AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಖ್‌ ಗುರುದ್ವಾರ ಕೆಡವಿ.. ಮಸೀದಿ ನಿರ್ಮಾಣಕ್ಕೆ ಮುಂದಾದ ಪಾಪಿ ಪಾಕಿಸ್ತಾನ

ಲಾಹೋರ್‌: ಪಾಕಿಸ್ತಾನದಲ್ಲಿರುವ ಐತಿಹಾಸಿಕ ಸಿಖ್‌ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿರುವ ಪಾಕಿಸ್ತಾನದ ಕ್ರಮವನ್ನ ಭಾರತ ಕಟುವಾಗಿ ವಿರೋಧಿಸಿದೆ. ಈ ಸಂಬಂಧ ಪಾಕಿಸ್ತಾನಕ್ಕೆ ತನ್ನ ವಿರೋಧ ಮತ್ತು ಕಳವಳವನ್ನ ತಿಳಿಸಿದೆ. ಹೌದು ಪಾಕಿಸ್ತಾನದ ಲಾಹೋರ್‌ನಲ್ಲಿರುವ ನೌಲಖ್‌ ಬಜಾರ್‌ನಲ್ಲಿನ ಶಾಹಿದಿ ಆಸ್ಥಾನ ಭಾಯಿ ತರುಜಿ ಗುರುದ್ವಾರವನ್ನು ಪಾಕಿಸ್ತಾನ ಶಹೀದ್‌ ಗಂಜ್‌ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿದೆ. ಇದಕ್ಕೆ ಪಾಕಿಸ್ತಾನದಲ್ಲಿರುವ ಸಿಖ್‌ ಅಲ್ಪಸಂಖ್ಯಾತರು ತೀವ್ರವಾಗಿ ವಿರೋಧಿಸಿದ್ದಾರೆ. ಈ ಸಂಬಂಧ ಪಾಕಿಸ್ತಾನ ಸರ್ಕಾರಕ್ಕೆ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸದಂತೆ ಮನವಿ ಮಾಡಿದ್ದಾರೆ. 1745ರಲ್ಲಿ ಕಟ್ಟಲಾದ ಗುರುದ್ವಾರ […]

ಸಿಖ್‌ ಗುರುದ್ವಾರ ಕೆಡವಿ.. ಮಸೀದಿ ನಿರ್ಮಾಣಕ್ಕೆ ಮುಂದಾದ ಪಾಪಿ ಪಾಕಿಸ್ತಾನ
Guru
| Edited By: |

Updated on:Jul 31, 2020 | 12:23 AM

Share

ಲಾಹೋರ್‌: ಪಾಕಿಸ್ತಾನದಲ್ಲಿರುವ ಐತಿಹಾಸಿಕ ಸಿಖ್‌ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿರುವ ಪಾಕಿಸ್ತಾನದ ಕ್ರಮವನ್ನ ಭಾರತ ಕಟುವಾಗಿ ವಿರೋಧಿಸಿದೆ. ಈ ಸಂಬಂಧ ಪಾಕಿಸ್ತಾನಕ್ಕೆ ತನ್ನ ವಿರೋಧ ಮತ್ತು ಕಳವಳವನ್ನ ತಿಳಿಸಿದೆ.

ಹೌದು ಪಾಕಿಸ್ತಾನದ ಲಾಹೋರ್‌ನಲ್ಲಿರುವ ನೌಲಖ್‌ ಬಜಾರ್‌ನಲ್ಲಿನ ಶಾಹಿದಿ ಆಸ್ಥಾನ ಭಾಯಿ ತರುಜಿ ಗುರುದ್ವಾರವನ್ನು ಪಾಕಿಸ್ತಾನ ಶಹೀದ್‌ ಗಂಜ್‌ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿದೆ. ಇದಕ್ಕೆ ಪಾಕಿಸ್ತಾನದಲ್ಲಿರುವ ಸಿಖ್‌ ಅಲ್ಪಸಂಖ್ಯಾತರು ತೀವ್ರವಾಗಿ ವಿರೋಧಿಸಿದ್ದಾರೆ. ಈ ಸಂಬಂಧ ಪಾಕಿಸ್ತಾನ ಸರ್ಕಾರಕ್ಕೆ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸದಂತೆ ಮನವಿ ಮಾಡಿದ್ದಾರೆ.

1745ರಲ್ಲಿ ಕಟ್ಟಲಾದ ಗುರುದ್ವಾರ 1745ರಲ್ಲಿ ಸ್ಥಾಪಿತವಾದ ಈ ಗುರುದ್ವಾರ ಸಿಖ್‌ರ ಪಾಲಿಗೆ ಐತಿಹಾಸಿಕ ಮತ್ತು ಧಾರ್ಮಿಕವಾಗಿ ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಜೀವವನ್ನಾದರೂ ಬಿಟ್ಟೇನು ನನ್ನ ಪಗಡಿಯನ್ನ ಬಿಡೆನು ಎಂದು ಭಾಯೀ ತರುಜಿ ಸಿಖ್‌ ಧರ್ಮವನ್ನು ಎತ್ತಿ ಹಿಡಿಯಲು ತಮ್ಮ ಜೀವವನ್ನೇ ತ್ಯಾಗ ಮಾಡಿದ್ದರು. ಅವರು ಜೀವತ್ಯಾಗ ಮಾಡಿದ ಈ ಸ್ಥಳದಲ್ಲಿಯೇ 1745ರಲ್ಲಿ ಈ ಗುರುದ್ವಾರವನ್ನು ಕಟ್ಟಲಾಗಿದೆ.

ಈಗ ಲಾಹೋರ್‌ನಲ್ಲಿರುವ ಕೆಲ ಮತೀಯವಾದಿಗಳು ಈ ಗುರುದ್ವಾರವನ್ನು ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿದ್ದಾರೆ. ಇದು ವಿಶ್ವಾದ್ಯಂತ ಸಿಖ್‌ ಧರ್ಮೀಯರಲ್ಲಿ ಆಕ್ರೋಶ ತರಿಸಿದೆ. ಈ ಸಂಬಂಧ ಭಾರತ ಸರ್ಕಾರ ಕೂಡಾ ಕಟುವಾಗಿ ಪಾಕಿಸ್ತಾನ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಗುರುದ್ವಾರನ್ನು ಮಸೀದಿಯನ್ನಾಗಿ ಪರಿವರ್ತಿಸುವ ಯಾವುದೇ ಕ್ರಮವನ್ನು ವಿರೋಧಿಸುವುದಾಗಿ ತಿಳಿಸಿದೆ.

Published On - 6:20 pm, Wed, 29 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್