AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India-Maldives row: ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಆಸ್ತಕಿ ತೋರಿದ ಇಸ್ರೇಲ್

ಭಾರತ ಹಾಗೂ ಲಕ್ಷದ್ವೀಪವನ್ನು ಟೀಕಿಸಿದ ಮಾಲ್ಡೀವ್ಸ್​​​ಗೆ ಟಕ್ಕರ್ ನೀಡಲು ಇಸ್ರೇಲ್​​​ ಮುಂದಾಗಿದೆ. ಪ್ರತಿ ಹಂತದಲ್ಲೂ ಭಾರತ ಜತೆಗೆ ನಿಂತಿದ್ದ ಇಸ್ರೇಲ್​​​​​, ಇದೀಗ ಲಕ್ಷದ್ವೀಪ ಅಭಿವೃದ್ಧಿಗೆ ಮಹತ್ವ ಕೊಡುಗೆ ನೀಡಲು ಮುಂದಾಗಿದೆ. ಭಾರತ ಮತ್ತು ಮಾಲ್ಡೀವ್ಸ್ ರಾಜತಾಂತ್ರಿಕ ಜಗಳದ ನಡುವೆಯೇ ಭಾರತದಲ್ಲಿರುವ ಇಸ್ರೇಲಿ ರಾಯಭಾರ ಕಚೇರಿಯು ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸೋಮವಾರ ಭೇಟಿ ನೀಡಿದೆ.

India-Maldives row: ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಆಸ್ತಕಿ ತೋರಿದ ಇಸ್ರೇಲ್
ಅಕ್ಷಯ್​ ಪಲ್ಲಮಜಲು​​
|

Updated on: Jan 09, 2024 | 10:55 AM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಲಕ್ಷದ್ವೀಪದ(Lakshadweep) ಭೇಟಿ ಹಾಗೂ ಭಾರತವನ್ನು ಅತ್ಯಂತ ಕಟುವಾಗಿ ಟೀಕಿಸಿದ ಮಾಲ್ಡೀವ್ಸ್​​​ಗೆ (Maldives) ತಕ್ಕ ಉತ್ತರ ಈಗಾಗಲೇ ಭಾರತ ನೀಡಿದೆ. ಇನ್ನು ಭಾರತೀಯರು ಕೂಡ ಭಾರತ ಹಾಗೂ ಲಕ್ಷದ್ವೀಪಕ್ಕೆ ಬೆಂಬಲ ನೀಡಿದ್ದಾರೆ. ಇದೀಗ ಭಾರತ ಹಾಗೂ ಲಕ್ಷದ್ವೀಪವನ್ನು ಟೀಕಿಸಿದ ಮಾಲ್ಡೀವ್ಸ್​​​ಗೆ ಟಕ್ಕರ್ ನೀಡಲು ಇಸ್ರೇಲ್​​​ ಮುಂದಾಗಿದೆ. ಪ್ರತಿ ಹಂತದಲ್ಲೂ ಭಾರತ ಜತೆಗೆ ನಿಂತಿದ್ದ ಇಸ್ರೇಲ್​​​​​, ಇದೀಗ ಲಕ್ಷದ್ವೀಪ ಅಭಿವೃದ್ಧಿಗೆ ಮಹತ್ವ ಕೊಡುಗೆ ನೀಡಲು ಮುಂದಾಗಿದೆ. ಭಾರತ ಮತ್ತು ಮಾಲ್ಡೀವ್ಸ್ ರಾಜತಾಂತ್ರಿಕ ಜಗಳದ ನಡುವೆಯೇ ಭಾರತದಲ್ಲಿರುವ ಇಸ್ರೇಲಿ ರಾಯಭಾರ ಕಚೇರಿಯು ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸೋಮವಾರ ಭೇಟಿ ನೀಡಿದೆ. ಇಲ್ಲಿ ನಿರ್ಲವಣೀಕರಣ (desalination) ಕಾರ್ಯಕ್ರಮವನ್ನು ಆರಂಭಿಸಲಿದೆ. ಇದಕ್ಕಾಗಿ ಕಳೆದ ವರ್ಷವೇ ಈ ಬಗ್ಗೆ ಪ್ಲಾನ್​​​ ಹಾಕಲಾಗಿತ್ತು. ಇದೀಗ ಇದಕ್ಕೆ ಮತ್ತಷ್ಟು ಬಲ ನೀಡಲು ಮುಂದಾಗಿದೆ.

ಇಸ್ರೇಲ್ ಜನವರಿ 10ರಿಂದ ಈ ಯೋಜನೆಯ ಕೆಲಸವನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಲಕ್ಷದ್ವೀಪಗಳ ಪ್ರಾಚೀನ ಮತ್ತು ಭವ್ಯವಾದ ನೀರೊಳಗಿನ ಸೌಂದರ್ಯವನ್ನು ವೀಕ್ಷಣೆ ಮಾಡುವ ಅವಕಾಶವನ್ನು ಈ ಯೋಜನೆ ಮಾಡಲಿದೆ. ಈ ದ್ವೀಪದ ಮೋಡಿಮಾಡುವ ಆಕರ್ಷಣೆಯ ಚಿತ್ರಗಳನ್ನು ಇಸ್ರೇಲಿ ರಾಯಭಾರ ಕಚೇರಿ X ನಲ್ಲಿ ಹಂಚಿಕೊಂಡಿದೆ.

ಇನ್ನು ಭಾರತ ಹಾಗೂ ಪ್ರಧಾನಿ ಮೋದಿ ಬಗ್ಗೆ ಕೆಟ್ಟದಾಗಿ ಎಕ್ಸ್​​​​ನಲ್ಲಿ ಟ್ವೀಟ್​​​ ಮಾಡಿರುವ ಮಾಲ್ಡೀವ್ಸ್​​ಗೆ ಇದು ದೊಡ್ಡ ಮಟ್ಟದ ಉತ್ತರವಾಗಿದೆ. ಈ ವಿಚಾರವಾಗಿ ಭಾರತದಲ್ಲಿರುವ ಮಾಲ್ಡೀವ್ಸ್ ರಾಯಭಾರಿಯ ಅಧಿಕಾರಿಯನ್ನು ಸೋಮವಾರ ಭಾರತದ ವಿದೇಶಾಂಗ ಸಚಿವಾಲಯಕ್ಕೆ ಕರೆಸಲಾಯಿತು ಮತ್ತು ಮಾಲ್ಡೀವ್ಸ್‌ನ ಹಲವಾರು ಸಚಿವರು ಸಾಮಾಜಿಕ ಮಾಧ್ಯಮದಲ್ಲಿ ಮೋದಿ ವಿರುದ್ಧದ ಟೀಕೆಗಳ ಬಗ್ಗೆ ತೀವ್ರ ಕಳವಳವನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ: ಮೇಕ್ ಮೈ ಟ್ರಿಪ್​ನಿಂದ ಬೀಚಸ್ ಆಫ್ ಇಂಡಿಯಾ ಅಭಿಯಾನ; ಮೋದಿಯ ಲಕ್ಷದ್ವೀಪ ಭೇಟಿ ಪರಿಣಾಮ

ಲಕ್ಷದ್ವೀಪಕ್ಕೆ ಭೇಟಿ ನೀಡಿದ ನಂತರ ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಟೀಕೆ ಮಾಡಿದ ಮೂವರು ಮಾಲ್ಡೀವ್ಸ್‌ ಸಚಿವರನ್ನು ಅಲ್ಲಿನ ಸರ್ಕಾರ ಅಮಾನತು ಮಾಡಿದೆ. ಬೇರೆ ದೇಶದ ಪ್ರಧಾನಿಯನ್ನು ಅಥವಾ ಅಲ್ಲಿನ ವಿಚಾರಗಳನ್ನು ಟೀಕಿಸುವುದು ಸರಿಯಲ್ಲ ಎಂದು ಮಾಲ್ಡೀವ್ಸ್‌ ವಿದೇಶಾಂಗ ಸಚಿವಾಲಯ ಹೇಳಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ