ಶಾಲೆಗೆ ಸೇರಿಸುವುದಾಗಿ ಬಾಲಕನನ್ನು ಕರೆತಂದು ಜೀತಕ್ಕಿಟ್ಟ ದಂಪತಿಗೆ 11 ವರ್ಷ ಜೈಲು, 1.8 ಕೋಟಿ ರೂ. ದಂಡ

ಭಾರತದಿಂದ ಬಾಲಕನನ್ನು ಅಮೆರಿಕಕ್ಕೆ ಕರೆತಂದು 3 ವರ್ಷಗಳ ಕಾಲ ಜೀತಕ್ಕಿಟ್ಟಿಕೊಂಡಿದ್ದ ದಂಪತಿಗೆ ಅಮೆರಿಕ ನ್ಯಾಯಾಲಯ 11 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ದಂಪತಿ ತಮ್ಮದೇ ಸಂಬಂಧಿಯ ಮಗನನ್ನು ಕರೆತಂದು ಪೆಟ್ರೋಲ್​ ಬಂಕ್​ನಲ್ಲಿ ಕೆಲಸಕ್ಕಿಟ್ಟಿದ್ದರು.

ಶಾಲೆಗೆ ಸೇರಿಸುವುದಾಗಿ ಬಾಲಕನನ್ನು ಕರೆತಂದು ಜೀತಕ್ಕಿಟ್ಟ ದಂಪತಿಗೆ 11 ವರ್ಷ ಜೈಲು, 1.8 ಕೋಟಿ ರೂ. ದಂಡ
ದಂಪತಿ
Follow us
|

Updated on: Jun 26, 2024 | 12:20 PM

ಶಾಲೆಗೆ ಸೇರಿಸಲು ಸಹಾಯ ಮಾಡುವುದಾಗಿ ಹೇಳಿ ಭಾರತದಿಂದ ಅಮೆರಿಕಕ್ಕೆ ಬಾಲಕನೊಬ್ಬನನ್ನು ಕರೆತಂದು ಜೀತಕ್ಕಿಟ್ಟಿದ್ದ ದಂಪತಿಗೆ ಅಮೆರಿಕ ನ್ಯಾಯಾಲಯವು 11 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಷ್ಟೇ ಅಲ್ಲದೆ ಬಾಲಕನಿಗೆ 1.8 ಕೋಟಿ ರೂ. ಪರಿಹಾರವನ್ನು ನೀಡುವಂತೆ ನ್ಯಾಯಾಲಯ ಸೂಚಿಸಿದೆ.

ಈ ದಂಪತಿ ತಮ್ಮದೇ ಸಂಬಂಧಿಯ ಮಗನನ್ನು ಕರೆತಂದು ಪೆಟ್ರೋಲ್​ ಬಂಕ್​ನಲ್ಲಿ ಕೆಲಸಕ್ಕಿಟ್ಟಿದ್ದರು. ಕಳೆದ ಮೂರು ವರ್ಷಗಳಿಂದ ಬಾಲಕ ಗ್ಯಾಸ್​ ಸ್ಟೇಷನ್​ನಲ್ಲಿ ಕೆಲಸ ಮಾಡುತ್ತಿದ್ದ.

31 ವರ್ಷ ಹರ್ಮನ್ ಪ್ರೀತ್ ಸಿಂಗ್​ಗೆ 11 ವರ್ಷಗಳ ಜೈಲು ಶಿಕ್ಷೆ ಹಾಗೂ 43 ವರ್ಷದ ಕುಲಬೀರ್​ ಕೌರ್​ಗೆ 7 ವರ್ಷಗಳ ಶಿಕ್ಷೆ ವಿಧಿಸಲಾಗಿದೆ. ಹಾಗೆಯೇ ಬಾಲಕನಿಗೆ 1.8 ಕೋಟಿ ರೂ. ಪರಿಹಾರ ನೀಡುವಂತೆ ತಿಳಿಸಲಾಗಿದೆ. ಬಾಲಕನಿಗೆ ಅಮೆರಿಕದಲ್ಲಿ ಒಳ್ಳೆಯ ಶಾಲೆಗೆ ಸೇರಿಸುವುದಾಗಿ ಕುಟುಂಬದವರನ್ನು ನಂಬಿಸಿ ಕರೆತಂದಿದ್ದಾರೆ.

ಮತ್ತಷ್ಟು ಓದಿ: ನ್ಯೂಜಿಲೆಂಡ್​: ತನ್ನ ಮೂವರು ಹೆಣ್ಣುಮಕ್ಕಳನ್ನು ಕೊಂದಿದ್ದ ಮಹಿಳೆಗೆ 18 ವರ್ಷಗಳ ಜೈಲು ಶಿಕ್ಷೆ

ಅಷ್ಟೇ ಅಲ್ಲದೆ ಅವರು ಬಾಲಕನ ವಲಸೆ ದಾಖಲೆಗಳನ್ನು ಕೂಡ ತಮ್ಮ ಬಳಿ ಇರಿಸಿಕೊಂಡಿದ್ದರು. ಹಾಗೆಯೇ ನಿನಗೆ ಹಣ ಬೇಕೆಂದರೆ ದಿನಕ್ಕೆ 12 ರಿಂದ 17 ಗಂಟೆಗಳ ಕಾಲ ಕೆಲಸ ಮಾಡಬೇಕೆಂದು ಹೇಳಿದ್ದರು. ಅಷ್ಟೇ ಅಲ್ಲದೆ ದೈಹಿಕವಾಗಿ ಮಾನಸಿಕವಾಗಿ ಕಷ್ಟ ಕೊಟ್ಟಿದ್ದರು.

ಪೆಟ್ರೋಲ್​ ಬಂಕ್​ನಲ್ಲಿ ಶುಚಿಗೊಳಿಸುವುದು, ಅಡುಗೆ ಮಾಡುವುದು, ಪೆಟ್ರೋಲ್​ ಬಂಕ್​ನ ದಾಖಲೆ ನಿರ್ವಹಣೆ ಸೇರಿದಂತೆ ಕೆಲವು ಕೆಲಸಗಳನ್ನು ಮಾಡಿಸುತ್ತಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ