AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಖ್‌ ಗುರುದ್ವಾರ ಕೆಡವಿ.. ಮಸೀದಿ ನಿರ್ಮಾಣಕ್ಕೆ ಮುಂದಾದ ಪಾಪಿ ಪಾಕಿಸ್ತಾನ

ಲಾಹೋರ್‌: ಪಾಕಿಸ್ತಾನದಲ್ಲಿರುವ ಐತಿಹಾಸಿಕ ಸಿಖ್‌ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿರುವ ಪಾಕಿಸ್ತಾನದ ಕ್ರಮವನ್ನ ಭಾರತ ಕಟುವಾಗಿ ವಿರೋಧಿಸಿದೆ. ಈ ಸಂಬಂಧ ಪಾಕಿಸ್ತಾನಕ್ಕೆ ತನ್ನ ವಿರೋಧ ಮತ್ತು ಕಳವಳವನ್ನ ತಿಳಿಸಿದೆ. ಹೌದು ಪಾಕಿಸ್ತಾನದ ಲಾಹೋರ್‌ನಲ್ಲಿರುವ ನೌಲಖ್‌ ಬಜಾರ್‌ನಲ್ಲಿನ ಶಾಹಿದಿ ಆಸ್ಥಾನ ಭಾಯಿ ತರುಜಿ ಗುರುದ್ವಾರವನ್ನು ಪಾಕಿಸ್ತಾನ ಶಹೀದ್‌ ಗಂಜ್‌ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿದೆ. ಇದಕ್ಕೆ ಪಾಕಿಸ್ತಾನದಲ್ಲಿರುವ ಸಿಖ್‌ ಅಲ್ಪಸಂಖ್ಯಾತರು ತೀವ್ರವಾಗಿ ವಿರೋಧಿಸಿದ್ದಾರೆ. ಈ ಸಂಬಂಧ ಪಾಕಿಸ್ತಾನ ಸರ್ಕಾರಕ್ಕೆ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸದಂತೆ ಮನವಿ ಮಾಡಿದ್ದಾರೆ. 1745ರಲ್ಲಿ ಕಟ್ಟಲಾದ ಗುರುದ್ವಾರ […]

ಸಿಖ್‌ ಗುರುದ್ವಾರ ಕೆಡವಿ.. ಮಸೀದಿ ನಿರ್ಮಾಣಕ್ಕೆ ಮುಂದಾದ ಪಾಪಿ ಪಾಕಿಸ್ತಾನ
Guru
| Edited By: |

Updated on:Jul 31, 2020 | 12:23 AM

Share

ಲಾಹೋರ್‌: ಪಾಕಿಸ್ತಾನದಲ್ಲಿರುವ ಐತಿಹಾಸಿಕ ಸಿಖ್‌ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿರುವ ಪಾಕಿಸ್ತಾನದ ಕ್ರಮವನ್ನ ಭಾರತ ಕಟುವಾಗಿ ವಿರೋಧಿಸಿದೆ. ಈ ಸಂಬಂಧ ಪಾಕಿಸ್ತಾನಕ್ಕೆ ತನ್ನ ವಿರೋಧ ಮತ್ತು ಕಳವಳವನ್ನ ತಿಳಿಸಿದೆ.

ಹೌದು ಪಾಕಿಸ್ತಾನದ ಲಾಹೋರ್‌ನಲ್ಲಿರುವ ನೌಲಖ್‌ ಬಜಾರ್‌ನಲ್ಲಿನ ಶಾಹಿದಿ ಆಸ್ಥಾನ ಭಾಯಿ ತರುಜಿ ಗುರುದ್ವಾರವನ್ನು ಪಾಕಿಸ್ತಾನ ಶಹೀದ್‌ ಗಂಜ್‌ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿದೆ. ಇದಕ್ಕೆ ಪಾಕಿಸ್ತಾನದಲ್ಲಿರುವ ಸಿಖ್‌ ಅಲ್ಪಸಂಖ್ಯಾತರು ತೀವ್ರವಾಗಿ ವಿರೋಧಿಸಿದ್ದಾರೆ. ಈ ಸಂಬಂಧ ಪಾಕಿಸ್ತಾನ ಸರ್ಕಾರಕ್ಕೆ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸದಂತೆ ಮನವಿ ಮಾಡಿದ್ದಾರೆ.

1745ರಲ್ಲಿ ಕಟ್ಟಲಾದ ಗುರುದ್ವಾರ 1745ರಲ್ಲಿ ಸ್ಥಾಪಿತವಾದ ಈ ಗುರುದ್ವಾರ ಸಿಖ್‌ರ ಪಾಲಿಗೆ ಐತಿಹಾಸಿಕ ಮತ್ತು ಧಾರ್ಮಿಕವಾಗಿ ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಜೀವವನ್ನಾದರೂ ಬಿಟ್ಟೇನು ನನ್ನ ಪಗಡಿಯನ್ನ ಬಿಡೆನು ಎಂದು ಭಾಯೀ ತರುಜಿ ಸಿಖ್‌ ಧರ್ಮವನ್ನು ಎತ್ತಿ ಹಿಡಿಯಲು ತಮ್ಮ ಜೀವವನ್ನೇ ತ್ಯಾಗ ಮಾಡಿದ್ದರು. ಅವರು ಜೀವತ್ಯಾಗ ಮಾಡಿದ ಈ ಸ್ಥಳದಲ್ಲಿಯೇ 1745ರಲ್ಲಿ ಈ ಗುರುದ್ವಾರವನ್ನು ಕಟ್ಟಲಾಗಿದೆ.

ಈಗ ಲಾಹೋರ್‌ನಲ್ಲಿರುವ ಕೆಲ ಮತೀಯವಾದಿಗಳು ಈ ಗುರುದ್ವಾರವನ್ನು ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿದ್ದಾರೆ. ಇದು ವಿಶ್ವಾದ್ಯಂತ ಸಿಖ್‌ ಧರ್ಮೀಯರಲ್ಲಿ ಆಕ್ರೋಶ ತರಿಸಿದೆ. ಈ ಸಂಬಂಧ ಭಾರತ ಸರ್ಕಾರ ಕೂಡಾ ಕಟುವಾಗಿ ಪಾಕಿಸ್ತಾನ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಗುರುದ್ವಾರನ್ನು ಮಸೀದಿಯನ್ನಾಗಿ ಪರಿವರ್ತಿಸುವ ಯಾವುದೇ ಕ್ರಮವನ್ನು ವಿರೋಧಿಸುವುದಾಗಿ ತಿಳಿಸಿದೆ.

Published On - 6:20 pm, Wed, 29 July 20

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು