AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿಒ ಸಮಿಟ್​ನಲ್ಲಿ ಭಯೋತ್ಪಾದನೆ ವಿರುದ್ಧ ವ್ಯಕ್ತವಾದ ಖಂಡನೆ; ಭಾರತದ ನಿಲುವಿಗೆ ಬೆಂಬಲ, ಪಾಕಿಸ್ತಾನಕ್ಕೆ ಪರೋಕ್ಷ ಮುಖಭಂಗ

SCO members support Indian sentiment on terrorism: ಶಾಂಘೈ ಸಹಕಾರ ಸಂಘಟನೆ (ಎಸ್​ಸಿಒ) ಶೃಂಗಸಭೆಯಲ್ಲಿ ಭಯೋತ್ಪಾದನೆ ವಿರುದ್ಧ ಬಲವಾದ ಧ್ವನಿ ವ್ಯಕ್ತವಾಯಿತು. ನರೇಂದ್ರ ಮೋದಿ ಅವರು ಪಹಲ್ಗಾಂ ಉಗ್ರ ದಾಳಿ ಘಟನೆಯನ್ನು ಖಂಡಿಸಿದರು. ಎಸ್​ಸಿಒ ಸದಸ್ಯ ರಾಷ್ಟ್ರಗಳು ಇದಕ್ಕೆ ಬೆಂಬಲ ನೀಡಿವೆ. ಟಿಯಾಂಜಿನ್ ಡಿಕ್ಲರೇಶನ್​ನಲ್ಲಿ ಪಹಲ್ಗಾಂ ದಾಳಿ ಘಟನೆಯನ್ನು ಬಲವಾಗಿ ಖಂಡಿಸಲಾಗಿದೆ.

ಎಸ್​ಸಿಒ ಸಮಿಟ್​ನಲ್ಲಿ ಭಯೋತ್ಪಾದನೆ ವಿರುದ್ಧ ವ್ಯಕ್ತವಾದ ಖಂಡನೆ; ಭಾರತದ ನಿಲುವಿಗೆ ಬೆಂಬಲ, ಪಾಕಿಸ್ತಾನಕ್ಕೆ ಪರೋಕ್ಷ ಮುಖಭಂಗ
ಎಸ್​ಸಿಒ ಸಮಿಟ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 01, 2025 | 11:52 AM

Share

ನವದೆಹಲಿ, ಸೆಪ್ಟೆಂಬರ್ 1: ಚೀನಾದಲ್ಲಿ ನಡೆದ ಎಸ್​ಸಿಒ ಸಭೆಯಲ್ಲಿ (SCO Summit) ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಯೋತ್ಪಾದನೆ ವಿರುದ್ಧ ಧ್ವನಿ ಎತ್ತಿದರು. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಕೆಲ ದೇಶಗಳು ಹೇಗೆ ದ್ವಂದ್ವ ನೀತಿ ಅನುಸರಿಸುತ್ತಿವೆ ಎಂಬುದನ್ನು ಮೋದಿ ಎತ್ತಿ ತೋರಿಸಿದರು. ಮೋದಿ ಅವರ ಈ ಅನಿಸಿಕೆಗೆ ಎಸ್​ಸಿಒದ ಸದಸ್ಯ ರಾಷ್ಟ್ರಗಳು ಬೆಂಬಲ ನೀಡಿವೆ. ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದನಾ ದಾಳಿಯನ್ನು ಈ ರಾಷ್ಟ್ರಗಳು ಖಂಡಿಸಿವೆ.

ಚೀನಾದ ಟಿಯಾಂಜಿನ್​ನಲ್ಲಿ ನಡೆದ ಈ ಸಮಿಟ್​ನಲ್ಲಿ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಕೂಡ ಪಾಲ್ಗೊಂಡಿದ್ದರು. ಅವರ ಎದುರೇ ಭಾರತವು ಭಯೋತ್ಪಾದನೆ ವಿರುದ್ಧ ವಿವಿಧ ರಾಷ್ಟ್ರಗಳ ಬೆಂಬಲ ಗಳಿಸಿದ್ದು ಅದಕ್ಕೆ ಸಿಕ್ಕ ರಾಜತಾಂತ್ರಿಕ ಗೆಲುವು ಎಂದು ವಿಶ್ಲೇಷಿಸಲಾಗಿದೆ.

ಇದನ್ನೂ ಓದಿ: ದ್ವಿಪಕ್ಷೀಯ ಮಾತುಕತೆಯಲ್ಲಿ ಭಾರತದಿಂದ ಭಯೋತ್ಪಾದನೆ ವಿಚಾರ; ಚೀನಾದಿಂದಲೂ ಬೆಂಬಲ

ಟಿಯಾಂಜಿನ್ ಘೋಷಣೆಯಲ್ಲಿ ಪಹಲ್ಗಾಂ ಉಗ್ರ ದಾಳಿ ಘಟನೆ ಖಂಡನೆ

2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರಗಾಮಿಗಳು ದಾಳಿ ಮಾಡಿ ಹಲವು ಮಂದಿಯನ್ನು ಗುಂಡಿಟ್ಟು ಬಲಿಪಡೆದಿದ್ದರು. ಶಾಂಘೈ ಸಹಕಾರ ಸಂಘಟನೆಯ ವಿವಿಧ ಸದಸ್ಯ ದೇಶಗಳು ಟಿಯಾಂಜಿನ್ ಘೋಷಣೆಯಲ್ಲಿ ಪಹಲ್ಗಾಂ ಘಟನೆಯನ್ನು ಬಲವಾಗಿ ಖಂಡಿಸಿವೆ.

‘ಸದಸ್ಯ ದೇಶಗಳು ಪಹಲ್ಗಾಂ ಉಗ್ರ ದಾಳಿ ಘಟನೆಯನ್ನು ಬಲವಾಗಿ ಖಂಡಿಸಿವೆ. ಮೃತರು ಮತ್ತು ಗಾಯಾಳುಗಳಿಗೆ ಸಾಂತ್ವನ ವ್ಯಕ್ತಪಡಿಸಿವೆ. ಇಂಥ ದಾಳಿಗಳನ್ನು ಎಸಗಿದವರು, ಬೆಂಬಲ ನೀಡಿದವರಿಗೆ ಶಿಕ್ಷೆಯಾಗಬೇಕು’ ಎಂದು ಟಿಯಾಂಜಿನ್ ಡಿಕ್ಲರೇಶನ್​ನಲ್ಲಿ ಹೇಳಲಾಗಿದೆ.

ಇದಕ್ಕೂ ಮುನ್ನ ನರೇಂದ್ರ ಮೋದಿ ಅವರು ಪಹಲ್ಗಾಂ ಉಗ್ರ ದಾಳಿ ಘಟನೆಯನ್ನು ಸಭೆಯಲ್ಲಿ ಪ್ರಸ್ತಾಪಿಸಿ ತೀವ್ರವಾಗಿ ಖಂಡಿಸಿದ್ದರು. ‘ಪಹಲ್ಗಾಂ ಘಟನೆಯು ಭಾರತದ ಆತ್ಮದ ಮೇಲೆ ನಡೆದ ದಾಳಿ ಮಾತ್ರವಲ್ಲ, ಮಾನವೀಯತೆನ್ನು ನಂಬುವ ಪ್ರತಿಯೊಂದು ದೇಶಕ್ಕೂ ಎಸೆದ ಸವಾಲಾಗಿತ್ತು. ಕೆಲ ದೇಶಗಳು ಬಹಿರಂಗವಾಗಿ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವುದನ್ನು ಹೇಗೆ ಒಪ್ಪುವುದು ಎನ್ನುವ ಪ್ರಶ್ನೆ ಉದ್ಭವವಾಗುತ್ತದೆ’ ಎಂದು ಮೋದಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: ಪರಸ್ಪರ ನಂಬಿಕೆ, ಗೌರವದ ಮೇಲೆ ನಮ್ಮ ಸಂಬಂಧ ಮುಂದುವರೆಸಲು ಬದ್ಧ: ಜಿನ್​​ಪಿಂಗ್​​ಗೆ ಮೋದಿ ಸಂದೇಶ

ಎಸ್​ಸಿಒ ಶೃಂಗಸಭೆಯಲ್ಲಿ ಭಾರತ, ರಷ್ಯಾ ಮತ್ತು ಚೀನಾ ಶಕ್ತಿಗಳ ಸಮಾಗಮವಾಗಿತ್ತು. ನರೇಂದ್ರ ಮೋದಿ, ವ್ಲಾದಿಮಿರ್ ಪುಟಿನ್, ಷಿ ಜಿನ್​ಪಿಂಗ್ ಒಟ್ಟಿಗೆ ನಿಂತು ಮಾತನಾಡಿದರು. ಪುಟಿನ್ ಮತ್ತು ಮೋದಿ ನಡುವೆ ಹೆಚ್ಚಿನ ಆಪ್ತತೆ ಕಾಣಿಸಿತ್ತು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ತೃತೀಯ ಜಗತ್ತಿನ ರಾಷ್ಟ್ರಗಳ ಶಕ್ತಿಗಳು ನಿರ್ದಿಷ್ಟ ಸಂದೇಶ ರವಾನಿಸಿದಂತೆ ಕಾಣುತ್ತಿದೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!