AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗೆ ಸೇರಿಸುವುದಾಗಿ ಬಾಲಕನನ್ನು ಕರೆತಂದು ಜೀತಕ್ಕಿಟ್ಟ ದಂಪತಿಗೆ 11 ವರ್ಷ ಜೈಲು, 1.8 ಕೋಟಿ ರೂ. ದಂಡ

ಭಾರತದಿಂದ ಬಾಲಕನನ್ನು ಅಮೆರಿಕಕ್ಕೆ ಕರೆತಂದು 3 ವರ್ಷಗಳ ಕಾಲ ಜೀತಕ್ಕಿಟ್ಟಿಕೊಂಡಿದ್ದ ದಂಪತಿಗೆ ಅಮೆರಿಕ ನ್ಯಾಯಾಲಯ 11 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ದಂಪತಿ ತಮ್ಮದೇ ಸಂಬಂಧಿಯ ಮಗನನ್ನು ಕರೆತಂದು ಪೆಟ್ರೋಲ್​ ಬಂಕ್​ನಲ್ಲಿ ಕೆಲಸಕ್ಕಿಟ್ಟಿದ್ದರು.

ಶಾಲೆಗೆ ಸೇರಿಸುವುದಾಗಿ ಬಾಲಕನನ್ನು ಕರೆತಂದು ಜೀತಕ್ಕಿಟ್ಟ ದಂಪತಿಗೆ 11 ವರ್ಷ ಜೈಲು, 1.8 ಕೋಟಿ ರೂ. ದಂಡ
ದಂಪತಿ
ನಯನಾ ರಾಜೀವ್
|

Updated on: Jun 26, 2024 | 12:20 PM

Share

ಶಾಲೆಗೆ ಸೇರಿಸಲು ಸಹಾಯ ಮಾಡುವುದಾಗಿ ಹೇಳಿ ಭಾರತದಿಂದ ಅಮೆರಿಕಕ್ಕೆ ಬಾಲಕನೊಬ್ಬನನ್ನು ಕರೆತಂದು ಜೀತಕ್ಕಿಟ್ಟಿದ್ದ ದಂಪತಿಗೆ ಅಮೆರಿಕ ನ್ಯಾಯಾಲಯವು 11 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಷ್ಟೇ ಅಲ್ಲದೆ ಬಾಲಕನಿಗೆ 1.8 ಕೋಟಿ ರೂ. ಪರಿಹಾರವನ್ನು ನೀಡುವಂತೆ ನ್ಯಾಯಾಲಯ ಸೂಚಿಸಿದೆ.

ಈ ದಂಪತಿ ತಮ್ಮದೇ ಸಂಬಂಧಿಯ ಮಗನನ್ನು ಕರೆತಂದು ಪೆಟ್ರೋಲ್​ ಬಂಕ್​ನಲ್ಲಿ ಕೆಲಸಕ್ಕಿಟ್ಟಿದ್ದರು. ಕಳೆದ ಮೂರು ವರ್ಷಗಳಿಂದ ಬಾಲಕ ಗ್ಯಾಸ್​ ಸ್ಟೇಷನ್​ನಲ್ಲಿ ಕೆಲಸ ಮಾಡುತ್ತಿದ್ದ.

31 ವರ್ಷ ಹರ್ಮನ್ ಪ್ರೀತ್ ಸಿಂಗ್​ಗೆ 11 ವರ್ಷಗಳ ಜೈಲು ಶಿಕ್ಷೆ ಹಾಗೂ 43 ವರ್ಷದ ಕುಲಬೀರ್​ ಕೌರ್​ಗೆ 7 ವರ್ಷಗಳ ಶಿಕ್ಷೆ ವಿಧಿಸಲಾಗಿದೆ. ಹಾಗೆಯೇ ಬಾಲಕನಿಗೆ 1.8 ಕೋಟಿ ರೂ. ಪರಿಹಾರ ನೀಡುವಂತೆ ತಿಳಿಸಲಾಗಿದೆ. ಬಾಲಕನಿಗೆ ಅಮೆರಿಕದಲ್ಲಿ ಒಳ್ಳೆಯ ಶಾಲೆಗೆ ಸೇರಿಸುವುದಾಗಿ ಕುಟುಂಬದವರನ್ನು ನಂಬಿಸಿ ಕರೆತಂದಿದ್ದಾರೆ.

ಮತ್ತಷ್ಟು ಓದಿ: ನ್ಯೂಜಿಲೆಂಡ್​: ತನ್ನ ಮೂವರು ಹೆಣ್ಣುಮಕ್ಕಳನ್ನು ಕೊಂದಿದ್ದ ಮಹಿಳೆಗೆ 18 ವರ್ಷಗಳ ಜೈಲು ಶಿಕ್ಷೆ

ಅಷ್ಟೇ ಅಲ್ಲದೆ ಅವರು ಬಾಲಕನ ವಲಸೆ ದಾಖಲೆಗಳನ್ನು ಕೂಡ ತಮ್ಮ ಬಳಿ ಇರಿಸಿಕೊಂಡಿದ್ದರು. ಹಾಗೆಯೇ ನಿನಗೆ ಹಣ ಬೇಕೆಂದರೆ ದಿನಕ್ಕೆ 12 ರಿಂದ 17 ಗಂಟೆಗಳ ಕಾಲ ಕೆಲಸ ಮಾಡಬೇಕೆಂದು ಹೇಳಿದ್ದರು. ಅಷ್ಟೇ ಅಲ್ಲದೆ ದೈಹಿಕವಾಗಿ ಮಾನಸಿಕವಾಗಿ ಕಷ್ಟ ಕೊಟ್ಟಿದ್ದರು.

ಪೆಟ್ರೋಲ್​ ಬಂಕ್​ನಲ್ಲಿ ಶುಚಿಗೊಳಿಸುವುದು, ಅಡುಗೆ ಮಾಡುವುದು, ಪೆಟ್ರೋಲ್​ ಬಂಕ್​ನ ದಾಖಲೆ ನಿರ್ವಹಣೆ ಸೇರಿದಂತೆ ಕೆಲವು ಕೆಲಸಗಳನ್ನು ಮಾಡಿಸುತ್ತಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ