AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳಿತು ಬಿತ್ತುವ ಆಶಯ: ಜೋ ಬೈಡೆನ್​ಗೆ ಭಾರತ ಮೂಲದ ಅಮೆರಿಕನ್ನರಿಂದ ರಂಗೋಲಿಯ ಸ್ವಾಗತ

ಕಲಾವಿದರು, ವಿದ್ಯಾರ್ಥಿಗಳು, ಜನಸಾಮಾನ್ಯರು ಈ ಯೋಜನೆಯಲ್ಲಿ ಭಾಗವಹಿಸಲು ಅತ್ಯುತ್ಸಾಹದಿಂದ ಮುಂದೆ ಬಂದಿದ್ದಾರೆ. ಅಮೆರಿಕದ ವೈವಿಧ್ಯಮಯ ಸಂಸ್ಕೃತಿಗೆ ಪೂರಕವಾಗಿ ಜೋ ಬೈಡೆನ್ ಆಡಳಿತ ನಿರ್ವಹಿಸಲಿ ಎಂದು ರಂಗೋಲಿ ಬಿಡಿಸುವ ಕಲಾವಿದರು ಆಶಯ ವ್ಯಕ್ತಪಡಿಸಿದ್ದಾರೆ.

ಒಳಿತು ಬಿತ್ತುವ ಆಶಯ: ಜೋ ಬೈಡೆನ್​ಗೆ ಭಾರತ ಮೂಲದ ಅಮೆರಿಕನ್ನರಿಂದ ರಂಗೋಲಿಯ ಸ್ವಾಗತ
ಜೋ ಬೈಡೆನ್ ಸ್ವಾಗತಕ್ಕೆ ಸಿದ್ಧವಾಗುತ್ತಿರುವ ರಂಗೋಲಿಗಳು (ಚಿತ್ರ ಸೌಜನ್ಯ: ಇಂಡಿಯಾಸ್ಪೊರಾ)
guruganesh bhat
| Edited By: |

Updated on: Jan 17, 2021 | 3:30 PM

Share

ವಾಷಿಂಗ್ಟನ್: ಅಮೆರಿಕದ 46ನೇ ಅಧ್ಯಕ್ಷರಾಗಲಿರುವ ಜೋ ಬೈಡೆನ್​ಗೆ ಭಾರತೀಯ ಮೂಲದ ಅಮೆರಿಕನ್ನರು ಸಾಂಪ್ರದಾಯಿಕ ಸ್ವಾಗತ ಕೋರಲು ಸಕಲ ಸಿದ್ಧತೆ ನಡೆಸಿದ್ದಾರೆ. 1800 ಕ್ಕೂ ಹೆಚ್ಚು ಉತ್ಸಾಹಿಗಳು ಜೋ ಬೈಡೆನ್ ಸ್ವಾಗತಕ್ಕೆ ರಂಗೋಲಿ ಬಿಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಡೊನಾಲ್ಡ್ ಟ್ರಂಪ್ ಅಧಿಕಾರಾವಧಿ ಮುಗಿಯುವ ಹೊತ್ತಲ್ಲಿ ಹಲವು ಅವಾಂತರಗಳಿಗೆ ವೈಟ್​ಹೌಸ್ ಸಾಕ್ಷಿಯಾಗಿತ್ತು. ಡೊನಾಲ್ಡ್ ಟ್ರಂಪ್ ಬೆಂಬಲಿಗರು ನಡೆಸಿದ ಗಲಾಟೆಯು ಅಮೆರಿಕದ ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆ ಎಂದೇ ಬಿಂಬಿತವಾಗಿತ್ತು. ಆದರೆ, ಅವುಗಳನ್ನೆಲ್ಲ ಮರೆತು ಒಳಿತಿನ ಚಿಂತನೆಗಳನ್ನು ಬಿತ್ತಲೆಂದು ರಂಗೋಲಿ ಬಿಡಿಸುತ್ತಿದ್ದಾರೆ. ಕಲಾವಿದರು, ವಿದ್ಯಾರ್ಥಿಗಳು, ಜನಸಾಮಾನ್ಯರು ಈ ಯೋಜನೆಯಲ್ಲಿ ಭಾಗವಹಿಸಲು ಅತ್ಯುತ್ಸಾಹದಿಂದ ಮುಂದೆ ಬಂದಿದ್ದಾರೆ.

ರಂಗೋಲಿಗಳು ಒಳಿತಿನ ಸಂಕೇತ. ಮನೆ ಮುಂದೆ ರಂಗೋಲಿ ಬಿಡಿಸುವ ವಾಡಿಕೆ ಭಾರತೀಯರಲ್ಲಿದೆ. ಎಳೆಯ ಮುಂಜಾನೆಯಲ್ಲಿ ಮನೆ ಮುಂದೆ ನೀರು ಚಿಮುಕಿಸಿ ರಂಗೋಲಿ ಬಿಡಿಸಿದ ಮೇಲೆ ಮುಂದಿನ ಕೆಲಸ ಎಂಬ ಪದ್ಧತಿ ಭಾರತೀಯರದು. ಇಡೀ ದಿನ ನಮ್ಮಲ್ಲಿ ಒಳ್ಳೆಯ ಚಿಂತನೆಗಳು ತುಂಬಿಕೊಳ್ಳಲು ಸಹಕಾರಿ ಎಂಬಂರ್ಥದಲ್ಲಿ ರಂಗೋಲಿ ಚಿತ್ರಿಸುತ್ತಿದ್ದಾರೆ. ಅಮೆರಿಕ ಪೊಲೀಸರು ಕ್ಯಾಪಿಟಲ್ ಕಟ್ಟಡದ ಸುತ್ತ ರಂಗೋಲಿ ಚಿತ್ರಿಸಲು ಅನುಮತಿ ನೀಡಿದ್ದಾರೆ.

ಅಮೆರಿಕದ ವೈವಿಧ್ಯಮಯ ಸಂಸ್ಕೃತಿಗೆ ಪೂರಕವಾಗಿ ಜೋ ಬೈಡೆನ್ ಆಡಳಿತ ನಿರ್ವಹಿಸಲಿ ಎಂದು ರಂಗೋಲಿ ಬಿಡಿಸುವ ಕಲಾವಿದರು ಆಶಯ ವ್ಯಕ್ತಪಡಿಸಿದ್ದಾರೆ.

ರಂಗೋಲಿ ಸಾಧಕಿ | ತಮಿಳುನಾಡಿನಲ್ಲಿ ರಂಗೋಲಿ ಸಂಸ್ಕೃತಿ ಉಳಿಸಲು, ಬೆಳೆಸಲು ಶ್ರಮಿಸುತ್ತಿರುವ ಕನ್ನಡತಿ ಸುಚಿತಾ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ