AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಅಪ್ರಾಪ್ತ ಬಾಲಕಿ ಎದುರು ಹಸ್ತಮೈಥುನ: ಭಾರತ ಮೂಲದ ವೈದ್ಯನ ಬಂಧನ

ವಿಮಾನದಲ್ಲಿ ಅಪ್ರಾಪ್ತ ಬಾಲಕಿ ಎದುರು ಹಸ್ತಮೈಥುನ ಮಾಡಿಕೊಂಡ ಭಾರತ ಮೂಲದ ವೈದ್ಯನನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. 14 ವರ್ಷದ ಬಾಲಕಿ ಎದುರು ವಿಮಾನದಲ್ಲಿ ವೈದ್ಯ ಹಸ್ತಮೈಥುನ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ವಿಮಾನದಲ್ಲಿ ಅಪ್ರಾಪ್ತ ಬಾಲಕಿ ಎದುರು ಹಸ್ತಮೈಥುನ: ಭಾರತ ಮೂಲದ ವೈದ್ಯನ ಬಂಧನ
ವಿಮಾನ
Follow us
ನಯನಾ ರಾಜೀವ್
|

Updated on:Aug 13, 2023 | 9:13 AM

ವಿಮಾನದಲ್ಲಿ ಅಪ್ರಾಪ್ತ ಬಾಲಕಿ ಎದುರು ಹಸ್ತಮೈಥುನ ಮಾಡಿಕೊಂಡ ಭಾರತ ಮೂಲದ ವೈದ್ಯನನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. 14 ವರ್ಷದ ಬಾಲಕಿ ಎದುರು ವಿಮಾನದಲ್ಲಿ ವೈದ್ಯ ಹಸ್ತಮೈಥುನ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಯುನೈಟೆಡ್ ಸ್ಟೇಟ್ಸ್ ಅಟಾರ್ನಿ ಕಚೇರಿಯ ಪ್ರಕಾರ, ಕಳೆದ ವರ್ಷ ಮೇ ತಿಂಗಳಲ್ಲಿ ಹೊನೊಲುಲುವಿನಿಂದ ಬೋಸ್ಟನ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಡಾ. ಸುದೀಪ್ತ ಮೊಹಾಂತಿ ಎಂದು ಗುರುತಿಸಲಾದ ವೈದ್ಯರನ್ನು ಗುರುವಾರ ಬಂಧಿಸಲಾಯಿತು. ಪ್ರಕಾರ , ಬೋಸ್ಟನ್‌ನ ಬೆತ್ ಇಸ್ರೇಲ್ ಡೀಕಾನೆಸ್ ಮೆಡಿಕಲ್ ಸೆಂಟರ್‌ನಲ್ಲಿ ಪ್ರಾಥಮಿಕ ಚಿಕಿತ್ಸಾ ವೈದ್ಯ ಡಾ ಮೊಹಾಂತಿ ಅವರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.

ಅವರು 14 ವರ್ಷದ ಬಾಲಕಿ ಪಕ್ಕ ಕುಳಿತಿದ್ದರು, ಬೆಡ್​ಶೀಟ್​ನ್ನು ಹೊದ್ದುಕೊಂಡಿದ್ದರು, ಬಳಿಕ ಬೆಡ್​ಶೀಟ್​ ಕೆಳಗೆ ಬಿದ್ದಾಗ ಅವರು ಹಸ್ತಮೈಥುನ ಮಾಡಿಕೊಳ್ಳುತ್ತಿರುವುದು  ಬಾಲಕಿಗೆ ಗೊತ್ತಾಗಿದೆ ಆಕೆಗೆ ಹೇಸಿಗೆಯಾದಂತಾಗಿ ಬೇರೆ ಸೀಟಿನಲ್ಲಿ ಹೋಗಿ ಕೂತಿದ್ದಾಳೆ.

ಮತ್ತಷ್ಟು ಓದಿ: Video News: ದೆಹಲಿ ಮೆಟ್ರೋದಲ್ಲಿ ಹಸ್ತಮೈಥುನ ಮಾಡಿಕೊಂಡ ಯುವಕ, ತೀವ್ರ ಕಳವಳ ವ್ಯಕ್ತಪಡಿಸಿದ ಸ್ವಾತಿ ಮಲಿವಾಲ್

ಬೋಸ್ಟನ್‌ನಲ್ಲಿ ಇಳಿದ ನಂತರ, ಹುಡುಗಿ ತನ್ನ ಕುಟುಂಬಕ್ಕೆ ಘಟನೆಯ ಬಗ್ಗೆ ತಿಳಿಸಿದಳು. ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಡಾ ಮೊಹಾಂತಿ ಅವರು ತನಿಖೆಯ ಸಂದರ್ಭದಲ್ಲಿ ಆರೋಪಗಳನ್ನು ನಿರಾಕರಿಸಿದರು, ಘಟನೆಯ ಬಗ್ಗೆ ನನಗೆ ನೆನಪಿಲ್ಲ ಎಂದು ಹೇಳಿದರು.

ಡಾ ಮೊಹಾಂತಿ ಗುರುವಾರ ಫೆಡರಲ್ ನ್ಯಾಯಾಲಯಕ್ಕೆ ಹಾಜರಾದರು ಮತ್ತು ವಿಮಾನದಲ್ಲಿ ಹದಿಹರೆಯದ ಹುಡುಗಿಯ ಮುಂದೆ ಅಶ್ಲೀಲ ಕೃತ್ಯ ನಡೆಸಿದ ಆರೋಪ ಹೊರಿಸಲಾಯಿತು.

ಈ ಆರೋಪದಲ್ಲಿ 90 ದಿನಗಳ ಜೈಲು ಶಿಕ್ಷೆ, ಮತ್ತು 5,000 ಡಾಲರ್​ವರೆಗೆ ದಂಡವನ್ನು ಒಳಗೊಂಡಿರುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:10 am, Sun, 13 August 23

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ