AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಖ್‌ ಗುರುದ್ವಾರ ಕೆಡವಿ.. ಮಸೀದಿ ನಿರ್ಮಾಣಕ್ಕೆ ಮುಂದಾದ ಪಾಪಿ ಪಾಕಿಸ್ತಾನ

ಲಾಹೋರ್‌: ಪಾಕಿಸ್ತಾನದಲ್ಲಿರುವ ಐತಿಹಾಸಿಕ ಸಿಖ್‌ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿರುವ ಪಾಕಿಸ್ತಾನದ ಕ್ರಮವನ್ನ ಭಾರತ ಕಟುವಾಗಿ ವಿರೋಧಿಸಿದೆ. ಈ ಸಂಬಂಧ ಪಾಕಿಸ್ತಾನಕ್ಕೆ ತನ್ನ ವಿರೋಧ ಮತ್ತು ಕಳವಳವನ್ನ ತಿಳಿಸಿದೆ. ಹೌದು ಪಾಕಿಸ್ತಾನದ ಲಾಹೋರ್‌ನಲ್ಲಿರುವ ನೌಲಖ್‌ ಬಜಾರ್‌ನಲ್ಲಿನ ಶಾಹಿದಿ ಆಸ್ಥಾನ ಭಾಯಿ ತರುಜಿ ಗುರುದ್ವಾರವನ್ನು ಪಾಕಿಸ್ತಾನ ಶಹೀದ್‌ ಗಂಜ್‌ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿದೆ. ಇದಕ್ಕೆ ಪಾಕಿಸ್ತಾನದಲ್ಲಿರುವ ಸಿಖ್‌ ಅಲ್ಪಸಂಖ್ಯಾತರು ತೀವ್ರವಾಗಿ ವಿರೋಧಿಸಿದ್ದಾರೆ. ಈ ಸಂಬಂಧ ಪಾಕಿಸ್ತಾನ ಸರ್ಕಾರಕ್ಕೆ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸದಂತೆ ಮನವಿ ಮಾಡಿದ್ದಾರೆ. 1745ರಲ್ಲಿ ಕಟ್ಟಲಾದ ಗುರುದ್ವಾರ […]

ಸಿಖ್‌ ಗುರುದ್ವಾರ ಕೆಡವಿ.. ಮಸೀದಿ ನಿರ್ಮಾಣಕ್ಕೆ ಮುಂದಾದ ಪಾಪಿ ಪಾಕಿಸ್ತಾನ
Guru
Guru| Edited By: |

Updated on:Jul 31, 2020 | 12:23 AM

Share

ಲಾಹೋರ್‌: ಪಾಕಿಸ್ತಾನದಲ್ಲಿರುವ ಐತಿಹಾಸಿಕ ಸಿಖ್‌ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿರುವ ಪಾಕಿಸ್ತಾನದ ಕ್ರಮವನ್ನ ಭಾರತ ಕಟುವಾಗಿ ವಿರೋಧಿಸಿದೆ. ಈ ಸಂಬಂಧ ಪಾಕಿಸ್ತಾನಕ್ಕೆ ತನ್ನ ವಿರೋಧ ಮತ್ತು ಕಳವಳವನ್ನ ತಿಳಿಸಿದೆ.

ಹೌದು ಪಾಕಿಸ್ತಾನದ ಲಾಹೋರ್‌ನಲ್ಲಿರುವ ನೌಲಖ್‌ ಬಜಾರ್‌ನಲ್ಲಿನ ಶಾಹಿದಿ ಆಸ್ಥಾನ ಭಾಯಿ ತರುಜಿ ಗುರುದ್ವಾರವನ್ನು ಪಾಕಿಸ್ತಾನ ಶಹೀದ್‌ ಗಂಜ್‌ ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿದೆ. ಇದಕ್ಕೆ ಪಾಕಿಸ್ತಾನದಲ್ಲಿರುವ ಸಿಖ್‌ ಅಲ್ಪಸಂಖ್ಯಾತರು ತೀವ್ರವಾಗಿ ವಿರೋಧಿಸಿದ್ದಾರೆ. ಈ ಸಂಬಂಧ ಪಾಕಿಸ್ತಾನ ಸರ್ಕಾರಕ್ಕೆ ಗುರುದ್ವಾರವನ್ನ ಮಸೀದಿಯನ್ನಾಗಿ ಪರಿವರ್ತಿಸದಂತೆ ಮನವಿ ಮಾಡಿದ್ದಾರೆ.

1745ರಲ್ಲಿ ಕಟ್ಟಲಾದ ಗುರುದ್ವಾರ 1745ರಲ್ಲಿ ಸ್ಥಾಪಿತವಾದ ಈ ಗುರುದ್ವಾರ ಸಿಖ್‌ರ ಪಾಲಿಗೆ ಐತಿಹಾಸಿಕ ಮತ್ತು ಧಾರ್ಮಿಕವಾಗಿ ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಜೀವವನ್ನಾದರೂ ಬಿಟ್ಟೇನು ನನ್ನ ಪಗಡಿಯನ್ನ ಬಿಡೆನು ಎಂದು ಭಾಯೀ ತರುಜಿ ಸಿಖ್‌ ಧರ್ಮವನ್ನು ಎತ್ತಿ ಹಿಡಿಯಲು ತಮ್ಮ ಜೀವವನ್ನೇ ತ್ಯಾಗ ಮಾಡಿದ್ದರು. ಅವರು ಜೀವತ್ಯಾಗ ಮಾಡಿದ ಈ ಸ್ಥಳದಲ್ಲಿಯೇ 1745ರಲ್ಲಿ ಈ ಗುರುದ್ವಾರವನ್ನು ಕಟ್ಟಲಾಗಿದೆ.

ಈಗ ಲಾಹೋರ್‌ನಲ್ಲಿರುವ ಕೆಲ ಮತೀಯವಾದಿಗಳು ಈ ಗುರುದ್ವಾರವನ್ನು ಮಸೀದಿಯನ್ನಾಗಿ ಪರಿವರ್ತಿಸಲು ಮುಂದಾಗಿದ್ದಾರೆ. ಇದು ವಿಶ್ವಾದ್ಯಂತ ಸಿಖ್‌ ಧರ್ಮೀಯರಲ್ಲಿ ಆಕ್ರೋಶ ತರಿಸಿದೆ. ಈ ಸಂಬಂಧ ಭಾರತ ಸರ್ಕಾರ ಕೂಡಾ ಕಟುವಾಗಿ ಪಾಕಿಸ್ತಾನ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಗುರುದ್ವಾರನ್ನು ಮಸೀದಿಯನ್ನಾಗಿ ಪರಿವರ್ತಿಸುವ ಯಾವುದೇ ಕ್ರಮವನ್ನು ವಿರೋಧಿಸುವುದಾಗಿ ತಿಳಿಸಿದೆ.

Published On - 6:20 pm, Wed, 29 July 20

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು