AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾತುಕತೆಗೆ ನಾವು ಬರೋದಿಲ್ಲ..’-ಮತ್ತೆ ಜಮ್ಮುಕಾಶ್ಮೀರದ ಬಗ್ಗೆ ಅಲವತ್ತುಕೊಂಡ ಪಾಕಿಸ್ತಾನ ಪ್ರಧಾನಿ

ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಶಾಹ್ ಮಹಮ್ಮೂದ್​ ಖುರೇಷಿ ಕೂಡ ಇತ್ತೀಚೆಗೆ ಇದನ್ನೇ ಉಚ್ಛರಿಸಿದ್ದರು. 2019ರಲ್ಲಿ ಜಮ್ಮುಕಾಶ್ಮೀರದಿಂದ ತೆಗೆಯಲಾದ ಆರ್ಟಿಕಲ್​ 370ನ್ನು ಪುನಃಸ್ಥಾಪಿಸಿದರೆ ಮಾತ್ರ ನಾವು ಭಾರತದೊಟ್ಟಿಗೆ ಮಾತುಕತೆ ನಡೆಸುತ್ತೇವೆ ಎಂದಿದ್ದರು.

‘ಮಾತುಕತೆಗೆ ನಾವು ಬರೋದಿಲ್ಲ..’-ಮತ್ತೆ ಜಮ್ಮುಕಾಶ್ಮೀರದ ಬಗ್ಗೆ ಅಲವತ್ತುಕೊಂಡ ಪಾಕಿಸ್ತಾನ ಪ್ರಧಾನಿ
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್​
Lakshmi Hegde
|

Updated on: May 11, 2021 | 11:14 PM

Share

ಇಸ್ಲಮಾಬಾದ್​: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್​ ಭಾರತದ ವಿರುದ್ಧ ಮತ್ತೊಮ್ಮೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಮ್ಮು-ಕಾಶ್ಮೀರದಿಂದ ರದ್ದುಗೊಳಿಸಲಾದ ಆರ್ಟಿಕಲ್ 370ನ್ನು ವಾಪಸ್​ ಹೇರುವವರೆಗೆ ನಾವು ಯಾವುದೇ ವಿಚಾರದಲ್ಲೂ ಭಾರತದೊಂದಿಗೆ ಮಾತುಕತೆಗೆ ಬರುವುದಿಲ್ಲ ಎಂದು ಹೇಳಿದ್ದಾರೆ.

2019ರ ಆಗಸ್ಟ್​ 5ರಂದು ಭಾರತ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದೆ. ಈ ನಿರ್ಧಾರವನ್ನು ಅದು ಹಿಂಪಡೆಯಬೇಕು. ಅಲ್ಲಿಯವರೆಗೆ ಪಾಕಿಸ್ತಾನ ಭಾರತದೊಂದಿಗೆ ಮಾತುಕತೆಗೆ ಸಿದ್ಧವಾಗುವುದಿಲ್ಲ ಎಂದು ಆ ದೇಶದ ನಾಗರಿಕರನ್ನು ಉದ್ದೇಶಿಸಿ ಮಾತನಾಡುವಾಗ ಹೇಳಿದ್ದಾರೆ. ವಿಶ್ವಸಂಸ್ಥೆಯ ಅಜೆಂಡಾದಲ್ಲಿ ಉಲ್ಲೇಖವಾಗಿರುವಂತೆ ಜಮ್ಮು-ಕಾಶ್ಮೀರ ಎಂದಿಗೂ ಭಾರತದ ಆಂತರಿಕ ಸಮಸ್ಯೆಯಾಗಲು ಸಾಧ್ಯವಿಲ್ಲ. ಹಲವು ಭದ್ರತಾ ಮಂಡಳಿಯ ನಿರ್ಣಯಗಳನ್ನು ಒಳಗೊಂಡಿದೆ ಎಂದೂ ಇಮ್ರಾನ್ ಖಾನ್ ಉಲ್ಲೇಖಿಸಿದ್ದಾರೆ.

ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಶಾಹ್ ಮಹಮ್ಮೂದ್​ ಖುರೇಷಿ ಕೂಡ ಇತ್ತೀಚೆಗೆ ಇದನ್ನೇ ಉಚ್ಛರಿಸಿದ್ದರು. 2019ರಲ್ಲಿ ಜಮ್ಮುಕಾಶ್ಮೀರದಿಂದ ತೆಗೆಯಲಾದ ಆರ್ಟಿಕಲ್​ 370ನ್ನು ಪುನಃಸ್ಥಾಪಿಸಿದರೆ ಮಾತ್ರ ನಾವು ಭಾರತದೊಟ್ಟಿಗೆ ಮಾತುಕತೆ ನಡೆಸುತ್ತೇವೆ. ಉಳಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಚರ್ಚೆಗೆ ಸಿದ್ಧರಾಗುತ್ತೇವೆ ಎಂದಿದ್ದರು.

ಇದನ್ನೂ ಓದಿ: ಚೀನಾ ಆಪ್ ಮೂಲಕ ಸಾರ್ವಜನಿಕರಿಗೆ ವಂಚನೆ ಪ್ರಕರಣ; 76.67 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ

ಕರ್ನಾಟಕದಲ್ಲಿ ಈವರೆಗೆ ಎಷ್ಟು ಜನರಿಗೆ ಲಸಿಕೆ ಹಾಕಲಾಗಿದೆ ಎಂಬ ಮಾಹಿತಿ ಹಂಚಿಕೊಂಡ ಸಚಿವ ಡಾ.ಸುಧಾಕರ್

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು