AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗೆ ಸೇರಿಸುವುದಾಗಿ ಬಾಲಕನನ್ನು ಕರೆತಂದು ಜೀತಕ್ಕಿಟ್ಟ ದಂಪತಿಗೆ 11 ವರ್ಷ ಜೈಲು, 1.8 ಕೋಟಿ ರೂ. ದಂಡ

ಭಾರತದಿಂದ ಬಾಲಕನನ್ನು ಅಮೆರಿಕಕ್ಕೆ ಕರೆತಂದು 3 ವರ್ಷಗಳ ಕಾಲ ಜೀತಕ್ಕಿಟ್ಟಿಕೊಂಡಿದ್ದ ದಂಪತಿಗೆ ಅಮೆರಿಕ ನ್ಯಾಯಾಲಯ 11 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ದಂಪತಿ ತಮ್ಮದೇ ಸಂಬಂಧಿಯ ಮಗನನ್ನು ಕರೆತಂದು ಪೆಟ್ರೋಲ್​ ಬಂಕ್​ನಲ್ಲಿ ಕೆಲಸಕ್ಕಿಟ್ಟಿದ್ದರು.

ಶಾಲೆಗೆ ಸೇರಿಸುವುದಾಗಿ ಬಾಲಕನನ್ನು ಕರೆತಂದು ಜೀತಕ್ಕಿಟ್ಟ ದಂಪತಿಗೆ 11 ವರ್ಷ ಜೈಲು, 1.8 ಕೋಟಿ ರೂ. ದಂಡ
ದಂಪತಿ
Follow us
ನಯನಾ ರಾಜೀವ್
|

Updated on: Jun 26, 2024 | 12:20 PM

ಶಾಲೆಗೆ ಸೇರಿಸಲು ಸಹಾಯ ಮಾಡುವುದಾಗಿ ಹೇಳಿ ಭಾರತದಿಂದ ಅಮೆರಿಕಕ್ಕೆ ಬಾಲಕನೊಬ್ಬನನ್ನು ಕರೆತಂದು ಜೀತಕ್ಕಿಟ್ಟಿದ್ದ ದಂಪತಿಗೆ ಅಮೆರಿಕ ನ್ಯಾಯಾಲಯವು 11 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಷ್ಟೇ ಅಲ್ಲದೆ ಬಾಲಕನಿಗೆ 1.8 ಕೋಟಿ ರೂ. ಪರಿಹಾರವನ್ನು ನೀಡುವಂತೆ ನ್ಯಾಯಾಲಯ ಸೂಚಿಸಿದೆ.

ಈ ದಂಪತಿ ತಮ್ಮದೇ ಸಂಬಂಧಿಯ ಮಗನನ್ನು ಕರೆತಂದು ಪೆಟ್ರೋಲ್​ ಬಂಕ್​ನಲ್ಲಿ ಕೆಲಸಕ್ಕಿಟ್ಟಿದ್ದರು. ಕಳೆದ ಮೂರು ವರ್ಷಗಳಿಂದ ಬಾಲಕ ಗ್ಯಾಸ್​ ಸ್ಟೇಷನ್​ನಲ್ಲಿ ಕೆಲಸ ಮಾಡುತ್ತಿದ್ದ.

31 ವರ್ಷ ಹರ್ಮನ್ ಪ್ರೀತ್ ಸಿಂಗ್​ಗೆ 11 ವರ್ಷಗಳ ಜೈಲು ಶಿಕ್ಷೆ ಹಾಗೂ 43 ವರ್ಷದ ಕುಲಬೀರ್​ ಕೌರ್​ಗೆ 7 ವರ್ಷಗಳ ಶಿಕ್ಷೆ ವಿಧಿಸಲಾಗಿದೆ. ಹಾಗೆಯೇ ಬಾಲಕನಿಗೆ 1.8 ಕೋಟಿ ರೂ. ಪರಿಹಾರ ನೀಡುವಂತೆ ತಿಳಿಸಲಾಗಿದೆ. ಬಾಲಕನಿಗೆ ಅಮೆರಿಕದಲ್ಲಿ ಒಳ್ಳೆಯ ಶಾಲೆಗೆ ಸೇರಿಸುವುದಾಗಿ ಕುಟುಂಬದವರನ್ನು ನಂಬಿಸಿ ಕರೆತಂದಿದ್ದಾರೆ.

ಮತ್ತಷ್ಟು ಓದಿ: ನ್ಯೂಜಿಲೆಂಡ್​: ತನ್ನ ಮೂವರು ಹೆಣ್ಣುಮಕ್ಕಳನ್ನು ಕೊಂದಿದ್ದ ಮಹಿಳೆಗೆ 18 ವರ್ಷಗಳ ಜೈಲು ಶಿಕ್ಷೆ

ಅಷ್ಟೇ ಅಲ್ಲದೆ ಅವರು ಬಾಲಕನ ವಲಸೆ ದಾಖಲೆಗಳನ್ನು ಕೂಡ ತಮ್ಮ ಬಳಿ ಇರಿಸಿಕೊಂಡಿದ್ದರು. ಹಾಗೆಯೇ ನಿನಗೆ ಹಣ ಬೇಕೆಂದರೆ ದಿನಕ್ಕೆ 12 ರಿಂದ 17 ಗಂಟೆಗಳ ಕಾಲ ಕೆಲಸ ಮಾಡಬೇಕೆಂದು ಹೇಳಿದ್ದರು. ಅಷ್ಟೇ ಅಲ್ಲದೆ ದೈಹಿಕವಾಗಿ ಮಾನಸಿಕವಾಗಿ ಕಷ್ಟ ಕೊಟ್ಟಿದ್ದರು.

ಪೆಟ್ರೋಲ್​ ಬಂಕ್​ನಲ್ಲಿ ಶುಚಿಗೊಳಿಸುವುದು, ಅಡುಗೆ ಮಾಡುವುದು, ಪೆಟ್ರೋಲ್​ ಬಂಕ್​ನ ದಾಖಲೆ ನಿರ್ವಹಣೆ ಸೇರಿದಂತೆ ಕೆಲವು ಕೆಲಸಗಳನ್ನು ಮಾಡಿಸುತ್ತಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್