AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಸೂಪರ್​​​ ಪವರ್​​ ಆಗುತ್ತಿದೆ, ನಾವು ಭಿಕ್ಷೆ ಬೇಡುತ್ತಿದ್ದೇವೆ, ಸಂಸತ್ತಿನಲ್ಲಿ ಗುಡುಗಿದ ಪಾಕ್​​​ ನಾಯಕ

Maulana Fazal Ur Rehman: ನೀವು ಒಮ್ಮೆ ಭಾರತವನ್ನು ನೋಡಿ ಅದು ಸೂಪರ್​​​ ಪವರ್​​ ರಾಷ್ಟ್ರ ಆಗುತ್ತಿದೆ. ಅದರ ಮಾತು ಎಲ್ಲರೂ ಕೇಳುತ್ತಿದ್ದಾರೆ. ಆದರೆ ನಾವು ಮಾತ್ರ ಭಿಕ್ಷೆ ಬೇಡುತ್ತಿದ್ದೇವೆ ಎಂದು ಭಾರತವನ್ನು ಪ್ರಶಂಸಿದ ಪಾಕ್​ ನಾಯಕ ಮೌಲಾನಾ ಫಜಲ್ ಉರ್ ರೆಹಮಾನ್. ಜಮಿಯತ್ ಉಲೇಮಾ-ಎ-ಇಸ್ಲಾಂ ಫಜಲ್ (ಜೆಯುಐ-ಎಫ್) ಮುಖ್ಯಸ್ಥ ರೆಹಮಾನ್ ಪಾಕ್​​ ಸಂಸತ್ತಿನಲ್ಲಿ ತಮ್ಮ ದೇಶದ ಸರ್ಕಾರ​​ ಮಾಡುತ್ತಿರುವ ಕೆಲಸವನ್ನು ವಿರೋಧಿಸಿ, ಭಾರತದ ಸುಧಾರಣೆಯನ್ನು ಶ್ಲಾಘಿಸಿದರು.

ಭಾರತ ಸೂಪರ್​​​ ಪವರ್​​ ಆಗುತ್ತಿದೆ, ನಾವು ಭಿಕ್ಷೆ ಬೇಡುತ್ತಿದ್ದೇವೆ, ಸಂಸತ್ತಿನಲ್ಲಿ ಗುಡುಗಿದ ಪಾಕ್​​​ ನಾಯಕ
ಅಕ್ಷಯ್​ ಪಲ್ಲಮಜಲು​​
|

Updated on:Apr 30, 2024 | 11:38 AM

Share

ಪಾಕಿಸ್ತಾನದ ನಾಯಕರು ಇತ್ತೀಚೆಗೆ ಭಾರತವನ್ನು ನೋಡುವ ರೀತಿ ಬದಲಾದಂತಿದೆ. ಪ್ರತಿದಿನ ಭಾರತವನ್ನು ದೂಷಿಸುತ್ತಿದ್ದ ಪಾಕ್ ಇದೀಗ ಭಾರತದ ಬಗ್ಗೆ ಮೃದು ಧೋರಣೆ ತೋರುತ್ತಿದೆ. ಭಾರತವನ್ನು ಪಾಕ್​​​​​ ಶ್ಲಾಘಿಸುತ್ತಿರುವುದು ಅಚ್ಚರಿಯೇ ಸರಿ. ಪಾಕಿಸ್ತಾನದ ಪ್ರಮುಖ ನಾಯಕ ಮೌಲಾನಾ ಫಜಲ್ ಉರ್ ರೆಹಮಾನ್ ಪಾಕಿಸ್ತಾನದ ಸಂಸತ್ತಿನಲ್ಲಿ ಭಾರತದ ಸಾಧನೆ ಬಗ್ಗೆ ಹೇಳಿದ್ದಾರೆ. ಭಾರತವು ಜಾಗತಿಕ ಸೂಪರ್ ಪವರ್ ಆಗುತ್ತಿದೆ. ಪಾಕಿಸ್ತಾನವು ತನ್ನನ್ನು ವಿನಾಶದಿಂದ ರಕ್ಷಿಸುವಂತೆ ಜಗತ್ತನ್ನು ಬೇಡಿಕೊಳ್ಳುತ್ತಿದೆ ಎಂದು ಅವರು ಹೇಳಿದರು.

ಪಾಕ್​​​​​ ಸಂಸತ್ತಿನಲ್ಲಿ ರೆಹಮಾನ್ ಪಾಕಿಸ್ತಾನಿ ಸೇನೆಯ ವಿರುದ್ಧವೂ ವಾಗ್ದಾಳಿ ನಡೆಸಿದರು. ಜಮಿಯತ್ ಉಲೇಮಾ-ಎ-ಇಸ್ಲಾಂ ಫಜಲ್ (ಜೆಯುಐ-ಎಫ್) ಮುಖ್ಯಸ್ಥ ರೆಹಮಾನ್ ಪಾಕ್​​ ಸಂಸತ್ತಿನಲ್ಲಿ ತಮ್ಮ ದೇಶದ ಸರ್ಕಾರ​​ ಮಾಡುತ್ತಿರುವ ಕೆಲಸವನ್ನು ವಿರೋಧಿಸಿ, ಭಾರತದ ಸುಧಾರಣೆಯನ್ನು ಶ್ಲಾಘಿಸಿದರು. 2018ರಿಂದ ಪಾಕ್​​ ಚುನಾವಣೆಯಲ್ಲಿ ಒಂದಲ್ಲ ಒಂದು ಗೊಂದಲ ಇದೆ. 2018ರ ಚುನಾವಣೆಯಲ್ಲಿ ರಿಗ್ಗಿಂಗ್ ನಡೆದಿದ್ದರೆ ಈಗಿನ ಚುನಾವಣೆಯಲ್ಲಿ ಯಾಕೆ ರಿಗ್ಗಿಂಗ್ ಇರಲಿಲ್ಲ? ಪಾಕಿಸ್ತಾನ ಮುಸ್ಲಿಂ ಲೀಗ್ (ನವಾಜ್) ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿಯ ಆಡಳಿತ ಒಕ್ಕೂಟವು ಸಂಸತ್ತಿನಲ್ಲಿ ಬಹುಮತವನ್ನು ಹೊಂದಿದ್ದರೆ ಅವರಿಗೆ ಸರ್ಕಾರ ಮಾಡಲು ಬಿಡಬೇಕಿತ್ತು, ಯಾಕೆ? ಬಿಟ್ಟಿಲ್ಲ ಎಂದು ಅವರು ಸಂಸತ್ತಿನಲ್ಲಿ ಗುಡುಗಿದರು.

ತಮ್ಮ ಭಾಷಣದಲ್ಲಿ  ಭಾರತದ ಬಗ್ಗೆ ಹಾಡಿ ಹೊಗಳಿದ್ದಾರೆ. ಭಾರತ ಮತ್ತು ನಮ್ಮನ್ನು ಹೋಲಿಸಿ ನೋಡಿ. ಎರಡೂ ದೇಶಗಳು ಒಂದೇ ದಿನದಲ್ಲಿ ಸ್ವಾತಂತ್ರ್ಯ ಪಡೆದಿವೆ, ಆದರೆ ಇಂದು ಅವರು (ಭಾರತ) ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ದಾರೆ. ಆದರೆ ನಾವು ದಿವಾಳಿತನದಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಬೇಡಿಕೊಳ್ಳುತ್ತಿದ್ದೇವೆ. ನಿರ್ಧಾರಗಳನ್ನು ಬೇರೆಯವರು ತೆಗೆದುಕೊಳ್ಳುತ್ತಾರೆ ಆದರೆ ಸಮಸ್ಯೆಗಳಿಗೆ ರಾಜಕಾರಣಿಗಳು ಜವಾಬ್ದಾರರಾಗಿರುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ‘ಮೋದಿಯಿಂದಾಗಿ ಭಾರತೀಯ ಹುಡುಗಿಯನ್ನು ಮದ್ವೆ ಮಾಡಿಕೊಳ್ಳಲಾಗಲಿಲ್ಲ’: ಪಾಕ್ ಇಸ್ಲಾಂ ಮುಖಂಡ ಅಳಲು

ಕೌನ್ಸಿಲ್ ಆಫ್ ಇಸ್ಲಾಮಿಕ್ ಐಡಿಯಾಲಜಿಯ (ಸಿಐಐ) ಶಿಫಾರಸುಗಳನ್ನು ಜಾರಿಗೊಳಿಸುವಲ್ಲಿ ನಮ್ಮ ಸರ್ಕಾರ ವಿಫಲವಾಗಿದೆ. ಈ ಬಗ್ಗೆ ಅವರು ವಿಷಾದ ವ್ಯಕ್ತಪಡಿಸಿದರು. ಇಸ್ಲಾಮಿಕ್ ತತ್ವಗಳನ್ನು ಕಾಪಾಡಿಕೊಳ್ಳುವ ಮಹತ್ವ ಬಗ್ಗೆ ಅವರು ಒತ್ತಿ ಹೇಳಿದರು. ನಾವು ಇಸ್ಲಾಂ ಹೆಸರಿನಲ್ಲಿ ದೇಶವನ್ನು ಪಡೆದುಕೊಂಡಿದ್ದೇವೆ, ಆದರೆ ಇಂದು ನಾವು ಜಾತ್ಯತೀತ ರಾಷ್ಟ್ರವಾಗಿ ಮಾರ್ಪಟ್ಟಿದ್ದೇವೆ. 1973 ರಿಂದ ಸಿಐಐನ ಒಂದೇ ಒಂದು ಶಿಫಾರಸು ಜಾರಿಗೆ ಬಂದಿಲ್ಲ. ನಾವು ಇಸ್ಲಾಮಿಕ್ ದೇಶವಾಗುವುದು ಹೇಗೆ? CCI ಕಾನೂನುಗಳ ಇಸ್ಲಾಮೀಕರಣದಲ್ಲಿ ಸಹಾಯ ಮಾಡಲು ಸ್ಥಾಪಿಸಲಾದ ಸಾಂವಿಧಾನಿಕ ಸಂಸ್ಥೆಯಾಗಿದೆ. . ದಿವಾಳಿತನ ತಪ್ಪಿಸಲು ಪಾಕಿಸ್ತಾನ ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ ಭಿಕ್ಷೆ ಬೇಡುತ್ತಿದೆ ಎಂದೂ ಅವರು ಹೇಳಿದ್ದಾರೆ. ಇದೀಗ ಇವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:00 am, Tue, 30 April 24

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ