AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಖ್‌ ಗುರುದ್ವಾರ ಕೆಡವಿ.. ಮಸೀದಿ ನಿರ್ಮಾಣಕ್ಕೆ ಮುಂದಾದ ಪಾಪಿ ಪಾಕಿಸ್ತಾನ

ಲಾಹೋರ್‌: ಪಾಕಿಸ್ತಾನದಲ್ಲಿರುವ ಐತಿಹಾಸಿಕ ಸಿಖ್‌ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿರುವ ಪಾಕಿಸ್ತಾನದ ಕ್ರಮವನ್ನ ಭಾರತ ಕಟುವಾಗಿ ವಿರೋಧಿಸಿದೆ. ಈ ಸಂಬಂಧ ಪಾಕಿಸ್ತಾನಕ್ಕೆ ತನ್ನ ವಿರೋಧ ಮತ್ತು ಕಳವಳವನ್ನ ತಿಳಿಸಿದೆ. ಹೌದು ಪಾಕಿಸ್ತಾನದ ಲಾಹೋರ್‌ನಲ್ಲಿರುವ ನೌಲಖ್‌ ಬಜಾರ್‌ನಲ್ಲಿನ ಶಾಹಿದಿ ಆಸ್ಥಾನ ಭಾಯಿ ತರುಜಿ ಗುರುದ್ವಾರವನ್ನು ಪಾಕಿಸ್ತಾನ ಶಹೀದ್‌ ಗಂಜ್‌ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿದೆ. ಇದಕ್ಕೆ ಪಾಕಿಸ್ತಾನದಲ್ಲಿರುವ ಸಿಖ್‌ ಅಲ್ಪಸಂಖ್ಯಾತರು ತೀವ್ರವಾಗಿ ವಿರೋಧಿಸಿದ್ದಾರೆ. ಈ ಸಂಬಂಧ ಪಾಕಿಸ್ತಾನ ಸರ್ಕಾರಕ್ಕೆ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸದಂತೆ ಮನವಿ ಮಾಡಿದ್ದಾರೆ. 1745ರಲ್ಲಿ ಕಟ್ಟಲಾದ ಗುರುದ್ವಾರ […]

ಸಿಖ್‌ ಗುರುದ್ವಾರ ಕೆಡವಿ.. ಮಸೀದಿ ನಿರ್ಮಾಣಕ್ಕೆ ಮುಂದಾದ ಪಾಪಿ ಪಾಕಿಸ್ತಾನ
Guru
Guru| Edited By: |

Updated on:Jul 31, 2020 | 12:23 AM

Share

ಲಾಹೋರ್‌: ಪಾಕಿಸ್ತಾನದಲ್ಲಿರುವ ಐತಿಹಾಸಿಕ ಸಿಖ್‌ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿರುವ ಪಾಕಿಸ್ತಾನದ ಕ್ರಮವನ್ನ ಭಾರತ ಕಟುವಾಗಿ ವಿರೋಧಿಸಿದೆ. ಈ ಸಂಬಂಧ ಪಾಕಿಸ್ತಾನಕ್ಕೆ ತನ್ನ ವಿರೋಧ ಮತ್ತು ಕಳವಳವನ್ನ ತಿಳಿಸಿದೆ.

ಹೌದು ಪಾಕಿಸ್ತಾನದ ಲಾಹೋರ್‌ನಲ್ಲಿರುವ ನೌಲಖ್‌ ಬಜಾರ್‌ನಲ್ಲಿನ ಶಾಹಿದಿ ಆಸ್ಥಾನ ಭಾಯಿ ತರುಜಿ ಗುರುದ್ವಾರವನ್ನು ಪಾಕಿಸ್ತಾನ ಶಹೀದ್‌ ಗಂಜ್‌ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿದೆ. ಇದಕ್ಕೆ ಪಾಕಿಸ್ತಾನದಲ್ಲಿರುವ ಸಿಖ್‌ ಅಲ್ಪಸಂಖ್ಯಾತರು ತೀವ್ರವಾಗಿ ವಿರೋಧಿಸಿದ್ದಾರೆ. ಈ ಸಂಬಂಧ ಪಾಕಿಸ್ತಾನ ಸರ್ಕಾರಕ್ಕೆ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸದಂತೆ ಮನವಿ ಮಾಡಿದ್ದಾರೆ.

1745ರಲ್ಲಿ ಕಟ್ಟಲಾದ ಗುರುದ್ವಾರ 1745ರಲ್ಲಿ ಸ್ಥಾಪಿತವಾದ ಈ ಗುರುದ್ವಾರ ಸಿಖ್‌ರ ಪಾಲಿಗೆ ಐತಿಹಾಸಿಕ ಮತ್ತು ಧಾರ್ಮಿಕವಾಗಿ ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಜೀವವನ್ನಾದರೂ ಬಿಟ್ಟೇನು ನನ್ನ ಪಗಡಿಯನ್ನ ಬಿಡೆನು ಎಂದು ಭಾಯೀ ತರುಜಿ ಸಿಖ್‌ ಧರ್ಮವನ್ನು ಎತ್ತಿ ಹಿಡಿಯಲು ತಮ್ಮ ಜೀವವನ್ನೇ ತ್ಯಾಗ ಮಾಡಿದ್ದರು. ಅವರು ಜೀವತ್ಯಾಗ ಮಾಡಿದ ಈ ಸ್ಥಳದಲ್ಲಿಯೇ 1745ರಲ್ಲಿ ಈ ಗುರುದ್ವಾರವನ್ನು ಕಟ್ಟಲಾಗಿದೆ.

ಈಗ ಲಾಹೋರ್‌ನಲ್ಲಿರುವ ಕೆಲ ಮತೀಯವಾದಿಗಳು ಈ ಗುರುದ್ವಾರವನ್ನು ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿದ್ದಾರೆ. ಇದು ವಿಶ್ವಾದ್ಯಂತ ಸಿಖ್‌ ಧರ್ಮೀಯರಲ್ಲಿ ಆಕ್ರೋಶ ತರಿಸಿದೆ. ಈ ಸಂಬಂಧ ಭಾರತ ಸರ್ಕಾರ ಕೂಡಾ ಕಟುವಾಗಿ ಪಾಕಿಸ್ತಾನ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಗುರುದ್ವಾರನ್ನು ಮಸೀದಿಯನ್ನಾಗಿ ಪರಿವರ್ತಿಸುವ ಯಾವುದೇ ಕ್ರಮವನ್ನು ವಿರೋಧಿಸುವುದಾಗಿ ತಿಳಿಸಿದೆ.

Published On - 6:20 pm, Wed, 29 July 20

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?