AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗೆ ಸೇರಿಸುವುದಾಗಿ ಬಾಲಕನನ್ನು ಕರೆತಂದು ಜೀತಕ್ಕಿಟ್ಟ ದಂಪತಿಗೆ 11 ವರ್ಷ ಜೈಲು, 1.8 ಕೋಟಿ ರೂ. ದಂಡ

ಭಾರತದಿಂದ ಬಾಲಕನನ್ನು ಅಮೆರಿಕಕ್ಕೆ ಕರೆತಂದು 3 ವರ್ಷಗಳ ಕಾಲ ಜೀತಕ್ಕಿಟ್ಟಿಕೊಂಡಿದ್ದ ದಂಪತಿಗೆ ಅಮೆರಿಕ ನ್ಯಾಯಾಲಯ 11 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ದಂಪತಿ ತಮ್ಮದೇ ಸಂಬಂಧಿಯ ಮಗನನ್ನು ಕರೆತಂದು ಪೆಟ್ರೋಲ್​ ಬಂಕ್​ನಲ್ಲಿ ಕೆಲಸಕ್ಕಿಟ್ಟಿದ್ದರು.

ಶಾಲೆಗೆ ಸೇರಿಸುವುದಾಗಿ ಬಾಲಕನನ್ನು ಕರೆತಂದು ಜೀತಕ್ಕಿಟ್ಟ ದಂಪತಿಗೆ 11 ವರ್ಷ ಜೈಲು, 1.8 ಕೋಟಿ ರೂ. ದಂಡ
ದಂಪತಿ
ನಯನಾ ರಾಜೀವ್
|

Updated on: Jun 26, 2024 | 12:20 PM

Share

ಶಾಲೆಗೆ ಸೇರಿಸಲು ಸಹಾಯ ಮಾಡುವುದಾಗಿ ಹೇಳಿ ಭಾರತದಿಂದ ಅಮೆರಿಕಕ್ಕೆ ಬಾಲಕನೊಬ್ಬನನ್ನು ಕರೆತಂದು ಜೀತಕ್ಕಿಟ್ಟಿದ್ದ ದಂಪತಿಗೆ ಅಮೆರಿಕ ನ್ಯಾಯಾಲಯವು 11 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಷ್ಟೇ ಅಲ್ಲದೆ ಬಾಲಕನಿಗೆ 1.8 ಕೋಟಿ ರೂ. ಪರಿಹಾರವನ್ನು ನೀಡುವಂತೆ ನ್ಯಾಯಾಲಯ ಸೂಚಿಸಿದೆ.

ಈ ದಂಪತಿ ತಮ್ಮದೇ ಸಂಬಂಧಿಯ ಮಗನನ್ನು ಕರೆತಂದು ಪೆಟ್ರೋಲ್​ ಬಂಕ್​ನಲ್ಲಿ ಕೆಲಸಕ್ಕಿಟ್ಟಿದ್ದರು. ಕಳೆದ ಮೂರು ವರ್ಷಗಳಿಂದ ಬಾಲಕ ಗ್ಯಾಸ್​ ಸ್ಟೇಷನ್​ನಲ್ಲಿ ಕೆಲಸ ಮಾಡುತ್ತಿದ್ದ.

31 ವರ್ಷ ಹರ್ಮನ್ ಪ್ರೀತ್ ಸಿಂಗ್​ಗೆ 11 ವರ್ಷಗಳ ಜೈಲು ಶಿಕ್ಷೆ ಹಾಗೂ 43 ವರ್ಷದ ಕುಲಬೀರ್​ ಕೌರ್​ಗೆ 7 ವರ್ಷಗಳ ಶಿಕ್ಷೆ ವಿಧಿಸಲಾಗಿದೆ. ಹಾಗೆಯೇ ಬಾಲಕನಿಗೆ 1.8 ಕೋಟಿ ರೂ. ಪರಿಹಾರ ನೀಡುವಂತೆ ತಿಳಿಸಲಾಗಿದೆ. ಬಾಲಕನಿಗೆ ಅಮೆರಿಕದಲ್ಲಿ ಒಳ್ಳೆಯ ಶಾಲೆಗೆ ಸೇರಿಸುವುದಾಗಿ ಕುಟುಂಬದವರನ್ನು ನಂಬಿಸಿ ಕರೆತಂದಿದ್ದಾರೆ.

ಮತ್ತಷ್ಟು ಓದಿ: ನ್ಯೂಜಿಲೆಂಡ್​: ತನ್ನ ಮೂವರು ಹೆಣ್ಣುಮಕ್ಕಳನ್ನು ಕೊಂದಿದ್ದ ಮಹಿಳೆಗೆ 18 ವರ್ಷಗಳ ಜೈಲು ಶಿಕ್ಷೆ

ಅಷ್ಟೇ ಅಲ್ಲದೆ ಅವರು ಬಾಲಕನ ವಲಸೆ ದಾಖಲೆಗಳನ್ನು ಕೂಡ ತಮ್ಮ ಬಳಿ ಇರಿಸಿಕೊಂಡಿದ್ದರು. ಹಾಗೆಯೇ ನಿನಗೆ ಹಣ ಬೇಕೆಂದರೆ ದಿನಕ್ಕೆ 12 ರಿಂದ 17 ಗಂಟೆಗಳ ಕಾಲ ಕೆಲಸ ಮಾಡಬೇಕೆಂದು ಹೇಳಿದ್ದರು. ಅಷ್ಟೇ ಅಲ್ಲದೆ ದೈಹಿಕವಾಗಿ ಮಾನಸಿಕವಾಗಿ ಕಷ್ಟ ಕೊಟ್ಟಿದ್ದರು.

ಪೆಟ್ರೋಲ್​ ಬಂಕ್​ನಲ್ಲಿ ಶುಚಿಗೊಳಿಸುವುದು, ಅಡುಗೆ ಮಾಡುವುದು, ಪೆಟ್ರೋಲ್​ ಬಂಕ್​ನ ದಾಖಲೆ ನಿರ್ವಹಣೆ ಸೇರಿದಂತೆ ಕೆಲವು ಕೆಲಸಗಳನ್ನು ಮಾಡಿಸುತ್ತಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!