AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳಿತು ಬಿತ್ತುವ ಆಶಯ: ಜೋ ಬೈಡೆನ್​ಗೆ ಭಾರತ ಮೂಲದ ಅಮೆರಿಕನ್ನರಿಂದ ರಂಗೋಲಿಯ ಸ್ವಾಗತ

ಕಲಾವಿದರು, ವಿದ್ಯಾರ್ಥಿಗಳು, ಜನಸಾಮಾನ್ಯರು ಈ ಯೋಜನೆಯಲ್ಲಿ ಭಾಗವಹಿಸಲು ಅತ್ಯುತ್ಸಾಹದಿಂದ ಮುಂದೆ ಬಂದಿದ್ದಾರೆ. ಅಮೆರಿಕದ ವೈವಿಧ್ಯಮಯ ಸಂಸ್ಕೃತಿಗೆ ಪೂರಕವಾಗಿ ಜೋ ಬೈಡೆನ್ ಆಡಳಿತ ನಿರ್ವಹಿಸಲಿ ಎಂದು ರಂಗೋಲಿ ಬಿಡಿಸುವ ಕಲಾವಿದರು ಆಶಯ ವ್ಯಕ್ತಪಡಿಸಿದ್ದಾರೆ.

ಒಳಿತು ಬಿತ್ತುವ ಆಶಯ: ಜೋ ಬೈಡೆನ್​ಗೆ ಭಾರತ ಮೂಲದ ಅಮೆರಿಕನ್ನರಿಂದ ರಂಗೋಲಿಯ ಸ್ವಾಗತ
ಜೋ ಬೈಡೆನ್ ಸ್ವಾಗತಕ್ಕೆ ಸಿದ್ಧವಾಗುತ್ತಿರುವ ರಂಗೋಲಿಗಳು (ಚಿತ್ರ ಸೌಜನ್ಯ: ಇಂಡಿಯಾಸ್ಪೊರಾ)
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 17, 2021 | 3:30 PM

Share

ವಾಷಿಂಗ್ಟನ್: ಅಮೆರಿಕದ 46ನೇ ಅಧ್ಯಕ್ಷರಾಗಲಿರುವ ಜೋ ಬೈಡೆನ್​ಗೆ ಭಾರತೀಯ ಮೂಲದ ಅಮೆರಿಕನ್ನರು ಸಾಂಪ್ರದಾಯಿಕ ಸ್ವಾಗತ ಕೋರಲು ಸಕಲ ಸಿದ್ಧತೆ ನಡೆಸಿದ್ದಾರೆ. 1800 ಕ್ಕೂ ಹೆಚ್ಚು ಉತ್ಸಾಹಿಗಳು ಜೋ ಬೈಡೆನ್ ಸ್ವಾಗತಕ್ಕೆ ರಂಗೋಲಿ ಬಿಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಡೊನಾಲ್ಡ್ ಟ್ರಂಪ್ ಅಧಿಕಾರಾವಧಿ ಮುಗಿಯುವ ಹೊತ್ತಲ್ಲಿ ಹಲವು ಅವಾಂತರಗಳಿಗೆ ವೈಟ್​ಹೌಸ್ ಸಾಕ್ಷಿಯಾಗಿತ್ತು. ಡೊನಾಲ್ಡ್ ಟ್ರಂಪ್ ಬೆಂಬಲಿಗರು ನಡೆಸಿದ ಗಲಾಟೆಯು ಅಮೆರಿಕದ ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆ ಎಂದೇ ಬಿಂಬಿತವಾಗಿತ್ತು. ಆದರೆ, ಅವುಗಳನ್ನೆಲ್ಲ ಮರೆತು ಒಳಿತಿನ ಚಿಂತನೆಗಳನ್ನು ಬಿತ್ತಲೆಂದು ರಂಗೋಲಿ ಬಿಡಿಸುತ್ತಿದ್ದಾರೆ. ಕಲಾವಿದರು, ವಿದ್ಯಾರ್ಥಿಗಳು, ಜನಸಾಮಾನ್ಯರು ಈ ಯೋಜನೆಯಲ್ಲಿ ಭಾಗವಹಿಸಲು ಅತ್ಯುತ್ಸಾಹದಿಂದ ಮುಂದೆ ಬಂದಿದ್ದಾರೆ.

ರಂಗೋಲಿಗಳು ಒಳಿತಿನ ಸಂಕೇತ. ಮನೆ ಮುಂದೆ ರಂಗೋಲಿ ಬಿಡಿಸುವ ವಾಡಿಕೆ ಭಾರತೀಯರಲ್ಲಿದೆ. ಎಳೆಯ ಮುಂಜಾನೆಯಲ್ಲಿ ಮನೆ ಮುಂದೆ ನೀರು ಚಿಮುಕಿಸಿ ರಂಗೋಲಿ ಬಿಡಿಸಿದ ಮೇಲೆ ಮುಂದಿನ ಕೆಲಸ ಎಂಬ ಪದ್ಧತಿ ಭಾರತೀಯರದು. ಇಡೀ ದಿನ ನಮ್ಮಲ್ಲಿ ಒಳ್ಳೆಯ ಚಿಂತನೆಗಳು ತುಂಬಿಕೊಳ್ಳಲು ಸಹಕಾರಿ ಎಂಬಂರ್ಥದಲ್ಲಿ ರಂಗೋಲಿ ಚಿತ್ರಿಸುತ್ತಿದ್ದಾರೆ. ಅಮೆರಿಕ ಪೊಲೀಸರು ಕ್ಯಾಪಿಟಲ್ ಕಟ್ಟಡದ ಸುತ್ತ ರಂಗೋಲಿ ಚಿತ್ರಿಸಲು ಅನುಮತಿ ನೀಡಿದ್ದಾರೆ.

ಅಮೆರಿಕದ ವೈವಿಧ್ಯಮಯ ಸಂಸ್ಕೃತಿಗೆ ಪೂರಕವಾಗಿ ಜೋ ಬೈಡೆನ್ ಆಡಳಿತ ನಿರ್ವಹಿಸಲಿ ಎಂದು ರಂಗೋಲಿ ಬಿಡಿಸುವ ಕಲಾವಿದರು ಆಶಯ ವ್ಯಕ್ತಪಡಿಸಿದ್ದಾರೆ.

ರಂಗೋಲಿ ಸಾಧಕಿ | ತಮಿಳುನಾಡಿನಲ್ಲಿ ರಂಗೋಲಿ ಸಂಸ್ಕೃತಿ ಉಳಿಸಲು, ಬೆಳೆಸಲು ಶ್ರಮಿಸುತ್ತಿರುವ ಕನ್ನಡತಿ ಸುಚಿತಾ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!