AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಖ್‌ ಗುರುದ್ವಾರ ಕೆಡವಿ.. ಮಸೀದಿ ನಿರ್ಮಾಣಕ್ಕೆ ಮುಂದಾದ ಪಾಪಿ ಪಾಕಿಸ್ತಾನ

ಲಾಹೋರ್‌: ಪಾಕಿಸ್ತಾನದಲ್ಲಿರುವ ಐತಿಹಾಸಿಕ ಸಿಖ್‌ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿರುವ ಪಾಕಿಸ್ತಾನದ ಕ್ರಮವನ್ನ ಭಾರತ ಕಟುವಾಗಿ ವಿರೋಧಿಸಿದೆ. ಈ ಸಂಬಂಧ ಪಾಕಿಸ್ತಾನಕ್ಕೆ ತನ್ನ ವಿರೋಧ ಮತ್ತು ಕಳವಳವನ್ನ ತಿಳಿಸಿದೆ. ಹೌದು ಪಾಕಿಸ್ತಾನದ ಲಾಹೋರ್‌ನಲ್ಲಿರುವ ನೌಲಖ್‌ ಬಜಾರ್‌ನಲ್ಲಿನ ಶಾಹಿದಿ ಆಸ್ಥಾನ ಭಾಯಿ ತರುಜಿ ಗುರುದ್ವಾರವನ್ನು ಪಾಕಿಸ್ತಾನ ಶಹೀದ್‌ ಗಂಜ್‌ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿದೆ. ಇದಕ್ಕೆ ಪಾಕಿಸ್ತಾನದಲ್ಲಿರುವ ಸಿಖ್‌ ಅಲ್ಪಸಂಖ್ಯಾತರು ತೀವ್ರವಾಗಿ ವಿರೋಧಿಸಿದ್ದಾರೆ. ಈ ಸಂಬಂಧ ಪಾಕಿಸ್ತಾನ ಸರ್ಕಾರಕ್ಕೆ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸದಂತೆ ಮನವಿ ಮಾಡಿದ್ದಾರೆ. 1745ರಲ್ಲಿ ಕಟ್ಟಲಾದ ಗುರುದ್ವಾರ […]

ಸಿಖ್‌ ಗುರುದ್ವಾರ ಕೆಡವಿ.. ಮಸೀದಿ ನಿರ್ಮಾಣಕ್ಕೆ ಮುಂದಾದ ಪಾಪಿ ಪಾಕಿಸ್ತಾನ
Guru
| Updated By: |

Updated on:Jul 31, 2020 | 12:23 AM

Share

ಲಾಹೋರ್‌: ಪಾಕಿಸ್ತಾನದಲ್ಲಿರುವ ಐತಿಹಾಸಿಕ ಸಿಖ್‌ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿರುವ ಪಾಕಿಸ್ತಾನದ ಕ್ರಮವನ್ನ ಭಾರತ ಕಟುವಾಗಿ ವಿರೋಧಿಸಿದೆ. ಈ ಸಂಬಂಧ ಪಾಕಿಸ್ತಾನಕ್ಕೆ ತನ್ನ ವಿರೋಧ ಮತ್ತು ಕಳವಳವನ್ನ ತಿಳಿಸಿದೆ.

ಹೌದು ಪಾಕಿಸ್ತಾನದ ಲಾಹೋರ್‌ನಲ್ಲಿರುವ ನೌಲಖ್‌ ಬಜಾರ್‌ನಲ್ಲಿನ ಶಾಹಿದಿ ಆಸ್ಥಾನ ಭಾಯಿ ತರುಜಿ ಗುರುದ್ವಾರವನ್ನು ಪಾಕಿಸ್ತಾನ ಶಹೀದ್‌ ಗಂಜ್‌ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿದೆ. ಇದಕ್ಕೆ ಪಾಕಿಸ್ತಾನದಲ್ಲಿರುವ ಸಿಖ್‌ ಅಲ್ಪಸಂಖ್ಯಾತರು ತೀವ್ರವಾಗಿ ವಿರೋಧಿಸಿದ್ದಾರೆ. ಈ ಸಂಬಂಧ ಪಾಕಿಸ್ತಾನ ಸರ್ಕಾರಕ್ಕೆ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸದಂತೆ ಮನವಿ ಮಾಡಿದ್ದಾರೆ.

1745ರಲ್ಲಿ ಕಟ್ಟಲಾದ ಗುರುದ್ವಾರ 1745ರಲ್ಲಿ ಸ್ಥಾಪಿತವಾದ ಈ ಗುರುದ್ವಾರ ಸಿಖ್‌ರ ಪಾಲಿಗೆ ಐತಿಹಾಸಿಕ ಮತ್ತು ಧಾರ್ಮಿಕವಾಗಿ ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಜೀವವನ್ನಾದರೂ ಬಿಟ್ಟೇನು ನನ್ನ ಪಗಡಿಯನ್ನ ಬಿಡೆನು ಎಂದು ಭಾಯೀ ತರುಜಿ ಸಿಖ್‌ ಧರ್ಮವನ್ನು ಎತ್ತಿ ಹಿಡಿಯಲು ತಮ್ಮ ಜೀವವನ್ನೇ ತ್ಯಾಗ ಮಾಡಿದ್ದರು. ಅವರು ಜೀವತ್ಯಾಗ ಮಾಡಿದ ಈ ಸ್ಥಳದಲ್ಲಿಯೇ 1745ರಲ್ಲಿ ಈ ಗುರುದ್ವಾರವನ್ನು ಕಟ್ಟಲಾಗಿದೆ.

ಈಗ ಲಾಹೋರ್‌ನಲ್ಲಿರುವ ಕೆಲ ಮತೀಯವಾದಿಗಳು ಈ ಗುರುದ್ವಾರವನ್ನು ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿದ್ದಾರೆ. ಇದು ವಿಶ್ವಾದ್ಯಂತ ಸಿಖ್‌ ಧರ್ಮೀಯರಲ್ಲಿ ಆಕ್ರೋಶ ತರಿಸಿದೆ. ಈ ಸಂಬಂಧ ಭಾರತ ಸರ್ಕಾರ ಕೂಡಾ ಕಟುವಾಗಿ ಪಾಕಿಸ್ತಾನ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಗುರುದ್ವಾರನ್ನು ಮಸೀದಿಯನ್ನಾಗಿ ಪರಿವರ್ತಿಸುವ ಯಾವುದೇ ಕ್ರಮವನ್ನು ವಿರೋಧಿಸುವುದಾಗಿ ತಿಳಿಸಿದೆ.

Published On - 6:20 pm, Wed, 29 July 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ