Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಖ್‌ ಗುರುದ್ವಾರ ಕೆಡವಿ.. ಮಸೀದಿ ನಿರ್ಮಾಣಕ್ಕೆ ಮುಂದಾದ ಪಾಪಿ ಪಾಕಿಸ್ತಾನ

ಲಾಹೋರ್‌: ಪಾಕಿಸ್ತಾನದಲ್ಲಿರುವ ಐತಿಹಾಸಿಕ ಸಿಖ್‌ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿರುವ ಪಾಕಿಸ್ತಾನದ ಕ್ರಮವನ್ನ ಭಾರತ ಕಟುವಾಗಿ ವಿರೋಧಿಸಿದೆ. ಈ ಸಂಬಂಧ ಪಾಕಿಸ್ತಾನಕ್ಕೆ ತನ್ನ ವಿರೋಧ ಮತ್ತು ಕಳವಳವನ್ನ ತಿಳಿಸಿದೆ. ಹೌದು ಪಾಕಿಸ್ತಾನದ ಲಾಹೋರ್‌ನಲ್ಲಿರುವ ನೌಲಖ್‌ ಬಜಾರ್‌ನಲ್ಲಿನ ಶಾಹಿದಿ ಆಸ್ಥಾನ ಭಾಯಿ ತರುಜಿ ಗುರುದ್ವಾರವನ್ನು ಪಾಕಿಸ್ತಾನ ಶಹೀದ್‌ ಗಂಜ್‌ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿದೆ. ಇದಕ್ಕೆ ಪಾಕಿಸ್ತಾನದಲ್ಲಿರುವ ಸಿಖ್‌ ಅಲ್ಪಸಂಖ್ಯಾತರು ತೀವ್ರವಾಗಿ ವಿರೋಧಿಸಿದ್ದಾರೆ. ಈ ಸಂಬಂಧ ಪಾಕಿಸ್ತಾನ ಸರ್ಕಾರಕ್ಕೆ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸದಂತೆ ಮನವಿ ಮಾಡಿದ್ದಾರೆ. 1745ರಲ್ಲಿ ಕಟ್ಟಲಾದ ಗುರುದ್ವಾರ […]

ಸಿಖ್‌ ಗುರುದ್ವಾರ ಕೆಡವಿ.. ಮಸೀದಿ ನಿರ್ಮಾಣಕ್ಕೆ ಮುಂದಾದ ಪಾಪಿ ಪಾಕಿಸ್ತಾನ
Follow us
Guru
| Updated By:

Updated on:Jul 31, 2020 | 12:23 AM

ಲಾಹೋರ್‌: ಪಾಕಿಸ್ತಾನದಲ್ಲಿರುವ ಐತಿಹಾಸಿಕ ಸಿಖ್‌ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿರುವ ಪಾಕಿಸ್ತಾನದ ಕ್ರಮವನ್ನ ಭಾರತ ಕಟುವಾಗಿ ವಿರೋಧಿಸಿದೆ. ಈ ಸಂಬಂಧ ಪಾಕಿಸ್ತಾನಕ್ಕೆ ತನ್ನ ವಿರೋಧ ಮತ್ತು ಕಳವಳವನ್ನ ತಿಳಿಸಿದೆ.

ಹೌದು ಪಾಕಿಸ್ತಾನದ ಲಾಹೋರ್‌ನಲ್ಲಿರುವ ನೌಲಖ್‌ ಬಜಾರ್‌ನಲ್ಲಿನ ಶಾಹಿದಿ ಆಸ್ಥಾನ ಭಾಯಿ ತರುಜಿ ಗುರುದ್ವಾರವನ್ನು ಪಾಕಿಸ್ತಾನ ಶಹೀದ್‌ ಗಂಜ್‌ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿದೆ. ಇದಕ್ಕೆ ಪಾಕಿಸ್ತಾನದಲ್ಲಿರುವ ಸಿಖ್‌ ಅಲ್ಪಸಂಖ್ಯಾತರು ತೀವ್ರವಾಗಿ ವಿರೋಧಿಸಿದ್ದಾರೆ. ಈ ಸಂಬಂಧ ಪಾಕಿಸ್ತಾನ ಸರ್ಕಾರಕ್ಕೆ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸದಂತೆ ಮನವಿ ಮಾಡಿದ್ದಾರೆ.

1745ರಲ್ಲಿ ಕಟ್ಟಲಾದ ಗುರುದ್ವಾರ 1745ರಲ್ಲಿ ಸ್ಥಾಪಿತವಾದ ಈ ಗುರುದ್ವಾರ ಸಿಖ್‌ರ ಪಾಲಿಗೆ ಐತಿಹಾಸಿಕ ಮತ್ತು ಧಾರ್ಮಿಕವಾಗಿ ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಜೀವವನ್ನಾದರೂ ಬಿಟ್ಟೇನು ನನ್ನ ಪಗಡಿಯನ್ನ ಬಿಡೆನು ಎಂದು ಭಾಯೀ ತರುಜಿ ಸಿಖ್‌ ಧರ್ಮವನ್ನು ಎತ್ತಿ ಹಿಡಿಯಲು ತಮ್ಮ ಜೀವವನ್ನೇ ತ್ಯಾಗ ಮಾಡಿದ್ದರು. ಅವರು ಜೀವತ್ಯಾಗ ಮಾಡಿದ ಈ ಸ್ಥಳದಲ್ಲಿಯೇ 1745ರಲ್ಲಿ ಈ ಗುರುದ್ವಾರವನ್ನು ಕಟ್ಟಲಾಗಿದೆ.

ಈಗ ಲಾಹೋರ್‌ನಲ್ಲಿರುವ ಕೆಲ ಮತೀಯವಾದಿಗಳು ಈ ಗುರುದ್ವಾರವನ್ನು ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿದ್ದಾರೆ. ಇದು ವಿಶ್ವಾದ್ಯಂತ ಸಿಖ್‌ ಧರ್ಮೀಯರಲ್ಲಿ ಆಕ್ರೋಶ ತರಿಸಿದೆ. ಈ ಸಂಬಂಧ ಭಾರತ ಸರ್ಕಾರ ಕೂಡಾ ಕಟುವಾಗಿ ಪಾಕಿಸ್ತಾನ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಗುರುದ್ವಾರನ್ನು ಮಸೀದಿಯನ್ನಾಗಿ ಪರಿವರ್ತಿಸುವ ಯಾವುದೇ ಕ್ರಮವನ್ನು ವಿರೋಧಿಸುವುದಾಗಿ ತಿಳಿಸಿದೆ.

Published On - 6:20 pm, Wed, 29 July 20

ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್