AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿಯಲ್ಲಿ ಪರಸ್ಪರ ನಂಬಿಕೆ ಮರುಸ್ಥಾಪಿಸಲು ಒಪ್ಪಿಗೆ; ಚೀನಾ ರಕ್ಷಣಾ ಸಚಿವರೊಂದಿಗೆ ರಾಜನಾಥ್ ಸಿಂಗ್ ಭೇಟಿ

ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚೀನಾದ ರಕ್ಷಣಾ ಸಚಿವರನ್ನು ಭೇಟಿಯಾಗುತ್ತಿದ್ದಂತೆ ಭಾರತ-ಚೀನಾ ಪರಸ್ಪರ ನಂಬಿಕೆಯನ್ನು ಪುನರ್​ ನಿರ್ಮಿಸಲು ಒಪ್ಪಿಗೆ ನೀಡಿವೆ. ಜಗತ್ತಿನ ಎರಡು ದೊಡ್ಡ ರಾಷ್ಟ್ರಗಳಾದ ಭಾರತ ಮತ್ತು ಚೀನಾ ನಡುವಿನ ಸಾಮರಸ್ಯದ ಸಂಬಂಧಗಳು ಜಾಗತಿಕ ಶಾಂತಿ ಮತ್ತು ಸಮೃದ್ಧಿಗೆ ಗಣನೀಯವಾಗಿ ಕೊಡುಗೆ ನೀಡುತ್ತವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಒತ್ತಿ ಹೇಳಿದ್ದಾರೆ.

ಗಡಿಯಲ್ಲಿ ಪರಸ್ಪರ ನಂಬಿಕೆ ಮರುಸ್ಥಾಪಿಸಲು ಒಪ್ಪಿಗೆ; ಚೀನಾ ರಕ್ಷಣಾ ಸಚಿವರೊಂದಿಗೆ ರಾಜನಾಥ್ ಸಿಂಗ್ ಭೇಟಿ
ಚೀನಾ ರಕ್ಷಣಾ ಸಚಿವರೊಂದಿಗೆ ರಾಜನಾಥ್ ಸಿಂಗ್ ಭೇಟಿ
ಸುಷ್ಮಾ ಚಕ್ರೆ
|

Updated on: Nov 20, 2024 | 10:39 PM

Share

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚೀನಾದ ರಕ್ಷಣಾ ಸಚಿವ ಡೋಂಗ್ ಜುನ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ “ಭಾರತ-ಚೀನಾ ಗಡಿಯಲ್ಲಿ ಗಾಲ್ವಾನ್ ಮಾದರಿಯ ಘರ್ಷಣೆಯ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು” ಎಂದು ರಾಜನಾಥ್ ಸಿಂಗ್ ಹೇಳಿಕೆ ನೀಡಿದ್ದಾರೆ. ಭಾರತ ಮತ್ತು ಚೀನಾ ಇಂದು “ಪರಸ್ಪರ ನಂಬಿಕೆಯನ್ನು ಪುನರ್ನಿರ್ಮಿಸಲು ಮಾರ್ಗಸೂಚಿ”ಯತ್ತ ಕೆಲಸ ಮಾಡುವುದಾಗಿ ಪ್ರತಿಜ್ಞೆ ಮಾಡಿವೆ.

ಪೂರ್ವ ಲಡಾಖ್‌ನ ಡೆಮ್‌ಚೋಕ್ ಮತ್ತು ಡೆಪ್ಸಾಂಗ್‌ನ ಉಳಿದ ಎರಡು ಮುಖಾಮುಖಿ ಪಾಯಿಂಟ್‌ಗಳಿಂದ ಭಾರತೀಯ ಮತ್ತು ಚೀನಾ ಸೇನೆಗಳನ್ನು ಹಿಂಪಡೆದ ಕೆಲವೇ ವಾರಗಳ ನಂತರ ಲಾವೋಸ್‌ನ ರಾಜಧಾನಿ ವಿಯೆಂಟಿಯಾನ್‌ನಲ್ಲಿ ಉಭಯ ದೇಶಗಳ ನಾಯಕರು ಇಂದು ಭೇಟಿಯಾಗಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಗೆ ಗಯಾನಾದಲ್ಲಿ ಭಾರತೀಯ ವಲಸಿಗರಿಂದ ಅದ್ದೂರಿ ಸ್ವಾಗತ

ವಿಯೆಂಟಿಯಾನ್‌ನಲ್ಲಿ ಚೀನಾದ ರಕ್ಷಣಾ ಸಚಿವ ಅಡ್ಮಿರಲ್ ಡಾಂಗ್ ಜುನ್ ಅವರೊಂದಿಗೆ ಸಭೆಯನ್ನು ನಡೆಸಿದ್ದೇನೆ. ಪರಸ್ಪರ ನಂಬಿಕೆ ಮತ್ತು ತಿಳುವಳಿಕೆಯನ್ನು ಪುನರ್ನಿರ್ಮಿಸಲು ಮಾರ್ಗಸೂಚಿಯ ಕಡೆಗೆ ಒಟ್ಟಾಗಿ ಕೆಲಸ ಮಾಡಲು ನಾವು ಒಪ್ಪಿಕೊಂಡಿದ್ದೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಷ್ಯಾದ ಕಜಾನ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಇತ್ತೀಚಿನ ಒಪ್ಪಂದಗಳು ಮತ್ತು ಸಭೆಯ ನಂತರ ಇಬ್ಬರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಮೊದಲ ಸಭೆ ಇದಾಗಿದೆ. ವಿಶ್ವದ ಎರಡು ದೊಡ್ಡ ರಾಷ್ಟ್ರಗಳಾದ ಭಾರತ ಮತ್ತು ಚೀನಾ ನಡುವಿನ ಸೌಹಾರ್ದಯುತ ಸಂಬಂಧಗಳು ಜಾಗತಿಕ ಶಾಂತಿ ಮತ್ತು ಸಮೃದ್ಧಿಗೆ ಧನಾತ್ಮಕ ಪರಿಣಾಮಗಳನ್ನು ಬೀರುತ್ತವೆ ಎಂಬ ಅಂಶವನ್ನು ಭಾರತೀಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಒತ್ತಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ