AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳಿತು ಬಿತ್ತುವ ಆಶಯ: ಜೋ ಬೈಡೆನ್​ಗೆ ಭಾರತ ಮೂಲದ ಅಮೆರಿಕನ್ನರಿಂದ ರಂಗೋಲಿಯ ಸ್ವಾಗತ

ಕಲಾವಿದರು, ವಿದ್ಯಾರ್ಥಿಗಳು, ಜನಸಾಮಾನ್ಯರು ಈ ಯೋಜನೆಯಲ್ಲಿ ಭಾಗವಹಿಸಲು ಅತ್ಯುತ್ಸಾಹದಿಂದ ಮುಂದೆ ಬಂದಿದ್ದಾರೆ. ಅಮೆರಿಕದ ವೈವಿಧ್ಯಮಯ ಸಂಸ್ಕೃತಿಗೆ ಪೂರಕವಾಗಿ ಜೋ ಬೈಡೆನ್ ಆಡಳಿತ ನಿರ್ವಹಿಸಲಿ ಎಂದು ರಂಗೋಲಿ ಬಿಡಿಸುವ ಕಲಾವಿದರು ಆಶಯ ವ್ಯಕ್ತಪಡಿಸಿದ್ದಾರೆ.

ಒಳಿತು ಬಿತ್ತುವ ಆಶಯ: ಜೋ ಬೈಡೆನ್​ಗೆ ಭಾರತ ಮೂಲದ ಅಮೆರಿಕನ್ನರಿಂದ ರಂಗೋಲಿಯ ಸ್ವಾಗತ
ಜೋ ಬೈಡೆನ್ ಸ್ವಾಗತಕ್ಕೆ ಸಿದ್ಧವಾಗುತ್ತಿರುವ ರಂಗೋಲಿಗಳು (ಚಿತ್ರ ಸೌಜನ್ಯ: ಇಂಡಿಯಾಸ್ಪೊರಾ)
guruganesh bhat
| Edited By: |

Updated on: Jan 17, 2021 | 3:30 PM

Share

ವಾಷಿಂಗ್ಟನ್: ಅಮೆರಿಕದ 46ನೇ ಅಧ್ಯಕ್ಷರಾಗಲಿರುವ ಜೋ ಬೈಡೆನ್​ಗೆ ಭಾರತೀಯ ಮೂಲದ ಅಮೆರಿಕನ್ನರು ಸಾಂಪ್ರದಾಯಿಕ ಸ್ವಾಗತ ಕೋರಲು ಸಕಲ ಸಿದ್ಧತೆ ನಡೆಸಿದ್ದಾರೆ. 1800 ಕ್ಕೂ ಹೆಚ್ಚು ಉತ್ಸಾಹಿಗಳು ಜೋ ಬೈಡೆನ್ ಸ್ವಾಗತಕ್ಕೆ ರಂಗೋಲಿ ಬಿಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಡೊನಾಲ್ಡ್ ಟ್ರಂಪ್ ಅಧಿಕಾರಾವಧಿ ಮುಗಿಯುವ ಹೊತ್ತಲ್ಲಿ ಹಲವು ಅವಾಂತರಗಳಿಗೆ ವೈಟ್​ಹೌಸ್ ಸಾಕ್ಷಿಯಾಗಿತ್ತು. ಡೊನಾಲ್ಡ್ ಟ್ರಂಪ್ ಬೆಂಬಲಿಗರು ನಡೆಸಿದ ಗಲಾಟೆಯು ಅಮೆರಿಕದ ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆ ಎಂದೇ ಬಿಂಬಿತವಾಗಿತ್ತು. ಆದರೆ, ಅವುಗಳನ್ನೆಲ್ಲ ಮರೆತು ಒಳಿತಿನ ಚಿಂತನೆಗಳನ್ನು ಬಿತ್ತಲೆಂದು ರಂಗೋಲಿ ಬಿಡಿಸುತ್ತಿದ್ದಾರೆ. ಕಲಾವಿದರು, ವಿದ್ಯಾರ್ಥಿಗಳು, ಜನಸಾಮಾನ್ಯರು ಈ ಯೋಜನೆಯಲ್ಲಿ ಭಾಗವಹಿಸಲು ಅತ್ಯುತ್ಸಾಹದಿಂದ ಮುಂದೆ ಬಂದಿದ್ದಾರೆ.

ರಂಗೋಲಿಗಳು ಒಳಿತಿನ ಸಂಕೇತ. ಮನೆ ಮುಂದೆ ರಂಗೋಲಿ ಬಿಡಿಸುವ ವಾಡಿಕೆ ಭಾರತೀಯರಲ್ಲಿದೆ. ಎಳೆಯ ಮುಂಜಾನೆಯಲ್ಲಿ ಮನೆ ಮುಂದೆ ನೀರು ಚಿಮುಕಿಸಿ ರಂಗೋಲಿ ಬಿಡಿಸಿದ ಮೇಲೆ ಮುಂದಿನ ಕೆಲಸ ಎಂಬ ಪದ್ಧತಿ ಭಾರತೀಯರದು. ಇಡೀ ದಿನ ನಮ್ಮಲ್ಲಿ ಒಳ್ಳೆಯ ಚಿಂತನೆಗಳು ತುಂಬಿಕೊಳ್ಳಲು ಸಹಕಾರಿ ಎಂಬಂರ್ಥದಲ್ಲಿ ರಂಗೋಲಿ ಚಿತ್ರಿಸುತ್ತಿದ್ದಾರೆ. ಅಮೆರಿಕ ಪೊಲೀಸರು ಕ್ಯಾಪಿಟಲ್ ಕಟ್ಟಡದ ಸುತ್ತ ರಂಗೋಲಿ ಚಿತ್ರಿಸಲು ಅನುಮತಿ ನೀಡಿದ್ದಾರೆ.

ಅಮೆರಿಕದ ವೈವಿಧ್ಯಮಯ ಸಂಸ್ಕೃತಿಗೆ ಪೂರಕವಾಗಿ ಜೋ ಬೈಡೆನ್ ಆಡಳಿತ ನಿರ್ವಹಿಸಲಿ ಎಂದು ರಂಗೋಲಿ ಬಿಡಿಸುವ ಕಲಾವಿದರು ಆಶಯ ವ್ಯಕ್ತಪಡಿಸಿದ್ದಾರೆ.

ರಂಗೋಲಿ ಸಾಧಕಿ | ತಮಿಳುನಾಡಿನಲ್ಲಿ ರಂಗೋಲಿ ಸಂಸ್ಕೃತಿ ಉಳಿಸಲು, ಬೆಳೆಸಲು ಶ್ರಮಿಸುತ್ತಿರುವ ಕನ್ನಡತಿ ಸುಚಿತಾ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?