Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದೊಂದು ತಿಂಗಳಲ್ಲಿ.. ಇಲ್ಲಿ ಕೊರೊನಾಕ್ಕೆ ಬಲಿಯಾದವರಿಗಿಂತ ಆತ್ಮಹತ್ಯೆಗೆ ಶರಣಾದವರೇ ಹೆಚ್ಚಂತೆ!

ಜಪಾನಿನಲ್ಲಿ ಕೊರೊನಾ ಸೋಂಕಿಗೆ ಆರಂಭದಿಂದ ಇಲ್ಲಿಯ ತನಕ 2,087ಜನ ಮೃತರಾಗಿದ್ದಾರೆ. ಆದರೆ, ಈ ಸಂಖ್ಯೆಯನ್ನೂ ಮೀರಿ ಕೇವಲ ಅಕ್ಟೋಬರ್ ತಿಂಗಳೊಂದರಲ್ಲೇ 2,153 ಜನ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದೊಂದು ತಿಂಗಳಲ್ಲಿ.. ಇಲ್ಲಿ ಕೊರೊನಾಕ್ಕೆ ಬಲಿಯಾದವರಿಗಿಂತ ಆತ್ಮಹತ್ಯೆಗೆ ಶರಣಾದವರೇ ಹೆಚ್ಚಂತೆ!
ಮಾನಸಿಕವಾಗಿ ಸದೃಢವಾಗಿರುವ ಜಪಾನೀಯರಲ್ಲಿ ಆತ್ಮಹತ್ಯೆ ಪ್ರವೃತ್ತಿ ವಿಪರ್ಯಾಸವೇ ಸರಿ
Follow us
Skanda
| Updated By: ಸಾಧು ಶ್ರೀನಾಥ್​

Updated on: Nov 30, 2020 | 10:56 AM

ಕೊರೊನಾ ಇಡೀ ಜಗತ್ತಿನ ಲೆಕ್ಕಾಚಾರವನ್ನೇ ತಲೆಕೆಳಗೆ ಮಾಡಿದೆ. ಜನರ ಆರ್ಥಿಕ, ಸಾಮಾಜಿಕ ಪರಿಸ್ಥಿತಿಯನ್ನು ದುಸ್ತರಗೊಳಿಸಿದೆ. ಆರ್ಥಿಕ ಹೊಡೆತಕ್ಕೆ ತತ್ತರಿಸಿ ಹಲವು ಸಂಸ್ಥೆಗಳು ಉದ್ಯೋಗಿಗಳನ್ನು ಕೆಲಸದಿಂದ ಕಿತ್ತುಹಾಕಿವೆ. ಬಹುತೇಕ ಎಲ್ಲಾ ರಾಷ್ಟ್ರಗಳೂ ಒಂದೊಂದು ತೆರನಾದ ಸಮಸ್ಯೆಗೆ ಸಿಲುಕಿವೆ.

ಇತ್ತೀಚೆಗೆ ಜಪಾನ್​ನಲ್ಲಿ ನಡೆದ ಅಧ್ಯಯನವೊಂದು ಕೊರೊನಾದಿಂದ ಜಪಾನ್ ದೇಶ ಎದುರಿಸುತ್ತಿರುವ ಗಂಭೀರ ಸಮಸ್ಯೆಯನ್ನು ತೆರೆದಿಟ್ಟಿದೆ. 2020ರಲ್ಲಿ ಕೊರೊನಾದಿಂದ ಸಾವಿಗೀಡಾಗಿದ್ದಕ್ಕಿಂತ ಹೆಚ್ಚು ಜಪಾನೀಯರು ಅಕ್ಟೋಬರ್ ತಿಂಗಳೊಂದರಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಕಳವಳಕಾರಿ ಮಾಹಿತಿ ಹೊರಬಿದ್ದಿದೆ.

 ಆತ್ಮಹತ್ಯೆಗೂ ಕೊರೊನಾದಿಂದಾದ ಆರ್ಥಿಕ ಸಂಕಷ್ಟಕ್ಕೂ ನೇರ ಸಂಬಂಧವಿದೆ ಜಪಾನಿನಲ್ಲಿ ಕೊರೊನಾ ಸೋಂಕಿಗೆ ಆರಂಭದಿಂದ ಇಲ್ಲಿಯ ತನಕ 2,087ಜನ ಮೃತರಾಗಿದ್ದಾರೆ. ಆದರೆ, ಈ ಸಂಖ್ಯೆಯನ್ನೂ ಮೀರಿ ಕೇವಲ ಅಕ್ಟೋಬರ್ ತಿಂಗಳೊಂದರಲ್ಲೇ 2,153 ಜನ ಆತ್ಮಹತ್ಯೆಗೆ ಶರಣಾಗಿ ಸಾವನ್ನಪ್ಪಿದ್ದಾರೆ. ಆಘಾತಕಾರಿ ಸಂಗತಿಯೆಂದರೆ ಹೀಗೆ ಆತ್ಮಹತ್ಯೆಯಲ್ಲಿ ಧಿಡೀರ್ ಏರಿಕೆಯಾಗಿರುವುದಕ್ಕೂ ಕೊರೊನಾ ಉಂಟುಮಾಡಿರುವ ಆರ್ಥಿಕ ಸಂಕಷ್ಟಕ್ಕೂ ನೇರ ಸಂಬಂಧವಿದೆ ಎನ್ನಲಾಗುತ್ತಿದೆ.

ಕೊವಿಡ್​ನಿಂದಾಗಿ ಇತರೆ ದೇಶಗಳಲ್ಲೂ ಆರ್ಥಿಕ ಸಂಕಷ್ಟವಿದೆ; ಹಾಗಾಗಿ ಇತರೆ ದೇಶಗಳಿಗೂ ಇದು ಎಚ್ಚರಿಕೆಯ ಗಂಟೆ ಕೊವಿಡ್ ಕಾರಣದಿಂದ ಕೆಲಸ ಕಳೆದುಕೊಂಡವರು, ಆರ್ಥಿಕ ಸಂಕಷ್ಟಕ್ಕೆ ಒಳಗಾದವರು ಮಾನಸಿಕ ಸಮಸ್ಯೆಯನ್ನು ಎದುರಿಸುತ್ತಿದ್ದು ಅದರಿಂದ ಹೊರಬರಲಾರದೇ ಸಾವಿನ ಮೊರೆಹೋಗುತ್ತಿದ್ದಾರೆ ಎಂಬ ಆಂಶ ಅಧ್ಯಯನದಲ್ಲಿ ಬಯಲಾಗಿದೆ.

ಆತ್ಮಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಪಾನಿನ ತಜ್ಞೆ ಮಿಚಿಕೋ ಅವರು ಹೇಳುವಂತೆ ಇತರೆ ದೇಶಗಳಿಗೆ ಹೋಲಿಸಿದರೆ ಜಪಾನ್​ ಲಾಕ್​ಡೌನ್​ನಿಂದಾದ ಪರಿಣಾಮ ಅತ್ಯಂತ ಕಡಿಮೆ ಇದೆ. ಆದರೂ, ಅಲ್ಲಿಯ ಜನ ಅಧಿಕ ಸಂಖ್ಯೆಯಲ್ಲಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ಆತಂಕಕಾರಿ ಬೆಳವಣಿಗೆ ಇತರೆ ದೇಶಗಳಿಗೆ ಎಚ್ಚರಿಕೆಯ ಗಂಟೆಯಾಗಿದ್ದು. ಈ ವಿಚಾರದಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ.

ಸರಿಸುಮಾರು ಒಂದು ದಶಕದ ಹಿಂದೆ ಭೀಕರ ಸುನಾಮಿ ಜಪಾನ್ ದೇಶವನ್ನು ಅಪ್ಪಳಿಸಿದಾಗ ಇಡೀ ಜಗತ್ತೇ ಮರುಗಿತ್ತು. 15 ಸಾವಿರಕ್ಕೂ ಅಧಿಕ ಮಂದಿಯನ್ನು ಕಳೆದುಕೊಂಡು ಅನೇಕ ರೀತಿಯ ನಷ್ಟಗಳನ್ನು ಎದುರಿಸಿ ಜಪಾನ್ ಅತ್ಯಂತ ಕಠಿಣ ಪರಿಸ್ಥಿತಿಗೆ ತಲುಪಿದಾಗ ಮುಂದುವರಿದ ದೇಶವೊಂದು ಮುಗ್ಗರಿಸಿ ಬಿತ್ತು ಎಂದು ಎಲ್ಲರೂ ಲೆಕ್ಕಾಚಾರ ಹಾಕಿದ್ದರು.

ಮಾನಸಿಕವಾಗಿ ಸದೃಢವಾಗಿರುವ ಜಪಾನೀಯರಲ್ಲಿ ಆತ್ಮಹತ್ಯೆ ಪ್ರವೃತ್ತಿ ವಿಪರ್ಯಾಸವೇ ಸರಿ ಅದೇನೇ ಆದರೂ ಜಪಾನ್ ಮಾತ್ರ ಇಡೀ ಜಗತ್ತೇ ನಿಬ್ಬೆರಗಾಗುವಂತೆ ಪುಟಿದೆದ್ದಿತ್ತು. ಆ ಮೂಲಕ ಎಂತಹ ಕಷ್ಟವನ್ನೂ ಎದುರಿಸುವ ಸಾಮರ್ಥ್ಯವಿದೆ ಎಂದು ತೋರಿಸಿಕೊಟ್ಟಿತ್ತು. ಆದರೆ, ಜಗತ್ತಿನ ಬೇರೆ ದೇಶಗಳಿಗೆ ಹೋಲಿಸಿದರೆ ಕಡಿಮೆ ನಷ್ಟ ಅನುಭವಿಸುತ್ತಿರುವ ಜಪಾನಿನ ಜನ ಮಾನಸಿಕ ತೊಳಲಾಟಕ್ಕೆ ಸಿಲುಕಿ ಆತ್ಮಹತ್ಯೆಯ ದಾರಿ ಹಿಡಿದಿರುವುದು ವಿಪರ್ಯಾಸ.

ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ