AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಅಪ್ರಾಪ್ತ ಬಾಲಕಿ ಎದುರು ಹಸ್ತಮೈಥುನ: ಭಾರತ ಮೂಲದ ವೈದ್ಯನ ಬಂಧನ

ವಿಮಾನದಲ್ಲಿ ಅಪ್ರಾಪ್ತ ಬಾಲಕಿ ಎದುರು ಹಸ್ತಮೈಥುನ ಮಾಡಿಕೊಂಡ ಭಾರತ ಮೂಲದ ವೈದ್ಯನನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. 14 ವರ್ಷದ ಬಾಲಕಿ ಎದುರು ವಿಮಾನದಲ್ಲಿ ವೈದ್ಯ ಹಸ್ತಮೈಥುನ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ವಿಮಾನದಲ್ಲಿ ಅಪ್ರಾಪ್ತ ಬಾಲಕಿ ಎದುರು ಹಸ್ತಮೈಥುನ: ಭಾರತ ಮೂಲದ ವೈದ್ಯನ ಬಂಧನ
ವಿಮಾನ
ನಯನಾ ರಾಜೀವ್
|

Updated on:Aug 13, 2023 | 9:13 AM

Share

ವಿಮಾನದಲ್ಲಿ ಅಪ್ರಾಪ್ತ ಬಾಲಕಿ ಎದುರು ಹಸ್ತಮೈಥುನ ಮಾಡಿಕೊಂಡ ಭಾರತ ಮೂಲದ ವೈದ್ಯನನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. 14 ವರ್ಷದ ಬಾಲಕಿ ಎದುರು ವಿಮಾನದಲ್ಲಿ ವೈದ್ಯ ಹಸ್ತಮೈಥುನ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಯುನೈಟೆಡ್ ಸ್ಟೇಟ್ಸ್ ಅಟಾರ್ನಿ ಕಚೇರಿಯ ಪ್ರಕಾರ, ಕಳೆದ ವರ್ಷ ಮೇ ತಿಂಗಳಲ್ಲಿ ಹೊನೊಲುಲುವಿನಿಂದ ಬೋಸ್ಟನ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಡಾ. ಸುದೀಪ್ತ ಮೊಹಾಂತಿ ಎಂದು ಗುರುತಿಸಲಾದ ವೈದ್ಯರನ್ನು ಗುರುವಾರ ಬಂಧಿಸಲಾಯಿತು. ಪ್ರಕಾರ , ಬೋಸ್ಟನ್‌ನ ಬೆತ್ ಇಸ್ರೇಲ್ ಡೀಕಾನೆಸ್ ಮೆಡಿಕಲ್ ಸೆಂಟರ್‌ನಲ್ಲಿ ಪ್ರಾಥಮಿಕ ಚಿಕಿತ್ಸಾ ವೈದ್ಯ ಡಾ ಮೊಹಾಂತಿ ಅವರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.

ಅವರು 14 ವರ್ಷದ ಬಾಲಕಿ ಪಕ್ಕ ಕುಳಿತಿದ್ದರು, ಬೆಡ್​ಶೀಟ್​ನ್ನು ಹೊದ್ದುಕೊಂಡಿದ್ದರು, ಬಳಿಕ ಬೆಡ್​ಶೀಟ್​ ಕೆಳಗೆ ಬಿದ್ದಾಗ ಅವರು ಹಸ್ತಮೈಥುನ ಮಾಡಿಕೊಳ್ಳುತ್ತಿರುವುದು  ಬಾಲಕಿಗೆ ಗೊತ್ತಾಗಿದೆ ಆಕೆಗೆ ಹೇಸಿಗೆಯಾದಂತಾಗಿ ಬೇರೆ ಸೀಟಿನಲ್ಲಿ ಹೋಗಿ ಕೂತಿದ್ದಾಳೆ.

ಮತ್ತಷ್ಟು ಓದಿ: Video News: ದೆಹಲಿ ಮೆಟ್ರೋದಲ್ಲಿ ಹಸ್ತಮೈಥುನ ಮಾಡಿಕೊಂಡ ಯುವಕ, ತೀವ್ರ ಕಳವಳ ವ್ಯಕ್ತಪಡಿಸಿದ ಸ್ವಾತಿ ಮಲಿವಾಲ್

ಬೋಸ್ಟನ್‌ನಲ್ಲಿ ಇಳಿದ ನಂತರ, ಹುಡುಗಿ ತನ್ನ ಕುಟುಂಬಕ್ಕೆ ಘಟನೆಯ ಬಗ್ಗೆ ತಿಳಿಸಿದಳು. ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಡಾ ಮೊಹಾಂತಿ ಅವರು ತನಿಖೆಯ ಸಂದರ್ಭದಲ್ಲಿ ಆರೋಪಗಳನ್ನು ನಿರಾಕರಿಸಿದರು, ಘಟನೆಯ ಬಗ್ಗೆ ನನಗೆ ನೆನಪಿಲ್ಲ ಎಂದು ಹೇಳಿದರು.

ಡಾ ಮೊಹಾಂತಿ ಗುರುವಾರ ಫೆಡರಲ್ ನ್ಯಾಯಾಲಯಕ್ಕೆ ಹಾಜರಾದರು ಮತ್ತು ವಿಮಾನದಲ್ಲಿ ಹದಿಹರೆಯದ ಹುಡುಗಿಯ ಮುಂದೆ ಅಶ್ಲೀಲ ಕೃತ್ಯ ನಡೆಸಿದ ಆರೋಪ ಹೊರಿಸಲಾಯಿತು.

ಈ ಆರೋಪದಲ್ಲಿ 90 ದಿನಗಳ ಜೈಲು ಶಿಕ್ಷೆ, ಮತ್ತು 5,000 ಡಾಲರ್​ವರೆಗೆ ದಂಡವನ್ನು ಒಳಗೊಂಡಿರುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:10 am, Sun, 13 August 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ