AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

YouTube CEO: ಯೂಟ್ಯೂಬ್​ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ

ವಿಶ್ವದ ಅತಿ ದೊಡ್ಡ ಆನ್​ಲೈನ್ ವಿಡಿಯೋ ಪ್ಲಾಟ್​ಫಾರ್ಮ್​ ಎನಿಸಿಕೊಂಡಿರುವ ಯೂಟ್ಯೂಬ್​(YouTube)ನ ನೂತನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ(ceo)ಯಾಗಿ ಭಾರತ ಮೂಲದ ನೀಲ್ ಮೋಹನ್ ನೇಮಕಗೊಂಡಿದ್ದಾರೆ.

YouTube CEO: ಯೂಟ್ಯೂಬ್​ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ
ಯೂಟ್ಯೂಬ್​ನ ನೂತನ ಸಿಇಒ ನೀಲ್ ಮೋಹನ್Image Credit source: Economic Times
ನಯನಾ ರಾಜೀವ್
|

Updated on:Feb 17, 2023 | 7:34 AM

Share

ವಿಶ್ವದ ಅತಿ ದೊಡ್ಡ ಆನ್​ಲೈನ್ ವಿಡಿಯೋ ಪ್ಲಾಟ್​ಫಾರ್ಮ್​ ಎನಿಸಿಕೊಂಡಿರುವ ಯೂಟ್ಯೂಬ್​(YouTube)ನ ನೂತನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ(ceo)ಯಾಗಿ ಭಾರತ ಮೂಲದ ನೀಲ್ ಮೋಹನ್ ನೇಮಕಗೊಂಡಿದ್ದಾರೆ. ಯೂಟ್ಯೂಬ್‌ನ ಮುಖ್ಯ ಉತ್ಪನ್ನ ಅಧಿಕಾರಿ ನೀಲ್ ಮೋಹನ್ ಅವರು ಯೂಟ್ಯೂಬ್‌ನ ಹೊಸ ಮುಖ್ಯಸ್ಥರಾಗಲಿದ್ದಾರೆ ಎಂದು Wojcicki ಹೇಳಿದ್ದಾರೆ.

ಕಳೆದ 25 ವರ್ಷಗಳಿಂದ ಯುಟ್ಯೂಬ್​ಗೆ ಸಿಇಒ ಆಗಿದ್ದ ಸುಸಾನ್​ ಆ ಸ್ಥಾನದಿಂದ ಕೆಳಗಿಳಿದಿದ್ದು, ಈಗ ನೂತನ ಸಿಇಒ ಆಗಿ ಭಾರತ ಮೂಲಕ ಅಮೆರಿಕದ ನಿವಾಸಿ ನೀಲ್ ಮೋಹನ್ ಆಯ್ಕೆಯಾಗಿದ್ದಾರೆ. 54 ವರ್ಷದ Wojcicki ಅವರು ಕುಟುಂಬ, ಆರೋಗ್ಯ ಮತ್ತು ವೈಯಕ್ತಿಕ ಯೋಜನೆಗಳ ಬಗ್ಗೆ ನಾನು ಆಸಕ್ತಿ ಹೊಂದಿದ್ದೇನೆ ಎಂದು ಹೇಳಿದ್ದಾರೆ. ಈ ಹಿಂದೆ ಗೂಗಲ್‌ನಲ್ಲಿ ಜಾಹೀರಾತು ಉತ್ಪನ್ನಗಳಿಗೆ ಹಿರಿಯ ಉಪಾಧ್ಯಕ್ಷರಾಗಿದ್ದ ವೊಜ್ಸಿಕಿ, 2014 ರಲ್ಲಿ ಯೂಟ್ಯೂಬ್‌ನ ಸಿಇಒ ಆಗಿ ನೇಮಕಗೊಂಡರು.

ಅವರು Google ನ ಆರಂಭಿಕ ಉದ್ಯೋಗಿಗಳಲ್ಲಿ ಒಬ್ಬರಾಗಿದ್ದರು ಮತ್ತು ಸುಮಾರು 25 ವರ್ಷಗಳಿಂದ ಪೋಷಕ ಕಂಪನಿ Alphabet Inc ಜೊತೆಗೆ ಇದ್ದಾರೆ. ನೀಲ್ ಮೋಹನ್ ಅವರು 2015ರಿಂದ ಕಂಪನಿಯ ಮುಖ್ಯ ಪ್ರಾಡಕ್ಟ್​ ಅಧಿಕಾರಿಯಾಗಿದ್ದರು, 2008ರಲ್ಲಿ ಅವರು ಗೂಗಲ್​ಗೆ ಸೇರಿದ್ದರು.

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ, ಅಡೋಬ್ ಸಿಇಒ ಶಾಂತನು ನಾರಾಯಣ್ ಮತ್ತು ಐಬಿಎಂ ಸಿಇಒ ಅರವಿಂದ್ ಕೃಷ್ಣ ಸೇರಿದಂತೆ ವಿಶ್ವದ ಅನೇಕ ದೊಡ್ಡ ತಂತ್ರಜ್ಞಾನ ಕಂಪನಿಗಳನ್ನು ಪ್ರಸ್ತುತ ಭಾರತೀಯ ಮೂಲದವರೇ ನಡೆಸುತ್ತಿದ್ದಾರೆ. ನೀಲ್ ಮೋಹನ್ ಅವರು ಸ್ಟಾನ್​ಫೋರ್ಡ್​ ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಿಕ್ ಎಂಜಿನಿಯರಿಂಗ್​ನಲ್ಲಿ ಪದವೀಧರರಾಗಿದ್ದಾರೆ. ಅವರು ಮೈಕ್ರೋಸಾಫ್ಟ್​ನಲ್ಲಿ ಕೂಡ ಕೆಲಸ ಮಾಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:32 am, Fri, 17 February 23

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?