ಅಫ್ಘಾನಿಸ್ತಾನದಿಂದ ಭಾರತೀಯರನ್ನು ಕರೆತರಲು ಕಾಬೂಲ್​ನಲ್ಲಿ ಲ್ಯಾಂಡ್ ಆಯ್ತು ಭಾರತೀಯ ವಾಯುಪಡೆಯ ದೈತ್ಯ ಸಿ-17 ವಿಮಾನ

Indian Air Force: ತಾಲಿಬಾನ್ ವಶಕ್ಕೆ ಸಿಲುಕಿರುವ ಅಫ್ಘಾನಿಸ್ತಾನದಲ್ಲಿರುವ ಭಾರತೀಯರನ್ನು ಕರೆತರಲು ಭಾರತ ಸರ್ಕಾರವು ವಾಯುಪಡೆಯ ದೈತ್ಯ ಸಿ-17 ಗ್ಲೋಬ್​ ಮಾಸ್ಟರ್​ ವಿಮಾನವನ್ನು ಕಳುಹಿಸಿಕೊಟ್ಟಿದೆ.

ಅಫ್ಘಾನಿಸ್ತಾನದಿಂದ ಭಾರತೀಯರನ್ನು ಕರೆತರಲು ಕಾಬೂಲ್​ನಲ್ಲಿ ಲ್ಯಾಂಡ್ ಆಯ್ತು ಭಾರತೀಯ ವಾಯುಪಡೆಯ ದೈತ್ಯ ಸಿ-17 ವಿಮಾನ
ಭಾರತೀಯ ವಾಯುಪಡೆಯ ಸಿ-17 ಗ್ಲೋಬ್ ಮಾಸ್ಟರ್ ವಿಮಾನ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 16, 2021 | 7:09 PM

ಕಾಬೂಲ್: ತಾಲಿಬಾನ್ ವಶಕ್ಕೆ ಸಿಲುಕಿರುವ ಅಫ್ಘಾನಿಸ್ತಾನದಲ್ಲಿರುವ ಭಾರತೀಯರನ್ನು ಕರೆತರಲು ಭಾರತ ಸರ್ಕಾರವು ವಾಯುಪಡೆಯ ದೈತ್ಯ ಸಿ-17 ಗ್ಲೋಬ್​ ಮಾಸ್ಟರ್​ ವಿಮಾನವನ್ನು ಕಳುಹಿಸಿಕೊಟ್ಟಿದೆ. ವಿಮಾನವು ಸೋಮವಾರ ಸಂಜೆ ಕಾಬೂಲ್​ನಲ್ಲಿ ಲ್ಯಾಂಡ್​ ಆಗಿದ್ದು, 500ಕ್ಕೂ ಹೆಚ್ಚು ಭಾರತೀಯರನ್ನು ಶೀಘ್ರದಲ್ಲಿಯೇ ಸ್ವದೇಶಕ್ಕೆ ಕರೆತರುವ ಸಾಧ್ಯತೆಯಿದೆ.

ಅಮೆರಿಕ ವಾಯುಪಡೆಯು ಭಾನುವಾರ 800ಕ್ಕೂ ಹೆಚ್ಚು ನಾಗರಿಕರನ್ನು ಇಂಥದ್ದೇ ಸಿ-17 ವಿಮಾನದ ಮೂಲಕ ಸ್ಥಳಾಂತರಿಸಿತ್ತು. ಭಾರತವು ತನ್ನ ಪ್ರಜೆಗಳನ್ನು ಸ್ವದೇಶಕ್ಕೆ ಕರೆತರಲು ಸಿ-17 ವಿಮಾನವನ್ನೇ ಕಳುಹಿಸಿಕೊಟ್ಟಿದೆ. ವಿಮಾನ ನಿಲ್ದಾಣದ ಸಮೀಪಕ್ಕೆ ಬಂದಿರುವ 500ಕ್ಕೂ ಹೆಚ್ಚು ಭಾರತೀಯ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಯನ್ನು ಸ್ವದೇಶಕ್ಕೆ ಏರ್​ಲಿಫ್ಟ್​ ಮಾಡಲಿದೆ.

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಗೊಂದಲದ ವಾತಾವರಣ ಮುಂದುವರಿದಿದ್ದ ಕಾರಣ ಸೋಮವಾರ ಕಜಕಿಸ್ತಾನದಲ್ಲಿ ವಾಯುಸೇನೆಯ ವಿಮಾನ ಲ್ಯಾಂಡ್ ಆಗಿತ್ತು. ಅಮೆರಿಕದ ಭದ್ರತಾ ಸಿಬ್ಬಂದಿ ವಿಮಾನ ನಿಲ್ದಾಣವನ್ನು ತಮ್ಮ ಸುಪರ್ದಿಗೆ ಪಡೆದುಕೊಂಡ ನಂತರ ಭಾರತದ ವಿಮಾನಕ್ಕೆ ಲ್ಯಾಂಡ್ ಆಗಲು ಅವಕಾಶ ಕಲ್ಪಿಸಲಾಯಿತು.

ಅಫ್ಘಾನಿಸ್ತಾನದ ಇತ್ತೀಚಿನ ವಿದ್ಯಮಾನಗಳು ಮತ್ತು ಅದಕ್ಕೆ ಭಾರತದ ಪ್ರತಿಕ್ರಿಯೆ ಹೇಗಿರಬೇಕು ಎಂಬ ಬಗ್ಗೆ ಚರ್ಚಿಸಲು ದೆಹಲಿಯಲ್ಲಿ ವಿದೇಶಾಂಗ ವ್ಯವಹಾರ ಮತ್ತು ರಕ್ಷಣಾ ಇಲಾಖೆಯ ಸಚಿವರು ಮತ್ತು ಉನ್ನತ ಅಧಿಕಾರಿಗಳು ಸಭೆ ನಡೆಯುವ ನಿರೀಕ್ಷೆಯಿದೆ. ಅಫ್ಘಾನಿಸ್ತಾನದಲ್ಲಿರುವ ಎಲ್ಲ ಸಿಬ್ಬಂದಿಯನ್ನು ಸ್ಥಳಾಂತರಿಸಬೇಕೆ ಅಥವಾ ಒಂದಿಷ್ಟು ಮಂದಿಯನ್ನು ಉಳಿಸಿ ತಾಲಿಬಾನ್ ಆಡಳಿತದೊಂದಿಗೆ ಸಂಬಂಧ ಸ್ಥಾಪನೆಗೆ ಯತ್ನಿಸಬೇಕೆ ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

ಕಾಬೂಲ್​ ನಗರದ ವಿವಿಧೆಡೆ ಸಿಲುಕಿರುವ ಭಾರತೀಯ ಪ್ರಜೆಗಳನ್ನು ವಿಮಾನ ನಿಲ್ದಾಣಕ್ಕೆ ತಲುಪಿಸಲೆಂದು ಅಫ್ಘಾನಿಸ್ತಾನದಲ್ಲಿರುವ ಭಾರತೀಯ ಅಧಿಕಾರಿಗಳು ಸ್ಥಳೀಯ ಆಡಳಿತದೊಂದಿಗೆ ಚರ್ಚಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ವಿಮಾನ ನಿಲ್ದಾಣದ ಭದ್ರತೆಗಾಗಿ ಅಮೆರಿಕ ಕನಿಷ್ಠ 6 ಸಾವಿರ ಯೋಧರನ್ನು ನಿಯೋಜಿಸುವ ಸಾಧ್ಯತೆಯಿದೆ.

ಅಮೆರಿಕರನ್ನು ನಿನ್ನೆ ಸ್ವದೇಶಕ್ಕೆ ಕರೆದೊಯ್ದ ಸಿ-17 ಗ್ಲೋಬ್​ಮಾಸ್ಟರ್​ ಸರಕು ಸಾಗಣೆ ವಿಮಾನಕ್ಕೆ 70 ಟನ್ ಭಾರ ಹೊರುವ ಸಾಮರ್ಥ್ಯವಿದೆ. ಈ ಲೆಕ್ಕಾಚಾರದಲ್ಲಿ ಸರಾಸರಿ 90 ಕೆಜಿ ತೂಕ ಇರುವ 800 ಮಂದಿಯನ್ನು ಈ ವಿಮಾನದ ಮೂಲಕ ಕರೆತರಲು ಸಾಧ್ಯವಿದೆ. ಆದರೆ ಮನುಷ್ಯರು ಸರಕುಗಳಲ್ಲವಲ್ಲ. ಒಬ್ಬರಿಂದ ಮತ್ತೊಬ್ಬರಿಗೆ ಸ್ಥಳಾವಕಾಶ ಬೇಕಾಗುತ್ತದೆ. ಸಾಮಾನ್ಯ ಸಂದರ್ಭಗಳಲ್ಲಿ 134 ಯೋಧರನ್ನು ಒಂದು ಬಾರಿಗೆ ಅವರ ಉಪಕರಣಗಳ ಸಹಿತ ಸಿ-17 ಸ್ಥಳಾಂತರಿಸುತ್ತದೆ. ಆದರೆ ಭಾನುವಾರ ಅಮೆರಿಕ ಒಂದೇ ಬಾರಿಗೆ 800 ಮಂದಿಯನ್ನು ಈ ವಿಮಾನದ ಮೂಲಕ ಸ್ಥಳಾಂತರಿಸಿದ್ದು ಈವರೆಗಿನ ಗರಿಷ್ಠ ಏರ್​ಲಿಫ್ಟ್​ ದಾಖಲೆಯಾಗಿದೆ.

(Indian Air Force C-17 Plane Landed in Kabul Airport to Air lift Indians)

ಇದನ್ನೂ ಓದಿ: ಮಹಿಳೆಯರಿಗೆ ಸ್ವಾತಂತ್ರ್ಯ ಇರುತ್ತೆ ಎನ್ನುತ್ತಿದೆ ತಾಲಿಬಾನ್; ನಂಬುತ್ತಿಲ್ಲ ಅಫ್ಘಾನಿಸ್ತಾನದ ಸ್ತ್ರೀಯರು, ಅಮೆರಿಕ ಬಗ್ಗೆ ಮಡುಗಟ್ಟಿದೆ ಅಕ್ರೋಶ

ಇದನ್ನೂ ಓದಿ: Impact on India: ತಾಲಿಬಾನ್ ವಶಕ್ಕೆ ಅಫ್ಘಾನಿಸ್ತಾನ, ಭಾರತದ ಭದ್ರತೆಗೆ ಹಲವು ಆತಂಕ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ