AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾಕ್​ನಲ್ಲಿ ಭಾರಿ ಅಗ್ನಿ ದುರಂತ, 100 ಮಂದಿ ಸಾವು, 150ಕ್ಕೂ ಅಧಿಕ ಜನರಿಗೆ ಗಾಯ

ಉತ್ತರ ಇರಾಕ್​ನ ಹಮ್ದುನಿಯಾಹ್ ಪಟ್ಟಣದ ಈವೆಂಟ್​ ಹಾಲ್​ನಲ್ಲಿ ಮದುವೆ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 100 ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೊಸುಲ್ ನಗರದ ಹೊರ ವಲಯದಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟಾಕಿ ಸಿಡಿಸುವಾಗ ಮದುವೆ ಮಂಟಪಕ್ಕೆ ಬೆಂಕಿ ತಗುಲಿ ದುರಂತ ಸಂಭವಿಸಿದೆ. ಮದುವೆ ಕಾರ್ಯಕ್ರಮದಲ್ಲಿ 700 ಮಂದಿ ಭಾಗಿಯಾಗಿದ್ದರು.

ಇರಾಕ್​ನಲ್ಲಿ ಭಾರಿ ಅಗ್ನಿ ದುರಂತ, 100 ಮಂದಿ ಸಾವು, 150ಕ್ಕೂ ಅಧಿಕ ಜನರಿಗೆ ಗಾಯ
ಇರಾಕ್ ಮದುವೆ ಪಾರ್ಟಿImage Credit source: NDTV
ನಯನಾ ರಾಜೀವ್
|

Updated on:Sep 27, 2023 | 7:30 AM

Share

ಉತ್ತರ ಇರಾಕ್​ನ ಹಮ್ದುನಿಯಾಹ್ ಪಟ್ಟಣದ ಈವೆಂಟ್​ ಹಾಲ್​ನಲ್ಲಿ ಮದುವೆ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 100 ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೊಸುಲ್ ನಗರದ ಹೊರ ವಲಯದಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟಾಕಿ ಸಿಡಿಸುವಾಗ ಮದುವೆ ಮಂಟಪಕ್ಕೆ ಬೆಂಕಿ ತಗುಲಿ ದುರಂತ ಸಂಭವಿಸಿದೆ. ಮದುವೆ ಕಾರ್ಯಕ್ರಮದಲ್ಲಿ 700 ಮಂದಿ ಭಾಗಿಯಾಗಿದ್ದರು.

ನೆವೆಹ್ ಪ್ರಾಂತ್ಯವು ಮೊಸುಲ್‌ನ ಹೊರಗೆ ರಾಜಧಾನಿ ಬಾಗ್ದಾದ್‌ನ ವಾಯುವ್ಯಕ್ಕೆ ಸುಮಾರು 335 ಕಿಲೋಮೀಟರ್ (205 ಮೈಲಿ) ದೂರದಲ್ಲಿದೆ. ಇರಾಕಿನ ಸುದ್ದಿ ಸಂಸ್ಥೆ ನೀನಾ ವರದಿಯ ಪ್ರಕಾರ, ಈ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ವಧು-ವರರು ಕೂಡ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಆದರೆ ಬೆಂಕಿ ಅನಾಹುತಕ್ಕೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ, ಆದರೆ ಪಟಾಕಿ ಸುಟ್ಟಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಇರಾಕಿನ ಸುದ್ದಿ ಸಂಸ್ಥೆ ನೀನಾ ಪೋಸ್ಟ್ ಮಾಡಿದ ಚಿತ್ರದಲ್ಲಿ, ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವ ಕೆಲಸ ಮಾಡುತ್ತಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಶೂ, ಚಪ್ಪಲಿ ಗೋಡೌನ್​ನಲ್ಲಿ ಅಗ್ನಿ ಅವಘಡ, ಐದು ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಭಸ್ಮ

ಇದಲ್ಲದೆ, ಈವೆಂಟ್ ಹಾಲ್‌ನ ಸುಟ್ಟ ಅವಶೇಷಗಳು ಸಾಮಾಜಿಕ ಮಾಧ್ಯಮದಲ್ಲಿ ಸ್ಥಳೀಯ ಪತ್ರಕರ್ತರು ಪೋಸ್ಟ್​ ಮಾಡಿರುವ ಚಿತ್ರಗಳಲ್ಲಿ ಗೋಚರಿಸುತ್ತವೆ. ಸಂತ್ರಸ್ತರಿಗೆ ಪರಿಹಾರ ಒದಗಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುವಂತೆ ಇರಾಕ್ ಪ್ರಧಾನಿ ಮೊಹಮ್ಮದ್ ಶಿಯಾ ಅಲ್ ಸುಡಾನಿ ಅಧಿಕಾರಿಗಳನ್ನು ಕೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:24 am, Wed, 27 September 23

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ