AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ S-500 ವ್ಯವಸ್ಥೆ ಖರೀದಿಸಲು ಶ್ರಮಿಸಬೇಕು; ಪಾಟ್ನಾ ಮೂಲದ ರಷ್ಯಾದ ಶಾಸಕ ಅಭಯ್ ಸಿಂಗ್

ರಷ್ಯನ್, ಇಂಗ್ಲಿಷ್, ಹಿಂದಿ ಮಾತನಾಡುವ ಅಭಯ್ ಕುಮಾರ್ ಸಿಂಗ್, 1991ರಲ್ಲಿ ಕುರ್ಸ್ಕ್ ಸ್ಟೇಟ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ವೈದ್ಯಕೀಯ ಅಧ್ಯಯನ ಮಾಡಲು ರಷ್ಯಾಕ್ಕೆ ತೆರಳಿದರು. 2015ರಲ್ಲಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಯುನೈಟೆಡ್ ರಷ್ಯಾ ಪಕ್ಷವನ್ನು ಸೇರಿದರು. 2018ರಲ್ಲಿ ಕುರ್ಸ್ಕ್‌ನಲ್ಲಿ ಪ್ರಾಂತೀಯ ಚುನಾವಣೆಯಲ್ಲಿ ಗೆದ್ದರು. ಈ ಮೂಲಕ ರಷ್ಯಾದ ಮೊದಲ ಭಾರತೀಯ ಮೂಲದ ಶಾಸಕರಾದರು. ಅವರು 2022ರಲ್ಲಿ ಮರು ಆಯ್ಕೆಯಾದರು.

ಭಾರತ S-500 ವ್ಯವಸ್ಥೆ ಖರೀದಿಸಲು ಶ್ರಮಿಸಬೇಕು; ಪಾಟ್ನಾ ಮೂಲದ ರಷ್ಯಾದ ಶಾಸಕ ಅಭಯ್ ಸಿಂಗ್
Abhay Kumar Singh
ಸುಷ್ಮಾ ಚಕ್ರೆ
|

Updated on: Dec 04, 2025 | 3:23 PM

Share

ನವದೆಹಲಿ, ಡಿಸೆಂಬರ್ 4: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russia President Putin) ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ. ಇದರ ನಡುವೆ, ಬಿಹಾರದ ಪಾಟ್ನಾದಲ್ಲಿ ಜನಿಸಿದ ರಷ್ಯಾದ ಶಾಸಕ ಅಭಯ್ ಸಿಂಗ್ ಅವರು ಭಾರತಕ್ಕೆ ಮನವಿ ಮಾಡಿದ್ದಾರೆ. ಭಾರತವು S-500 ರಕ್ಷಣಾ ವ್ಯವಸ್ಥೆಗೆ ಒತ್ತಾಯಿಸಬೇಕೆಂದು ಅವರು ಹೇಳಿದ್ದಾರೆ. ಆಪರೇಷನ್ ಸಿಂಧೂರ್ ಸಮಯದಲ್ಲಿ S-400 ವ್ಯವಸ್ಥೆಯು ಪ್ರಮುಖ ಪಾತ್ರ ವಹಿಸಿದೆ.

ಅಕ್ಟೋಬರ್ 2018ರಲ್ಲಿ ಭಾರತವು S-400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯ 5 ಘಟಕಗಳನ್ನು ಖರೀದಿಸಲು ರಷ್ಯಾದೊಂದಿಗೆ 5 ಬಿಲಿಯನ್ US ಡಾಲರ್ ಒಪ್ಪಂದಕ್ಕೆ ಸಹಿ ಹಾಕಿತು. ಈ ಬಗ್ಗೆ ಮಾತನಾಡಿದ ಅಭಯ್ ಸಿಂಗ್ ಅವರು “S-400 ಉತ್ತಮ ಕ್ಷಿಪಣಿ ವ್ಯವಸ್ಥೆಯಾಗಿದೆ. ಆದರೆ S-500 ಇತ್ತೀಚಿನ ತಂತ್ರಜ್ಞಾನವಾಗಿದ್ದು, ಇದನ್ನು ರಷ್ಯಾದಲ್ಲಿ ಮಾತ್ರ ಬಳಸಲಾಗುತ್ತದೆ. ರಷ್ಯಾ ಅದನ್ನು ಬೇರೆ ಯಾವುದೇ ದೇಶಕ್ಕೆ ನೀಡುತ್ತಿಲ್ಲ. ರಷ್ಯಾ ಅದನ್ನು ಭಾರತಕ್ಕೆ ನೀಡಲು ನಿರ್ಧರಿಸಿದರೆ, ಭಾರತವು ಅದನ್ನು ಸ್ವಾಧೀನಪಡಿಸಿಕೊಳ್ಳುವ ಮೊದಲ ದೇಶವಾಗಿರುತ್ತದೆ. ಚೀನಾ ಕೂಡ ಈ ವ್ಯವಸ್ಥೆಯನ್ನು ಹೊಂದಿಲ್ಲ. ಭಾರತವು S-500 ಕ್ಷಿಪಣಿ ವ್ಯವಸ್ಥೆಯನ್ನು ಸ್ವಾಧೀನಪಡಿಸಿಕೊಳ್ಳುವತ್ತ ಕೆಲಸ ಮಾಡಬೇಕು ಎಂದು ನನಗೆ ಅನಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ ಹಿನ್ನೆಲೆ ದೆಹಲಿಯಲ್ಲಿ ಕಟ್ಟೆಚ್ಚರ

“ಇದು ಭಾರತಕ್ಕೆ ಒಂದು ಪ್ರಮುಖ ಸಾಧನೆಯಾಗಲಿದೆ. ಸುಖೋಯ್-57 ಕೂಡ ತುಂಬಾ ಉತ್ತಮವಾಗಿದೆ” ಎಂದು ಅವರು ಹೇಳಿದ್ದಾರೆ. ಅಭಯ್ ಸಿಂಗ್ ರಷ್ಯಾದ ಅಧ್ಯಕ್ಷ ಪುಟಿನ್ ಅವರ ಪಕ್ಷದಿಂದ ಬಂದವರಾಗಿದ್ದು, ಉಕ್ರೇನ್‌ನ ಗಡಿಯಲ್ಲಿರುವ ಕುರ್ಸ್ಕ್ ಪ್ರದೇಶವನ್ನು ಪ್ರತಿನಿಧಿಸುತ್ತಾರೆ.

“ರಷ್ಯಾ ಅಧ್ಯಕ್ಷರ ಈ ಭೇಟಿ ಬಹಳ ಮುಖ್ಯವಾಗಿದೆ. ಏಕೆಂದರೆ, ಪುಟಿನ್ ಕಳೆದ 4 ವರ್ಷಗಳಿಂದ ಭಾರತಕ್ಕೆ ಭೇಟಿ ನೀಡಿಲ್ಲ. ಈ ಭೇಟಿ ಎರಡೂ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಗೆ ತುಂಬಾ ಒಳ್ಳೆಯದು ಎಂದು ನಾನು ಭಾವಿಸುತ್ತೇನೆ” ಎಂದು ಅಭಯ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ರಷ್ಯಾದಿಂದ ತೈಲ ಖರೀದಿ ಕಡಿಮೆ ಮಾಡುತ್ತೆ ಭಾರತ, ಪ್ರಧಾನಿ ಮೋದಿಯಿಂದ ಭರವಸೆ ಸಿಕ್ಕಿದೆ ಎಂದ ಟ್ರಂಪ್

ಅಭಯ್ ಸಿಂಗ್ 1991ರಲ್ಲಿ ವೈದ್ಯಕೀಯ ಅಧ್ಯಯನಕ್ಕಾಗಿ ಪಾಟ್ನಾದಿಂದ ಸೋವಿಯತ್ ಒಕ್ಕೂಟಕ್ಕೆ ಹೋದರು. ಅವರು ಪಾಟ್ನಾದ ಲೊಯೊಲಾ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. ನಂತರ ಅವರು ಕುರ್ಸ್ಕ್‌ಗೆ ತೆರಳಿದರು. ಕುರ್ಸ್ಕ್ ರಾಜ್ಯ ವೈದ್ಯಕೀಯ ವಿಶ್ವವಿದ್ಯಾಲಯದಿಂದ ಪದವಿ ಪಡೆದ ನಂತರ, ಅವರು ವೈದ್ಯರಾಗಿ ಅಭ್ಯಾಸ ಮಾಡಲು ಪಾಟ್ನಾಕ್ಕೆ ಮರಳಿದರು. ಅವರಿಗೆ ಇಲ್ಲಿ ಉತ್ತಮ ಅವಕಾಶಗಳು ಸಿಗದ ಹಿನ್ನೆಲೆಯಲ್ಲಿ ಅವರು ಕುರ್ಸ್ಕ್‌ಗೆ ಮರಳಿ ಔಷಧೀಯ ವ್ಯವಹಾರವನ್ನು ಪ್ರವೇಶಿಸಲು ನಿರ್ಧರಿಸಿದರು. ನಂತರ ಅವರು ರಷ್ಯಾದಲ್ಲಿ ರಿಯಲ್ ಎಸ್ಟೇಟ್ ವಲಯದಲ್ಲಿಯೂ ತೊಡಗಿಸಿಕೊಂಡರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್