್ಷ ದೈನಂದಿನ ಪ್ರಕರಣ ವರದಿಯಾಗಿದ್ದವು. ಇದೀಗ ದೈನಂದಿನ ಪ್ರಕರಣಗಳು ಸುಮಾರು 80,000ದ ಆಸುಪಾಸಿಗೆ ಇಳಿದಿವೆ.

ಇದನ್ನೂ ಓದಿ:

ನಿಕ್​ ಜೋನಸ್ ಜತೆ ಮಗು ಪಡೆಯೋ ವಿಚಾರದ ಬಗ್ಗೆ ಮೌನ ಮುರಿದ ಪ್ರಿಯಾಂಕಾ ಚೋಪ್ರಾ

‘ಹೂ ಅಂತೀಯಾ ಮಾವ..’ ಹಾಡಿಗಾಗಿ ಸಮಂತಾಗೆ 5 ಕೋಟಿ ರೂ. ಸಂಭಾವನೆ? ಅಷ್ಟು ದುಬಾರಿ ಯಾಕೆ?

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ