ಲಂಡನ್​ನಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿದ್ದ ಖಲಿಸ್ತಾನಿ ಉಗ್ರರಿಗೆ ತಕ್ಕ ಉತ್ತರ ನೀಡಿದ ಭಾರತ

ಲಂಡನ್​ನಲ್ಲಿ ಭಾರತದ ರಾಷ್ಟ್ರಧ್ವಜವನ್ನು ಕೆಳಗಿಳಿಸಿದ್ದ ಖಲಿಸ್ತಾನಿ ಉಗ್ರರಿಗೆ ಭಾರತೀಯ ಹೈಕಮಿಷನ್ ತಕ್ಕ ಉತ್ತರ ನೀಡಿದೆ. ಭಾರತೀಯ ಹೈಕಮಿಷನ್ ಮೇಲೆ ಬೃಹತ್ ತ್ರಿವರ್ಣಧ್ವಜ ಹಾರಿಸಲಾಗಿದೆ.

ಲಂಡನ್​ನಲ್ಲಿ ಭಾರತದ  ತ್ರಿವರ್ಣ ಧ್ವಜವನ್ನು ಕೆಳಗಿಳಿಸಿದ್ದ ಖಲಿಸ್ತಾನಿ ಉಗ್ರರಿಗೆ ತಕ್ಕ ಉತ್ತರ ನೀಡಿದ ಭಾರತ
ಭಾರತದ ತ್ರಿವರ್ಣಧ್ವಜ
Follow us
|

Updated on:Mar 20, 2023 | 11:29 AM

ಲಂಡನ್​ನಲ್ಲಿ ಭಾರತದ ರಾಷ್ಟ್ರಧ್ವಜವನ್ನು ಕೆಳಗಿಳಿಸಿದ್ದ ಖಲಿಸ್ತಾನಿ ಉಗ್ರರಿಗೆ ಭಾರತೀಯ ಹೈಕಮಿಷನ್ ತಕ್ಕ ಉತ್ತರ ನೀಡಿದೆ. ಭಾರತೀಯ ಹೈಕಮಿಷನ್ ಮೇಲೆ ಬೃಹತ್ ತ್ರಿವರ್ಣಧ್ವಜ ಹಾರಿಸಲಾಗಿದೆ. ಭಾರತೀಯ ಹೈಕಮಿಷನ್ ಅಧಿಕಾರಿಯೊಬ್ಬರು ಖಲಿಸ್ತಾನಿ ಧ್ವಜವನ್ನು ಹಾರಿಸಲು ಯತ್ನಿಸುತ್ತಿದ್ದ ಯುವಕರಿಂದ ಧ್ವಜವನ್ನು ಕಿತ್ತುಕೊಂಡು ಅದನ್ನು ಎಸೆಯುವ ಧೈರ್ಯ ತೋರಿದ್ದರು. ಬಳಿಕ ಖಲಿಸ್ತಾನಿ ಉಗ್ರರಿಗೆ ಸರಿಯಾಗಿ ಪಾಠ ಕಲಿಸುವ ಸಲುವಾಗಿ ಹೈಕಮಿಷನ್ ಮೇಲೆ ಬೃಹತ್ ತ್ರಿವರ್ಣಧ್ವಜವನ್ನು ಹಾರಿಸಲಾಗಿದೆ. ಲಂಡನ್​ನಲ್ಲಿ ನಡೆದ ಘಟನೆ ಬಗ್ಗೆ ಬ್ರಿಟಿಷ್ ಹೈಕಮಿಷನ್ ಅವರನ್ನು ಕರೆಸಿ ಅಸಮಾಧಾನ ವ್ಯಕ್ತಪಡಿಸಿದೆ. ಭಾರತೀಯ ಹೈಕಮಿಷನ್ ಆವರಣದಲ್ಲಿ ಘಟನೆ ನಡೆದಾಗ ಭದ್ರತಾ ಸಿಬ್ಬಂದಿ ಅಲ್ಲಿರಲಿಲ್ಲ.

ಈ ಬಗ್ಗೆ ಬ್ರಿಟಿಷ್ ಹೈಕಮಿಷನರ್ ಅವರಿಂದ ವಿವರಣೆ ಕೇಳಲಾಗಿದೆ. ಇದು ವಿಯೆನ್ನಾ ಒಪ್ಪಂದದ ಉಲ್ಲಂಘನೆಯೂ ಆಗಿದೆ ಎಂದು ಸರ್ಕಾರ ಹೇಳಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರ ಬ್ರಿಟಿಷ್ ಹೈಕಮಿಷನರ್ ಅವರನ್ನು ಒತ್ತಾಯಿಸಿದೆ. ಭದ್ರತೆ ಬಗ್ಗೆ ವರದಿ ಕೇಳಲಾಗಿದೆ. ಅಮೃತ್​ ಪಾಲ್​ ಸಿಂಗ್ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಖಲಿಸ್ತಾನಿ ಉಗ್ರರು ಪ್ರತಿಭಟನೆ ನಡೆಸಿದ್ದರು.

ಮತ್ತಷ್ಟು ಓದಿ:ಲಂಡನ್​ನಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನ, ಭಾರತೀಯ ಹೈಕಮಿಷನ್ ಕಚೇರಿಯಲ್ಲಿ ಖಲಿಸ್ತಾನಿ ಉಗ್ರರ ಗದ್ದಲ 

ಲಂಡನ್​ನಲ್ಲಿರುವ ಹೈಕಮಿಷನ್​ನಲ್ಲಿ ಖಲಿಸ್ತಾನ ಪರ ಘೋಷಣೆ ಕೂಗಿದ್ದ ಜನರು ಗುಂಪು ಭಾರತೀಯ ಹೈಕಮಿಷನ್​ನಲ್ಲಿದ್ದ ಭಾರತೀಯ ಧ್ವಜವನ್ನು ಕೆಳಗಿಳಿಸಿತ್ತು. ಭಾರತದಲ್ಲಿನ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಖಲಿಸ್ತಾನ ಪರ ಗುಂಪಿನ ಕ್ರಮವನ್ನು ಖಂಡಿಸಿದ್ದು, ನಾನು ಕೂಡ ಈ ಕೃತ್ಯವನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

ಲಂಡನ್​ನಲ್ಲಿರುವ ಭಾರತೀಯ ಹೈಕಮಿಷನ್ ವಿರುದ್ಧ ಪ್ರತ್ಯೇಕವಾದಿ ಮತ್ತು ಉಗ್ರ ಹಿನ್ನೆಲೆ ಉಳ್ಳವರು ಹಿಂದಿನ ದಿನ ಕೈಗೊಂಡ ಕ್ರಮಗಳಿಗೆ ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:29 am, Mon, 20 March 23

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್