AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಅಪ್ರಾಪ್ತ ಬಾಲಕಿ ಎದುರು ಹಸ್ತಮೈಥುನ: ಭಾರತ ಮೂಲದ ವೈದ್ಯನ ಬಂಧನ

ವಿಮಾನದಲ್ಲಿ ಅಪ್ರಾಪ್ತ ಬಾಲಕಿ ಎದುರು ಹಸ್ತಮೈಥುನ ಮಾಡಿಕೊಂಡ ಭಾರತ ಮೂಲದ ವೈದ್ಯನನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. 14 ವರ್ಷದ ಬಾಲಕಿ ಎದುರು ವಿಮಾನದಲ್ಲಿ ವೈದ್ಯ ಹಸ್ತಮೈಥುನ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ವಿಮಾನದಲ್ಲಿ ಅಪ್ರಾಪ್ತ ಬಾಲಕಿ ಎದುರು ಹಸ್ತಮೈಥುನ: ಭಾರತ ಮೂಲದ ವೈದ್ಯನ ಬಂಧನ
ವಿಮಾನ
ನಯನಾ ರಾಜೀವ್
|

Updated on:Aug 13, 2023 | 9:13 AM

Share

ವಿಮಾನದಲ್ಲಿ ಅಪ್ರಾಪ್ತ ಬಾಲಕಿ ಎದುರು ಹಸ್ತಮೈಥುನ ಮಾಡಿಕೊಂಡ ಭಾರತ ಮೂಲದ ವೈದ್ಯನನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. 14 ವರ್ಷದ ಬಾಲಕಿ ಎದುರು ವಿಮಾನದಲ್ಲಿ ವೈದ್ಯ ಹಸ್ತಮೈಥುನ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಯುನೈಟೆಡ್ ಸ್ಟೇಟ್ಸ್ ಅಟಾರ್ನಿ ಕಚೇರಿಯ ಪ್ರಕಾರ, ಕಳೆದ ವರ್ಷ ಮೇ ತಿಂಗಳಲ್ಲಿ ಹೊನೊಲುಲುವಿನಿಂದ ಬೋಸ್ಟನ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಡಾ. ಸುದೀಪ್ತ ಮೊಹಾಂತಿ ಎಂದು ಗುರುತಿಸಲಾದ ವೈದ್ಯರನ್ನು ಗುರುವಾರ ಬಂಧಿಸಲಾಯಿತು. ಪ್ರಕಾರ , ಬೋಸ್ಟನ್‌ನ ಬೆತ್ ಇಸ್ರೇಲ್ ಡೀಕಾನೆಸ್ ಮೆಡಿಕಲ್ ಸೆಂಟರ್‌ನಲ್ಲಿ ಪ್ರಾಥಮಿಕ ಚಿಕಿತ್ಸಾ ವೈದ್ಯ ಡಾ ಮೊಹಾಂತಿ ಅವರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.

ಅವರು 14 ವರ್ಷದ ಬಾಲಕಿ ಪಕ್ಕ ಕುಳಿತಿದ್ದರು, ಬೆಡ್​ಶೀಟ್​ನ್ನು ಹೊದ್ದುಕೊಂಡಿದ್ದರು, ಬಳಿಕ ಬೆಡ್​ಶೀಟ್​ ಕೆಳಗೆ ಬಿದ್ದಾಗ ಅವರು ಹಸ್ತಮೈಥುನ ಮಾಡಿಕೊಳ್ಳುತ್ತಿರುವುದು  ಬಾಲಕಿಗೆ ಗೊತ್ತಾಗಿದೆ ಆಕೆಗೆ ಹೇಸಿಗೆಯಾದಂತಾಗಿ ಬೇರೆ ಸೀಟಿನಲ್ಲಿ ಹೋಗಿ ಕೂತಿದ್ದಾಳೆ.

ಮತ್ತಷ್ಟು ಓದಿ: Video News: ದೆಹಲಿ ಮೆಟ್ರೋದಲ್ಲಿ ಹಸ್ತಮೈಥುನ ಮಾಡಿಕೊಂಡ ಯುವಕ, ತೀವ್ರ ಕಳವಳ ವ್ಯಕ್ತಪಡಿಸಿದ ಸ್ವಾತಿ ಮಲಿವಾಲ್

ಬೋಸ್ಟನ್‌ನಲ್ಲಿ ಇಳಿದ ನಂತರ, ಹುಡುಗಿ ತನ್ನ ಕುಟುಂಬಕ್ಕೆ ಘಟನೆಯ ಬಗ್ಗೆ ತಿಳಿಸಿದಳು. ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಡಾ ಮೊಹಾಂತಿ ಅವರು ತನಿಖೆಯ ಸಂದರ್ಭದಲ್ಲಿ ಆರೋಪಗಳನ್ನು ನಿರಾಕರಿಸಿದರು, ಘಟನೆಯ ಬಗ್ಗೆ ನನಗೆ ನೆನಪಿಲ್ಲ ಎಂದು ಹೇಳಿದರು.

ಡಾ ಮೊಹಾಂತಿ ಗುರುವಾರ ಫೆಡರಲ್ ನ್ಯಾಯಾಲಯಕ್ಕೆ ಹಾಜರಾದರು ಮತ್ತು ವಿಮಾನದಲ್ಲಿ ಹದಿಹರೆಯದ ಹುಡುಗಿಯ ಮುಂದೆ ಅಶ್ಲೀಲ ಕೃತ್ಯ ನಡೆಸಿದ ಆರೋಪ ಹೊರಿಸಲಾಯಿತು.

ಈ ಆರೋಪದಲ್ಲಿ 90 ದಿನಗಳ ಜೈಲು ಶಿಕ್ಷೆ, ಮತ್ತು 5,000 ಡಾಲರ್​ವರೆಗೆ ದಂಡವನ್ನು ಒಳಗೊಂಡಿರುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:10 am, Sun, 13 August 23

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್